3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

ಮೂರು ವರ್ಷದ ಹಿಂದೆ ತಲೆಮರೆಸಿಕೊಂಡು ಬಳ್ಳಾರಿಯಲ್ಲಿ ನೆಲೆಸಿದ್ದ ಅಪರಾಧಿ

Team Udayavani, Dec 4, 2021, 7:59 PM IST

3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

ಚಾಮರಾಜನಗರ : ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ ಅಪರಾಧಿಯನ್ನು ಜಿಲ್ಲಾ ಪೊಲೀಸ್‌ ವಿಶೇಷ ತಂಡ ಬಂಧಿಸಿದೆ.
ನಗರದ ಗಾಳಿಪುರ ಬಡಾವಣೆಯ ರಫೀಕ್ ಅಲಿಯಾಸ್‌ ಚುಮ್ಟಿ ಎಂಬಾತನನ್ನು ಬಯಾಂಗ ವಶಕ್ಕೆ ನೀಡಲಾಗಿದೆ. ಕಳೆದ 3 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತನನ್ನು ನ.30 ರಂದು
ಬಳ್ಳಾರಿಯಲ್ಲಿ ಬಂಧಿಸಲಾಯಿತು ಎಂದು ಎಸ್ಪಿ ದಿವ್ಯಾ ಸಾರಾ ಥಾಮಸ್‌ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 6 ಮನೆ ಕಳ್ಳತನಗಳು, ಪೊಲೀಸ್‌ ವಶದಿಂದ 2 ಬಾರಿ ತಪ್ಪಿಸಿಕೊಂಡಿದ್ದು ಮತ್ತು ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಫೀಕ್ ಸಂಸಾರ ಸಮೇತ ಬಳ್ಳಾರಿಯಲ್ಲಿ ವಾಸವಾಗಿದ್ದ ಎಂದು ತಿಳಿಸಿದರು.
ರಫೀಕ್ ತನ್ನ ಸಹಚರ ಅಪ್ಸರ್‌ ಹಾಗೂ ಇತರರೊಡನೆ ಸೇರಿ ಕಳವು ಮಾಲು ಹಂಚಿಕೊಳ್ಳುವ ಸಂಬಂಧ ಗಲಾಟೆ ನಡೆದು ಹುಮಾಯೂನ್‌ ಎಂಬಾತನನ್ನು ಕೊಲೆ ಮಾಡಿದ್ದ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿ ರಫೀಕ್ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದನು.

ಇನ್ನು ಚಾ.ನಗರ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ 3, ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 1, ಗುಂಡ್ಲುಪೇಟೆ ಠಾಣೆ ವ್ಯಾಪ್ತಿಯಲ್ಲಿ 2 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಇದಲ್ಲದೆ ಚಾಮರಾಜನಗರ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ. 2013 ರಲ್ಲಿ ಗುಂಡ್ಲುಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೈಸೂರಿಗೆ ಕರೆದೊಯ್ಯುವಾಗ ನಂಜನಗೂಡಿನಲ್ಲಿ
ಪೊಲೀಸ್‌ ವಶದಿಂದ ಪರಾರಿಯಾಗಿದ್ದ ಎಂದು ವಿವರಿಸಿದರು. ಈತನ ಪತ್ತೆಗೆ ಹಿಂದೆ ರಚಿಸಲಾಗಿದ್ದ ಪೊಲೀಸ್‌ ವಿಶೇಷ ತಂಡ ತೃಪ್ತಿಕರವಾಗಿ ಕೆಲಸ ಮಾಡದ ಕಾರಣ 3 ವರ್ಷಗಳಿಂದ ತಲೆ
ಮರೆಸಿಕೊಂಡಿದ್ದ. ನಾವು ಹೊಸದಾಗಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಂದರರಾಜು, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಇನ್ಸ್‌ಪೆಕ್ಟೆರ್‌ ಗಳಾದ ಮಹೇಶ್‌, ಆನಂದ್‌, ತಾಜುದ್ದೀನ್‌ ಅವರ ನೇತೃತ್ವದ ತಂಡವನ್ನು ನವೆಂಬರ್‌ ಮೊದಲ ವಾರ ರಚಿಸಲಾಗಿತ್ತು ಎಂದರು.

ಇದನ್ನೂ ಓದಿ : ಕೋಟಿ ರೂ.ಬಿಡುಗಡೆಯಾದರೂ ಬಿಳಿಗಿರಿರಂಗನ ದೇಗುಲದಲ್ಲಿ ಕಳಪೆ ನೆಲಹಾಸು

ಈ ತಂಡ ಶೋಧನೆ ತೀವ್ರಗೊಳಿಸಿದಾಗ ಆತ ಬಳ್ಳಾರಿಯ ಹೋಟೆಲೊಂದರಲ್ಲಿ ಪರೋಟ ತಯಾರಿಕೆ ಕೆಲಸ ಮಾಡಿಕೊಂಡಿದ್ದ ಎಂಬುದನ್ನು ತಂಡ ಪತ್ತೆ ಹಚ್ಚಿತ್ತು. ಅಲ್ಲದೆ ಮೊಬೈಲ್‌ ಪೋನ್‌ ಬಳದೆ ತಲೆಮರೆಸಿಕೊಂಡಿದ್ದ ಎಂದರು.

ತಂಡಕ್ಕೆ ನಗದು ಬಹುಮಾನ: ವಿಶೇಷ ತಂಡದ ತಾಜುದ್ದೀನ್‌, ಮೋಹನ ಕುಮಾರ್‌, ಸುರೇಶ್‌ ಅವರು ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಿ ಅಲ್ಲಿನ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಆತನನ್ನು ಬಂಧಿಸಲಾಗಿದೆ. 3 ವರ್ಷ ಕಾಲ ತಲೆಮರೆಸಿ ಕೊಂಡಿದ್ದವನನ್ನ ಬಹುಬೇಗ ಪತ್ತೆ ಹಚ್ಚಿದ ತಂಡಕ್ಕೆ ನಗದು ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.