ಆಲಮೇಲ ಪ.ಪಂ. ಮಾಜಿ ಸದಸ್ಯ, ರೌಡಿ ಶೀಟರ್ ಪ್ರದೀಪ್ ಹತ್ಯೆ
Team Udayavani, Dec 3, 2021, 8:32 AM IST
ವಿಜಯಪುರ: ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ರೌಡಿ ಶೀಟರ್ ಆಗಿದ್ದ ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಪ್ರದೀಪ ಎಂಟಮಾನ್ (37 ವ) ಭೀಕರ ಹತ್ಯೆಯಾಗಿದೆ.
ಶುಕ್ರವಾರ ಬೆಳಿಗ್ಗೆ ಒಂದು ಗಂಟೆ ಸುಮಾರಿಗೆ ಆಲಮೇಲ ಪಟ್ಟಣದ ಯುಕೆಪಿ ಕ್ಯಾಂಪ್ ಬಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಪ್ರದೀಪ ಎಂಟಮಾನನನ್ನು ಹತ್ಯೆ ಮಾಡಲಾಗಿದೆ.
ಬಡಿಗೆ, ಕಲ್ಲುಗಳಿಂದ ದಾಳಿ ನಡೆಸಿರುವ ಹಂತಕರು, ತಲೆಗೆ ಬಲವಾಗಿ ಹೊಡೆದಿರುವ ಕಾರಣ ಪ್ರದೀಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಒಮಿಕ್ರಾನ್: ಉಡುಪಿಯಲ್ಲಿ ಸಕಲ ಮುನ್ನೆಚ್ಚರಿಕೆ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಇಂಡಿ ಡಿಎಸ್ಪಿ ಶ್ರೀಧರ ದೊಡ್ಡಿ, ಪರಿಶೀಲನೆ ನಡೆಸಿದ್ದಾರೆ. ಹಂತಕರ ಪತ್ತೆಗೆ ಬೆನ್ನು ಬಿದ್ದಿರುವ ಆಲಮೇಲ ಪೊಲಿಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ