ಯಡ್ರಾಮಿ ಪಪಂಗೆ ಕೂಡಿಬಾರದ ಮಹೂರ್ತ


Team Udayavani, Dec 3, 2021, 2:43 PM IST

11election

ಯಡ್ರಾಮಿ: ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದ್ದು, ನೂತನವಾಗಿ ರಚನೆಯಾದ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಯದಿರುವುದು ಪಟ್ಟಣದ ಜನತೆಗೆ ಬೇಸರ ಮೂಡಿಸಿದೆ.

ಕಳೆದ ನಾಲ್ಕು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗ ರಾಜ್ಯದ 34 ಪಪಂಗಳಿಗೆ ಚುನಾವಣೆ ಘೋಷಿಸಿ ಸಕಲ ಸಿದ್ಧತೆಯಲ್ಲೂ ತೊಡಗಿದೆ. ಆದರೆ ಕಲಬುರಗಿ ಜಿಲ್ಲೆಯ ನೂತನ ತಾಲೂಕಾಗಿ ರಚನೆಗೊಂಡ ಯಡ್ರಾಮಿ, ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೆ ಏರಿ ವರ್ಷಗಳೇ ಉರಳಿವೆ. ಪಪಂಗೆ ಆಡಳಿತಾಧಿಕಾರಿ ನೇಮಕ ಮಾಡಿದ್ದು, ಬಿಟ್ಟರೆ ಪಪಂಗೆ ಚುನಾವಣೆ ಮಾತ್ರ ನಡೆದಿಲ್ಲ. ಜನಪ್ರತಿನಿಧಿಗಳು ಇಲ್ಲದೇ ಪಪಂ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಯಡ್ರಾಮಿ ನೂತನ ಪಪಂಗೆ ಜನಪ್ರತಿನಿಧಿಗಳಾಗಿ ಪಟ್ಟಣದ ಅಭಿವೃದ್ಧಿ ಕಾರಣರಾಗಬೇಕು ಎಂಬ ಆಕಾಂಕ್ಷಿಗಳ ಕನಸು ಕನಸಾಗಿಯೇ ಉಳಿಯುವಂತಾಗಿದೆ. ಡಿ.27ರಂದು ನಡೆಯಲಿರುವ 34 ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಯಡ್ರಾಮಿ ಪಪಂಗೂ ಚುನಾವಣೆ ನಡೆಯುುತ್ತದೆ, ನೂತನ ಜನಪ್ರತಿನಿಧಿಗಳಾಗಿ ಆಯ್ಕೆಯಾಗಬಹುದು ಎಂಬ ಎಲ್ಲ ಪಕ್ಷಗಳ ಮುಖಂಡರ ಆಸೆಗೆ ತಣ್ಣೀರು ಎರೆಚಿದಂತಾಗಿದೆ.

ಈ ಕುರಿತು ಇಲ್ಲಿನ ಶಾಸಕರು, ಜನಪ್ರತಿನಿಧಿಗಳು ಪಟ್ಟಣದ ಅಭಿವೃದ್ಧಿಯನ್ನು ಮನಗಂಡು ಕೂಡಲೇ ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ನೂತನ ಪಟ್ಟಣ ಪಂಚಾಯತಿಗೂ ಚುನಾವಣೆ ನಡೆಸಲು ಮುಂದಾಗಬೇಕು. ಈ ಮೂಲಕ ಪಟ್ಟಣದ ಅಭಿವೃದ್ಧಿಗೆ ಸಹಕರಿಸಬೇಕು ಎಂಬುದು ಪ್ರಜ್ಞಾವಂತರ ಆಶಯ.

ಇದನ್ನೂ ಓದಿ:ಮಳೆ ನೀರು ಕೊಯ್ಲು ಅಭಿಯಾನ

ಈಗಾಗಲೇ ಪಟ್ಟಣವನ್ನು 11 ವಾರ್ಡ್‌ಗಳನ್ನಾಗಿ ಜಿಲ್ಲಾ ನೋಡಲ್‌ ಎಂಜಿನಿಯರ್‌ ಅವರು ವಿಂಗಡಿಸಿದ್ದಾರೆ. ಇಲ್ಲಿನ ಚುನಾವಣೆ ನಡೆಸುವ ನಿರ್ಧಾರ ಸರ್ಕಾರದ ಹಂತದಲ್ಲಿ ನಡೆಯುವಂತದ್ದು. ಎರಡನೇ ಹಂತದಲ್ಲಿ ಚುನಾವಣೆ ಘೋಷಣೆ ಆಗಬಹುದು. -ಸಂತೋಷರೆಡ್ಡಿ, ಪಪಂ ಮುಖ್ಯಾಧಿಕಾರಿ, ಯಡ್ರಾಮಿ

ಶೀಘ್ರ ಚುನಾವಣೆ ನಡೆಸಿದರೆ ಪಟ್ಟಣ ಪಂಚಾಯತಿ ಮಾಡಿದ್ದಕ್ಕೂ ಅರ್ಥವಿರುತ್ತದೆ. ಕೇವಲ ಒಬ್ಬ ಆಡಳಿತಾಧಿಕಾರಿ ಸ್ಥಳೀಯ ಸಮಸ್ಯೆಗಳ ಬಗೆಗೆ ಗಮನಹರಿಸಲು ಸಾಧ್ಯವೇ?. ಸ್ಥಳೀಯ ಸಂಸ್ಥೆಗೆ ಸಂಪೂರ್ಣ ಚುನಾಯಿತ ಪ್ರತಿನಿಧಿಗಳಿದ್ದಾಗ ಮಾತ್ರ ಪಟ್ಟಣಕ್ಕೆ ಅನುಕೂಲ ಆಗಲಿದೆ. -ಆನಂದ ಯತ್ನಾಳ, ಬಿಜೆಪಿ ಯುವ ಮುಖಂಡ

ಬೇರೆ ಕಡೆಯ ಪಪಂಗಳಿಗೆ ಇದೇ ತಿಂಗಳು ನಡೆಯುವ ಚುನಾವಣೆಯಲ್ಲಿ ಯಡ್ರಾಮಿ ಪಪಂಗೂ ಚುನಾವಣೆ ನಡೆಯುತ್ತದೆ ಎಂಬ ಕನಸು ಇತ್ತು. ಆದರೆ ಚುನಾವಣೆ ಆಗುವತನಕ ಪಟ್ಟಣದಲ್ಲಿ ಯಾವ ಕೆಲಸಗಳು ನಡೆಯಲ್ಲ. ಕೂಡಲೇ ಸರ್ಕಾರ ಪಪಂಗೆ ಚುನಾವಣೆ ಘೋಷಿಸಬೇಕು. -ನಾಗಣ್ಣ ಹಾಗರಗುಂಡಗಿ, ಕಾಂಗ್ರೆಸ್‌ ಮುಖಂಡ

-ಸಂತೋಷ ಬಿ.ನವಲಗುಂದ

ಟಾಪ್ ನ್ಯೂಸ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Casino Financial Institution Repayment Methods: A Comprehensive Guide

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.