ಪೊದೆಗೆ ನವಜಾತ ಶಿಶು ಎಸೆತ: ಜೋಡಿ ಬಂಧನ


Team Udayavani, Dec 4, 2021, 11:01 PM IST

ಪೊದೆಗೆ ನವಜಾತ ಶಿಶು ಎಸೆತ: ಜೋಡಿ ಬಂಧನ

ಸಿದ್ದಾಪುರ: ಸಿದ್ದಾಪುರ- ಅಮಾಸೆಬೈಲು ಮುಖ್ಯರಸ್ತೆಯ ಮಚ್ಚಟ್ಟು ಗ್ರಾಮದ ಕಳಿನಜೆಡ್ಡು ವಾರಾಹಿ ಸೇತುವೆ ಬಳಿ ಡಿ. 1ರಂದು ಹುಟ್ಟಿ ಏಳೆಂಟು ದಿನಗಳಷ್ಟೇ ಆಗಿದ್ದ ಹೆಣ್ಣು ನವಜಾತ ಶಿಶುವನ್ನು ಎಸೆದು ಹೋದ ಜೋಡಿಯನ್ನು ಅಮಾಸೆಬೈಲು ಪೊಲೀಸರು ಡಿ. 4ರಂದು ಬಂಧಿಸಿದ್ದಾರೆ.

ಆರೋಪಿಗಳು ಬೈಂದೂರು ತಾಲೂಕು ಜಡ್ಕಲ್‌ ಸಮೀಪದ ಮುದೂರು ಗ್ರಾಮದ ಸತೀಶ ಪೂಜಾರಿ (43) ಮತ್ತು ರಾಧಿಕಾ (40) ದಂಪತಿಯನ್ನು ಅವರು ಕೆಲಸ ಮಾಡುತ್ತಿದ್ದ ಹೆಬ್ರಿ ಸಮೀಪದ ಕುಚ್ಚಾರು ಎಸ್ಟೇಟ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕದ್ದು ಮುಚ್ಚಿ ಮದುವೆ! :

ಆರೋಪಿಗಳು ತಾವು ಕೆಲಸ ಮಾಡುವ ಸ್ಥಳದಲ್ಲಿ ಪರಸ್ಪರ ಪ್ರೀತಿಸಿ ಒಂದು ವರ್ಷದ ಹಿಂದೆ ಯಾರಿಗೂ ತಿಳಿಯದಂತೆ ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡಿದ್ದರು ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ಆರೋಪಿಗಳಿಬ್ಬರಿಗೂ ಈ ಹಿಂದೆ ಮದುವೆಯಾಗಿದ್ದು, ಇಬ್ಬರೂ ಸಂಸಾರದಿಂದ ದೂರವಾಗಿದ್ದರು. ಸತೀಶ ಪೂಜಾರಿ ಪತ್ನಿ, ಮಕ್ಕಳನ್ನು ತೊರೆದು ಹೋಗಿದ್ದ. ರಾಧಿಕಾಳ ಪತಿ ವಿಚ್ಛೇದನ ನೀಡಿದ್ದ. ಕೆಲಸ ಮಾಡುವ ಸ್ಥಳದಲ್ಲಿ ಇವರಿಬ್ಬರ ಮಧ್ಯೆ ಪ್ರೇಮಾಂಕುರವಾಗಿ ಅನಧಿಕೃತವಾಗಿ ಮದುವೆಯೂ ಆಗಿದ್ದರು. ಅನಂತರದ ದೈಹಿಕ ಸಂಪರ್ಕದಿಂದ ರಾಧಿಕಾ ಗರ್ಭಿಣಿಯಾದ್ದರು. ಮದುವೆಯಾಗಿರುವ ವಿಷಯ ಇಬ್ಬರ ಮನೆಯವರಿಗೂ ಗೊತ್ತಿರಲಿಲ್ಲ. ಈ ಮಧ್ಯೆ ರಾಧಿಕಾ ಹೆಣ್ಣು ಮಗುವಿಗೆ ಜನ್ಮವನ್ನೂ ನೀಡಿದ್ದಳು. ತಮ್ಮ ಒಳಗುಟ್ಟು ರಟ್ಟಾಗುತ್ತದೆ ಎಂದುಕೊಂಡ ಈ ಜೋಡಿ ಮಗುವನ್ನು ವಾರಾಹಿ ಸೇತುವೆಯ ಬಳಿ ಪೊದೆಗೆ ಎಸೆದು ಹೋಗಿದ್ದರು.

ಹಾಲಾಡಿಯ ಆಸ್ಪತ್ರೆಯಲ್ಲಿ ಹೆರಿಗೆ:

ರಾಧಿಕಾಳಿಗೆ ಹಾಲಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ದಂಪತಿ ಮಗು ಬೇಡ ಎಂದು ತೀರ್ಮಾನಿಸಿ ಮಗುವನ್ನು ಕೈ ಚೀಲದಲ್ಲಿ ಹಾಕಿಕೊಂಡು ಬೈಕಿನಲ್ಲಿ ಬಂದು ಪೊದೆಗೆ ಎಸೆದು ಹೋಗಿದ್ದರು ಎನ್ನುವ ಕರುಳು ಹಿಂಡುವ ಸನ್ನಿವೇಶ ಪ್ರಾಥಮಿಕ ತನಿಖೆಯಿಂದ ಹೊರಬಿದ್ದಿದೆ. ನ. 24ಕ್ಕೆ ಹೆರಿಗೆ ಆಗಿತ್ತು. ನ. 30ಕ್ಕೆ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗಿದ್ದು, ಡಿ. 1ರಂದು ಮಗುವನ್ನು ಚೀಲದಲ್ಲಿ ಹಾಕಿ ಬೇಲಿಗೆ ಎಸೆದಿದ್ದರು. ಸಿಸಿ ಟಿವಿ ದೃಶ್ಯಾವಳಿ, ಕೆಲವು ತಾಂತ್ರಿಕ ಸಾಕ್ಷ್ಯಗಳ ಮೂಲಕ ತನಿಖೆ ನಡೆಸಿದ್ದ ಪೊಲೀಸರು 3 ದಿನಗಳ ಒಳಗೆ ಆರೋಪಿಗಳನ್ನು ಪತ್ತೆ ಮಾಡಿದ್ದಾರೆ.

ಪೊದೆಯಲ್ಲಿ ಅಳುತ್ತಿತ್ತು ಕಂದಮ್ಮ:

ಮಚ್ಚಟ್ಟು ಗ್ರಾಮದ ಮಡಿವಾಳಕಟ್ಟು ಗೀತಾ ಅವರು ವಾರಾಹಿ ಹಾಲು ಉತ್ಪಾದಕರ ಸಂಘಕ್ಕೆ ಬರುತ್ತಿರುವಾಗ ವಾರಾಹಿ ಹೊಳೆಯ ಬಳಿ ಪೊದೆಯಲ್ಲಿ ಮಗುವಿನ ಅಳುವಿನ ಧ್ವನಿ ಕೇಳಿಸಿತ್ತು. ಅವರು ಇತರರ ಸಹಾಯ ಪಡೆದು ಮುಳ್ಳಿನ ಪೊದೆಯೊಳಗಿದ್ದ ಹೆಣ್ಣು ಮಗುವನ್ನು ರಕ್ಷಣೆ ಮಾಡಿದ್ದರು. ಪೊಲೀಸರು ಕಾನೂನು ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ಕುಂದಾಪುರ ಸರಕಾರಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. ಜ್ವರದಿಂದ ಬಳಲುತ್ತಿರುವ ಮಗು ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದೆ. ಸಂಪೂರ್ಣವಾಗಿ ಮಗು ಚೇತರಿಕೆ ಕಂಡ ಮೇಲೆ ಮುಂದಿನ ಕ್ರಮ ವಹಿಸಲಾಗುತ್ತದೆ ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.