ಕರಾವಳಿ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ


Team Udayavani, Dec 5, 2021, 6:10 AM IST

ಕರಾವಳಿ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ

ವಸತಿ, ಆಹಾರ ಸಹಿತ ತನ್ನೆಲ್ಲ ಆವಶ್ಯಕತೆಗಳಿಗೆ ಮಾನವ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಮಣ್ಣನ್ನು ಅವಲಂಬಿಸಿದ್ದಾನೆ. ಮಣ್ಣಿನ ಆರೋಗ್ಯ ಮತ್ತು ಫ‌ಲವತ್ತತೆಯನ್ನು ಕಾಯ್ದುಕೊಂಡು ಅದನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ವಾಗಿಡುವುದು ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ. ಈ ನಿಟ್ಟಿನಲ್ಲಿ  ವಿಶ್ವ ಮಣ್ಣು ದಿನಾಚರಣೆ ಹೆಚ್ಚು ಮಹತ್ವ ಪಡೆದುಕೊಂಡಿದೆ. “ಮಣ್ಣಿನಲ್ಲಿನ ಲವಣಾಂಶ (ಸವುಳು)ವನ್ನು ನಿಯಂತ್ರಿಸಿ ಫ‌ಲವತ್ತತೆ ಹೆಚ್ಚಿಸಿ’ ಎಂಬ ಧ್ಯೇಯದೊಂದಿಗೆ ಈ ಬಾರಿಯ ವಿಶ್ವ ಮಣ್ಣಿನ ದಿನವನ್ನು ಆಚರಿಸ ಲಾಗುತ್ತಿದೆ.

ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಮಣ್ಣಿನಲ್ಲಿ ಪೊಟಾಶಿಯಂ ಕೊರತೆ ಕಂಡು ಬರುತ್ತಿದ್ದು ಇದು ಫ‌ಲವತ್ತತೆಯ ಮೇಲೆ ಪರಿಣಾಮ ಬೀರುತ್ತಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಮತ್ತು ವಿಜ್ಞಾನ ಕೇಂದ್ರದ ತಜ್ಞರು ಕಳೆದ 13 ವರ್ಷಗಳಲ್ಲಿ ನಡೆಸಿದ 9 ಸಾವಿರಕ್ಕೂ ಅಧಿಕ ಮಣ್ಣಿನ ಮಾದರಿಗಳ ಪರೀಕ್ಷೆಯಲ್ಲಿ ಇದು ಸಾಬೀತಾಗಿದೆ ಎಂದು ಮಣ್ಣು ವಿಜ್ಞಾನಿಗಳು ತಿಳಿಸಿದ್ದಾರೆ.

ನೈಸರ್ಗಿಕ ಸಂಪನ್ಮೂಲಗಳಲ್ಲಿ ಪ್ರಮುಖವಾದ ಮಣ್ಣನ್ನು ಸದುಪಯೋಗಪಡಿಸಿಕೊಳ್ಳದಿದ್ದಲ್ಲಿ ಭವಿಷ್ಯದಲ್ಲಿ ಆಹಾರ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ. ಮಣ್ಣಿನ ಪರೀಕ್ಷೆ ಮಾಡಿಸಿಕೊಂಡು ಮಣ್ಣಿನ ಆರೋಗ್ಯ ಕ್ಕಗನುಗುಣವಾದ ರೀತಿಯಲ್ಲಿ ಕೃಷಿ ಮಾಡುವುದು ಅಗತ್ಯವಾಗಿದೆ.

ಮಣ್ಣಿನ ಗುಣಗಳ ಪರೀಕ್ಷೆ  :

ಮಣ್ಣಿನ ಆರೋಗ್ಯಕ್ಕೆ ದೈಹಿಕ, ಜೈವಿಕ, ಭೌತಿಕ ಮತ್ತು ರಾಸಾಯನಿಕ ಅಂಶಗಳು ಪ್ರಮುಖವಾಗಿ ರುತ್ತವೆ. ಮಣ್ಣಿನಲ್ಲಿರುವ ರಸಸಾರ, ಲವಣಾಂಶ, ಸಾವಯವ ಇಂಗಾಲ, ಸಾರಜನಕ, ರಂಜಕ, ಪೊಟಾಶ್‌, ಗಂಧಕ, ಸತು, ಬೋರಾನ್‌, ಕಬ್ಬಿಣ, ಮ್ಯಾಂಗನೀಸ್‌, ತಾಮ್ರ ಈ 12 ಅಂಶಗಳನ್ನು ಪರೀಕ್ಷಿಸಿ, ವಿಶ್ಲೇಷಿಸಲಾಗುತ್ತದೆ.

ಪೊಟಾಶಿಯಂ ಕೊರತೆ ಬೆಳೆಗಳ ಮೇಲೆ ಪರಿಣಾಮ :

ಮಣ್ಣಿನಲ್ಲಿ ಪೊಟಾಶಿಯಂ ಪ್ರಮಾಣ ಕೊರತೆಯಾದಾಗ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀಳುತ್ತದೆ. ಭತ್ತ ಕೆಂಪು ಬಣ್ಣಕ್ಕೆ ತಿರುಗಿ ಇಳುವರಿ ಕಡಿಮೆಯಾದರೆ ತೆಂಗು ಮತ್ತು ಅಡಿಕೆಯಲ್ಲಿ ಚುಕ್ಕೆಗಳು ಕಾಣಿಸಿಕೊಂಡು ಕಾಯಿ ಹಂತದಲ್ಲಿ ಉದುರಲು ಶುರುವಾಗುತ್ತದೆ. ಮುಖ್ಯವಾಗಿ ಬೆಳೆಗಳಲ್ಲಿ ರೋಗ ಮತ್ತು ಕೀಟ ನಿರೋಧಕ ಶಕ್ತಿ ಕುಂದುತ್ತದೆ. ಕರಾವಳಿ ಭಾಗದ ರೈತರು ತಮ್ಮ ಕೃಷಿ ಭೂಮಿಯ ಮಣ್ಣು ಪರೀಕ್ಷೆ ಮಾಡಿಸಿಕೊಂಡು ಸಾವಯವ ಗೊಬ್ಬರ ಸಹಿತ ಪೊಟಾಶಿಯಂ ಆಧರಿತ ರಸಗೊಬ್ಬರವನ್ನು ಮಣ್ಣಿಗೆ ನೀಡಬೇಕು ಎಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ| ಜಯಪ್ರಕಾಶ್‌ ಆರ್‌. ಕೃಷಿಕರಿಗೆ ಸಲಹೆ ನೀಡುತ್ತಾರೆ.

ಹುಳಿ ಮಣ್ಣಿಗೆ ಸುಣ್ಣ ಪರಿಹಾರ :

ಕರಾವಳಿ ಭಾಗದಲ್ಲಿನ ಮಣ್ಣಿನಲ್ಲಿ ಶೇ.95ರಷ್ಟು ಹುಳಿ ಅಂಶವಿದೆ. ಹುಳಿ ಮಣ್ಣಿನಲ್ಲಿ ಕಬ್ಬಿಣದ ನಂಜಿನ ಅಂಶ ಅಧಿಕವಾಗಿರುವುದರಿಂದ ರಸಗೊಬ್ಬರ, ಸಾವಯವ ಗೊಬ್ಬರ ಎಷ್ಟೇ ಹಾಕಿದರೂ ಬೆಳೆಗಳಿಗೆ ಪೋಷಕಾಂಶಗಳು ಸಮರ್ಪಕವಾಗಿ ಸಿಗದೆ ಇಳುವರಿ ಕುಂಠಿತವಾಗುತ್ತದೆ. ಮಣ್ಣಿಗೆ ಸುಣ್ಣ ಬಳಕೆ ಮಾಡುವುದರಿಂದ ಇದಕ್ಕೆ ಪರಿಹಾರ ಸಾಧ್ಯ.

ಮಣ್ಣಿಗೆ ಏನೇನು ಹಾನಿಕಾರಕ?:

ಅವೈಜ್ಞಾ ನಿಕ ಮಾದರಿಯಲ್ಲಿ ಮತ್ತು ಅತೀ ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಬಳಕೆ, ಕರಾವಳಿ, ಮಲೆನಾಡು ಭಾಗದಲ್ಲಿ ಮಣ್ಣಿನ ಸವಕಳಿ ಹೆಚ್ಚಳ, ಕಾರ್ಖಾನೆ, ಪ್ಲಾಸ್ಟಿಕ್‌ ತ್ಯಾಜ್ಯಗಳು ಮಣ್ಣಿಗೆ ಸೇರ್ಪಡೆಗೊಳ್ಳುತ್ತಿರುವುದು, ಬ್ಯಾಟರಿ ವೇಸ್ಟ್‌ಗಳ ಅವೈಜ್ಞಾನಿಕ ವಿಲೇವಾರಿ ಮತ್ತಿತರ ಅಂಶಗಳು ಮಣ್ಣಿನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಣ್ಣಿನ ಉತ್ತಮ ಆರೋಗ್ಯಕ್ಕೆ ಎರೆಹುಳ ಗೊಬ್ಬರ, ಕುರಿ ಗೊಬ್ಬರ, ಎಲೆ ಗೊಬ್ಬರ, ವ್ಯವಸ್ಥಿತವಾಗಿ ಕಂಪೋಸ್ಟ್‌ ಮಾಡಿದ ಹಸಿ ತ್ಯಾಜ್ಯಗಳ ಗೊಬ್ಬರದಿಂದ ಸಾವಯವ ಮಣ್ಣು ರೂಪುಗೊಳ್ಳುತ್ತದೆ. ಮಣ್ಣಿನ ಸವಕಳಿ ತಡೆಗಟ್ಟಲು ಭೂಮಿಯನ್ನು ಅದರಲ್ಲೂ ಮುಖ್ಯವಾಗಿ ಕೃಷಿ ಜಮೀನನ್ನು ಪಾಳು ಬಿಡದೆ ಹುಲ್ಲುಗಾವಲು, ಹೊದಿಕೆ ಬೆಳೆಗಳು, ಗಿಡಮರಗಳನ್ನು ಬೆಳೆಸಬೇಕು.

 

ಅವಿನ್‌ ಶೆಟ್ಟಿ

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.