ಪತಿ-ಪತ್ನಿ ಪ್ರಕರಣಗಳಿಗೆ ವರ್ಗಾವಣೆ ಸಂಕಷ್ಟ
Team Udayavani, Dec 5, 2021, 6:22 AM IST
ಬೆಂಗಳೂರು: ಯಾವುದೇ ತಾಲೂಕಿನಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.25ರಷ್ಟು ಶಿಕ್ಷಕರಿಗೆ ವರ್ಗಾವಣೆಗೆ ಶಿಕ್ಷಣ ಇಲಾಖೆ ಅವಕಾಶ ಕಲ್ಪಿಸಿದ್ದರೂ ಪತಿ-ಪತ್ನಿ ಪ್ರಕರಣಗಳಲ್ಲಿ ಹೆಚ್ಚಿನ ಮಂದಿಗೆ ಉಪಯೋಗವಾಗುತ್ತಿಲ್ಲ ಎಂದು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಇಲಾಖೆಯು ಈವರೆಗೆ ತಾಲೂಕೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಹುದ್ದೆಗಳಲ್ಲಿ ಶೇ.25ರಷ್ಟು ಮಂದಿಗೆ ವರ್ಗಾವಣೆ ಅವಕಾಶ ನೀಡಿತ್ತು. ಇತ್ತೀಚೆಗೆ ಸರಕಾರವು ಈ ನಿಯಮವನ್ನು ಬದಲಾಯಿಸಿ ಒಟ್ಟಾರೆ ಮಂಜೂರಾದ ಹುದ್ದೆಗಳಲ್ಲಿ ಶೇ.25 ಹುದ್ದೆಗಳಿಗೆ ವರ್ಗಾವಣೆಗೆ ಅನುವು ಮಾಡಿಕೊಟ್ಟಿದೆ.
ಆದರೆ, ಗ್ರಾಮೀಣ ಪ್ರದೇಶದಲ್ಲಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸೇರಿ ವಿವಿಧ 51 ತಾಲೂಕಿನಲ್ಲಿ ಪತಿ-ಪತ್ನಿಯರ ಪ್ರಕರಣಗಳಲ್ಲಿ ಶಿಕ್ಷಕರ ವರ್ಗಾವಣೆಗೆ ಅವಕಾಶ ಇಲ್ಲದಂತಾಗಿದೆ. ಪತಿ-ಪತ್ನಿಯರು ವರ್ಗಾವಣೆ ಮಾಡಿಸಿಕೊಂಡು ಒಂದೇ ತಾಲೂಕಿನಲ್ಲಿ ಕಾರ್ಯ ನಿರ್ವಹಿಸಬೇಕೆಂಬ ಉದ್ದೇಶದಿಂದ ವರ್ಗಾವಣೆ ಕೋರಿದ್ದು, ಶಿಕ್ಷಕರ ಕೊರತೆ ಇರುವುದರಿಂದ ಸರಕಾರ ಸೌಲಭ್ಯ ನೀಡಿದ್ದರೂ ಪ್ರಯೋಜನ ಇಲ್ಲದಂತಾಗಿದೆ.
ಹಿಂದಿ ಶಿಕ್ಷಕರು, ಗಣಿತ ಮತ್ತು ವಿಜ್ಞಾನ ಶಿಕ್ಷಕರ ಕೊರತೆ ಇರುವುದರಿಂದ ಈ ಶಿಕ್ಷಕರು ಸಮರ್ಪಕವಾಗಿ ವರ್ಗಾವಣೆಗೆ ಅವಕಾಶ ಸಿಗದೆ ಹಲವಾರು ಶಿಕ್ಷಕ ಪತಿ-ಪತ್ನಿಯರು ಒಂದೇ ತಾಲೂಕಿಗೆ ವರ್ಗಾವಣೆಯಾಗದೆ ದೂರ ಇರುವಂತಾಗಿದೆ.
ಶಿಕ್ಷಣ ಇಲಾಖೆಯು ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ತುಂಬದಿದ್ದರೆ, ವರ್ಗಾವಣೆ ನೀತಿಯನ್ನು ಎಷ್ಟು ಶಿಕ್ಷಕ ಸ್ನೇಹಿಯಾಗಿ ಮಾರ್ಪಡಿಸಿದರೂ ಪ್ರಯೋಜನವಿಲ್ಲ ಎಂದು ವರ್ಗಾವಣೆ ವಂಚಿತರು ಹೇಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ