ಎರಡು ಹೆಂಡಿರ ಸಾಂಸಾರಿಕ ಜಂಜಾಟ : ಮದ್ಯಪಾನ ಮಾಡಿ ಇಬ್ಬರ ಸಾವು


Team Udayavani, Dec 3, 2021, 7:01 PM IST

death

ಕೊರಟಗೆರೆ: ಸಾಂಸಾರಿಕ ಜೀವನದ ಏರುಪೇರಿನ ಲ್ಲಿ ಮೊದಲನೆಯದು, ಎರಡನೇ ಹೆಂಡತಿಯರು ಹೊಂದಾಣಿಕೆ ಆಗಲಿಲ್ಲ ಎಂಬ ಕಾರಣಕ್ಕೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪುರುಷರಿಬ್ಬರು ಅತೀವ ಮಧ್ಯಪಾನದಿಂದ ಸಾವನ್ನಪ್ಪಿದ್ದಾರೆ.

ಓರ್ವ ದಾರಿಮಧ್ಯೆ ಬಿದ್ದು ಸಾವನ್ನಪ್ಪಿದರೆ ಮತ್ತೊಬ್ಬ ಮದ್ಯಪಾನದ ಜೊತೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ಕೊರಟಗೆರೆ ಪಟ್ಟಣದ ಕಟ್ಟೆ ಗಣಪತಿ ಕಲ್ಯಾಣಮಂಟಪದಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿದ್ದ ಅಪ್ಪ ರೆಡ್ಡಿ ಅತಿ ಮಧ್ಯಪಾನದಿಂದ ರಸ್ತೆಬದಿಯಲ್ಲಿ ಬಿದ್ದು ಸಾವನ್ನಪ್ಪಿದರೆ ಮತ್ತೊಬ್ಬ ತೋವಿನಕೆರೆ ಹೋಬಳಿಯ ಕಬ್ಬಿಗೆರೆ ಗೊಲ್ಲರಟ್ಟಿ ಯ ಭೂತರಾಯ ಮದ್ಯಪಾನದ ಜೊತೆ ಕ್ರಿಮಿನಾಶಕ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ತಮಿಳುನಾಡು ಮೂಲದ ಅಪ್ಪ ರೆಡ್ಡಿ ಮೊದಲನೇ ಹೆಂಡತಿಯನ್ನು ತಮಿಳುನಾಡಿನಲ್ಲಿ ಬಿಟ್ಟು ಎರಡನೇ ಹೆಂಡತಿ ಗೌರಿಬಿದನೂರಿನಲ್ಲಿ ವಾಸವಿದ್ದು, ಮೊದಲ ಹಾಗೂ ಎರಡನೇ ಹೆಂಡತಿ ಇಬ್ಬರಿಂದಲೂ ಸ್ಪಂದನೆ ಸಿಗದ ಕಾರಣ ಸಾಂಸಾರಿಕ ಜೀವನದಲ್ಲಿ ಜಿಗುಪ್ಸೆಗೊಂಡು ಕೊರಟಗೆರೆ ಪಟ್ಟಣದ ಕಟ್ಟೆ ಗಣಪತಿ ಕಲ್ಯಾಣ ಮಂಟಪದಲ್ಲಿ ಕೂಲಿ ಕೆಲಸ ಮಾಡಿಕೊಂಡು ಆಶ್ರಯ ಪಡೆದಿದ್ದ. ಸಾಂಸಾರಿಕ ಜೀವನದ ಕುರಿತಾಗಿ ಜಿಗುಪ್ಸೆಯಿಂದ ಅತೀವ ಮಧ್ಯಪಾನ ಮಾಡಿ ಕೊರಟಗೆರೆ ಬೈಪಾಸ್ ನ ಪಾಳುಮನೆ ಬಳಿ ಬಿದ್ದು ಮಧ್ಯರಾತ್ರಿ ಸಾವನ್ನಪ್ಪಿರಬಹುದು ಎನ್ನಲಾಗಿದೆ.

ಮತ್ತೋರ್ವ ಭೂತರಾಯ ತೋವಿನಕೆರೆ ಹೋಬಳಿ ಕಬ್ಬಿಗೆರೆ ಗೊಲ್ಲರಟ್ಟಿ ವಾಸಿಯಾಗಿದ್ದು, ಮೊದಲನೇ ಹೆಂಡತಿ ಬುಕ್ಕಾಪಟ್ಟಣ ದಲ್ಲಿ ವಾಸವಿದ್ದು ಈಕೆಯೊಂದಿಗೆ ಮನಸ್ತಾಪ ಮಾಡಿಕೊಂಡು ಎರಡನೆಯ ಹೆಂಡತಿಯಾಗಿ ತುಮಕೂರು ತಾಲೂಕಿನ ಬೆಳ್ಳಾವಿ ಹೋಬಳಿ ಗೊಲ್ಲಹಳ್ಳಿಯ ಗೌರಮ್ಮ ನೊಂದಿಗೆ ಜೀವನ ಸಾಗಿಸುತ್ತಿದ್ದು ಕಳೆದ 2-3 ವರ್ಷಗಳಿಂದ ಅವಳಲ್ಲೂ ಹೊಂದಾಣಿಕೆಯಾಗದೆ ಗೌರಮ್ಮ ಸಹ ಬಿಟ್ಟು ಹೋದ ಕಾರಣ ಮನನೊಂದು ಮಧ್ಯಪಾನ ದೊಂದಿಗೆ ಕ್ರಿಮಿನಾಶಕ ಬೆರೆಸಿ ಆತ್ಮಹತ್ಯೆಗೆ ಯತ್ನಿಸಿ ತೋವಿನಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ತುಮಕೂರಿನ ಶ್ರೀದೇವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದಾನೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ನಾಗರಾಜ ಪ್ರತ್ಯೇಕ ಪ್ರಕರಣಗಳಲ್ಲಿ ಸ್ಥಳ ಪರಿಶೀಲನೆ ನಡೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

UV Fusion: ನಿಷ್ಕಲ್ಮಶ ಮನ ನಮ್ಮದಾಗಲಿ

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

2-uv-fusion

UV Fusion: ಆರಾಮಕ್ಕಿರಲಿ  ವಿರಾಮ…

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.