ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ


Team Udayavani, Dec 4, 2021, 8:07 PM IST

ಅಸ್ತಿತ್ವವಾದಿ ಹೋರಾಟಗಳನ್ನು ಚಲನಚಿತ್ರಗಳಲ್ಲಿ ಸೆರೆಹಿಡಿದ ಸತ್ಯಜಿತ್ ರೇ : ಮನು ಚಕ್ರವರ್ತಿ

ಮಣಿಪಾಲ : ಮಾಸ್ಟರ್ ಫಿಲ್ಮ್ ಮೇಕರ್ ಸತ್ಯಜಿತ್ ರೇ ಅವರು ಜಾಗತೀಕರಣದಿಂದ ಉದ್ಭವಿಸುವ ಸಮಸ್ಯೆಗಳ ಬಗ್ಗೆ ‘ಭವಿಷ್ಯ’ವೆನಿಸುವಂತ ಮಾತುಗಳನ್ನಾಡಿ ಮಧ್ಯಮ ವರ್ಗದ ‘ಅಸ್ತಿತ್ವವಾದಿ ಹೋರಾಟ’ಗಳನ್ನು ತಮ್ಮ ಅನೇಕ ಚಲನಚಿತ್ರಗಳಲ್ಲಿ ಸೆರೆಹಿಡಿದಿದ್ದಾರೆ ಎಂದು ರಾಷ್ಟ್ರೀಯ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಚಲನಚಿತ್ರ ವಿಮರ್ಶಕ ಪ್ರೊ.ಎನ್ ಮನು ಚಕ್ರವರ್ತಿ ಹೇಳಿದರು.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (GCPAS) ಸತ್ಯಜಿತ್ ರೇ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರೇ ಸ್ಮರಣಾರ್ಥ ಉಪನ್ಯಾಸದಲ್ಲಿ ಪ್ರೊ.ಚಕ್ರವರ್ತಿ ಮಾತನಾಡುತ್ತಿದ್ದರು. ಸತ್ಯಜಿತ್ ರೇ ಅವರ ಮಹಾನಗರ್, ನಾಯಕ್, ಪ್ರತಿಧ್ವನಿ, ಸೀಮಾಬಧ್ ಮುಂತಾದ ಅನೇಕ ಚಲನಚಿತ್ರಗಳಲ್ಲಿ ಬಂಡವಾಳಶಾಹಿ ಜಾಗತೀಕರಣದ ಸ್ವರೂಪವನ್ನು ಉಲ್ಲೇಖಿಸಿದ್ದಾರೆ ಎಂದರು.

ರೇ ಅವರ ಚಲನಚಿತ್ರವೊಂದರ ಸಂಭಾಷಣೆಯನ್ನು ಉಲ್ಲೇಖಿಸಿದ ಅವರು- ಮನುಷ್ಯ ಚಂದ್ರನ ಮೇಲೆ ಪಾದಾರ್ಪಣೆ ಮಾಡಿರುವುದಕ್ಕಿಂತಲೂ, ನ್ಯಾಯ ಮತ್ತು ಸಮಾನತೆ ಪ್ರಜ್ಞೆಯ ಉಗಮವೇ ಆಧುನಿಕ ಯುಗದ ಉನ್ನತ ಸಾಧನೆ ಎಂದು ರೇ ನಂಬಿದ್ದರು. ರೇ ಅವರ ಮಹಿಳಾ ಪಾತ್ರಗಳು ಗಟ್ಟಿತನದ ಮತ್ತು ವಿಭಿನ್ನ ಪಾತ್ರಗಳು; ವಾಸ್ತವವಾಗಿ, ಪ್ರಬಲ ಪುರುಷವಾದಿ ನಿರೂಪಣೆಗಿಂತ ಭಿನ್ನವಾದವು ಎಂದು ಹೇಳಿದರು.

ರಾಜಾರಾಮ್ ಮೋಹನ್ ರಾಯ್, ಈಶ್ವರ ಚಂದ್ರ ವಿದ್ಯಾ ಸಾಗರ್ ಮತ್ತು ಗುರುದೇವ್ ರವೀಂದ್ರನಾಥ ಠಾಗೋರ್ ಮತ್ತು ಮಹಾತ್ಮ ಗಾಂಧಿಯವರ ಬೌದ್ಧಿಕ ಪರಂಪರೆಯನ್ನು ಮೈಗೂಡಿಸಿಕೊಂಡ ರೇ ವಸಾಹತುಶಾಹಿ, ರಾಷ್ಟ್ರೀಯತೆ, ಮಹಿಳೆಯರು, ಶಿಕ್ಷಣ, ಆಧುನಿಕತೆ, ಯುದ್ಧ ಮತ್ತು ಶಾಂತಿ ಇತ್ಯಾದಿಗಳ ಬಗ್ಗೆ ತಮ್ಮದೇ ಅಭಿಪ್ರಾಯಗಳನ್ನು ರೂಪಿಸಿಕೊಂಡಿದ್ದರು. ಅವರ ಘರೆ ಬೈರೆ, ಶತ್ರಂಜ್ ಕೆ ಕಿಲಾಡಿ ಮುಂತಾದ ಚಿತ್ರಗಳಲ್ಲಿ ಅವು ಪ್ರತಿಬಿಂಬಿತವಾಗಿದೆ ಎಂದರು.

ಅಮಾನವೀಯ ಜಾಗತೀಕರಣ ಪ್ರಕ್ರಿಯೆಯಲ್ಲಿ ಸಿದ್ಧ ಪಾಲುದಾರರಾಗುತ್ತಿರುವವರನ್ನು ಟೀಕಿಸಿದ ಪ್ರೊ.ಚಕ್ರವರ್ತಿ, ರೇ ಚಲನಚಿತ್ರಗಳ ಮೂಲಕ ಅವರ ಅಭಿಪ್ರಾಯವನ್ನು ಉದಾಹರಿಸಿ, ಶೋಷಿತರ ದುಃಖದ ಭಾರದ ಶ್ರೀಮಂತಿಕೆ ಸಲ್ಲದು ಎಂದು ಹೇಳಿದರು.

ಇದನ್ನೂ ಓದಿ : 3 ವರ್ಷದ ಹಿಂದೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ತಪ್ಪಿಸಿಕೊಂಡಿದ್ದ ಅಪರಾಧಿ ಸೆರೆ

ಇದಕ್ಕೂ ಮುನ್ನ ಮಾತನಾಡಿದ ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ, ರೇ ತಮ್ಮ ಕಾಲದ ನೈಜತೆಯನ್ನು ‘ವಾಸ್ತವಿಕತೆಯನ್ನು’ ಸಿನಿಮೀಯ ವಿಧಾನದಲ್ಲಿ ಸೆರೆಹಿಡಿದು, ಮಹಾನ್ ಚಲನಚಿತ್ರ ನಿರ್ದೇಶಕರಾಗಿ ಹೊರಹೊಮ್ಮಿ, ಅಭಿಜಾತ ಕೃತಿಗಳನ್ನು ನಿರ್ಮಿಸಿದ್ದಾರೆ ಎಂದರು.

ಪ್ರೊ ಫಣಿರಾಜ್ ಮಾತನಾಡಿ ರೇ ತಮ್ಮ ಮಾನವತಾವಾದ ಮತ್ತು ಆಧುನಿಕತಾವಾದದೊಂದಿಗೆ ಸಮಕಾಲೀನರಾಗಿ ಉಳಿದಿದ್ದಾರೆ ಎಂದು ಹೇಳಿದರು.

ಮನಸ್ವಿನಿ ಶ್ರೀರಂಗಂ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಚಲನಚಿತ್ರ ಲೇಖಕಿ ಮೈಥಿಲಿ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.