ಚಾಮರಾಜನಗರ : ತೆರಿಗೆ ಇಲಾಖೆಯ ಇಬ್ಬರು ಇನ್ಸ್ಪೆಕ್ಟರ್ಗಳು ಎಸಿಬಿ ಬಲೆಗೆ
Team Udayavani, Dec 4, 2021, 7:42 PM IST
ಚಾಮರಾಜನಗರ: ಆಟೋ ಬಿಡಿಭಾಗಗಳ ಅಂಗಡಿಯೊಂದಕ್ಕೆ ಜಿಎಸ್ಟಿಯಿಂದ ವಿನಾಯಿತಿ ನೀಡಲು 7 ಸಾವಿರ ರೂ. ಲಂಚ ಪಡೆಯುತ್ತಿದ್ದ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಇನ್ಸ್ಪೆಕ್ಟರ್ಗಳನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯ ವಾಣಿಜ್ಯ ತೆರಿಗೆ ಇನ್ಸ್ಪೆಕ್ಟರ್ಗಳಾದ ಅವಿನಾಶ್ ಹಾಗೂ ರವಿಕುಮಾರ್ ಎಸಿಬಿ ಬಲೆಗೆ ಸಿಕ್ಕಿಬಿದ್ದವರು. ತಾಲೂಕಿನ ನಾಗವಳ್ಳಿ ಗ್ರಾಮದ ವ್ಯಕ್ತಿಯೊಬ್ಬರು ಚಿಕ್ಕದಾಗಿ ವಾಹನ ಆಟೋ ಬಿಡಿಭಾಗಗಳ ಅಂಗಡಿ ಇಟ್ಟುಕೊಂಡಿದ್ದರು. ಈ ಅಂಗಡಿಗೆ ಜಿಎಸ್ಟಿ ಕಟ್ಟದೇ ಇರುವ ಬಗ್ಗೆ ದಂಡ ಕಟ್ಟುವಂತೆ ಇನ್ಸ್ಪೆಕ್ಟರ್ ಅವಿನಾಶ್ ನೋಟೀಸ್ ನೀಡಿದ್ದರು.
ದೂರುದಾರರು ನಗರದಲ್ಲಿರುವ ರಾಜ್ಯ ಜಿಎಸ್ಟಿ ಕಚೇರಿಗೆ ಹೋದಾಗ ಈ ನೋಟೀಸ್ ರದ್ದು ಮಾಡಲು ಹಾಗ ಜಿಎಸ್ಟಿ ನೋಂದಣಿ ಮಾಡಿಸದೇ ಇರಲು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಕೊನೆಗೆ 7 ಸಾವಿರ ರೂ. ಗೆ ಒಪ್ಪಿಕೊಂಡಿದ್ದರು ಎಂದು ದೂರು ನೀಡಲಾಗಿತ್ತು.
ಶನಿವಾರ ಎಸಿಬಿ ಪೊಲೀಸರು ಈ ಬಗ್ಗೆ ಕಾರ್ಯಾಚರಣೆ ಕೈಗೊಂಡರು. ದೂರುದಾರರಿಂದ ತಮ್ಮ ಕಚೇರಿಯಲ್ಲಿ ವಾಣಿಜ್ಯ ತೆರಿಗೆ ಇನ್ಸ್ಪೆಕ್ಟರ್ಗಳಾದ ಅವಿನಾಶ್ ಹಾಗೂ ರವಿಕುಮಾರ್ ಅವರು 7 ಸಾವಿರ ರೂ. ಲಂಚದ ಹಣ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ