ತಿಪ್ಪೆ ಗುಂಡಿ ಕಸದಲ್ಲೂ ಬಿಜೆಪಿ ದುಡ್ದು ಹೊಡೆಯುತ್ತಿದೆ: ಮಧು ಬಂಗಾರಪ್ಪ
Team Udayavani, Dec 5, 2021, 8:13 PM IST
ಶಿರಸಿ: ಗ್ರಾಮ ಪಂಚಾಯ್ತಿಗಳ ಮೂಲಕ ತಿಪ್ಪೆಗುಂಡಿಗೆ ಹಾಕುವ ಕಸದಲ್ಲೂ ಹಣ ಹೊಡೆಯುವ ಕಾರ್ಯ ಬಿಜೆಪಿ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಆರೋಪಿಸಿದರು.
ರವಿವಾರ ಅವರು ಚನ್ನಾಪುರ ಕೆರೆ ಸಮೀಪದಲ್ಲಿ ಭೀಮಣ್ಣ ನಾಯ್ಕ ಅವರ ಪರವಾಗಿ ಮಾತನಾಡಿ, ಗ್ರಾಮ ಪಂಚಾಯತ್ ಹಣದಲ್ಲಿ ಬಿಜೆಪಿ ಪರ್ಸಂಟೇಜ್ ಹೊಡೆಯುತ್ತಿದೆ. ಅದಕ್ಕಾಗಿ ಕಸದಲ್ಲೂ ಹಣ ಮಾಡಲು ಹೊರಟಿದೆ ಎಂದರು.
ಈಗಿನ ಸರಕಾರ ಒಂದೇ ಒಂದು ಮನೆ ಕೊಟ್ಟಿಲ್ಲ. ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂಬ ವಾತಾವರಣ ಇದೆ ಎಂದರು.
ಬಿಜೆಪಿ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದ ಅವರು, ಬಂಗಾರಪ್ಪ ಅವರು ಇಂದು ಇಲ್ಲದೇ ಇರಬಹುದು. ಆದರೆ, ಅವರ ಕೊಡುಗೆಗಳು ರೈತರಿಗೆ, ಬಡವರಿಗೆ ನೆರವಾಗಿದೆ. ಸಿದ್ದರಾಮಯ್ಯ ಅವರು ಹಸಿದ ಹೊಟ್ಟೆಗೆ ಅನ್ನ ಕೊಟ್ಟವರು ಎಂದರು.
ಧರ್ಮ ಜಾತಿಯ ಹೆಸರಿನಲ್ಲಿ ಬಿಜೆಪಿ ಒಡೆದು ಆಳುತ್ತಿದೆ. ಹಿಂದೆ ಬ್ರಿಟೀಷ್ ಮಾಡಿದ್ದು ಈಗ ಬಿಜೆಪಿ ಮಾಡುತ್ತಿದೆ ಎಂದರು.
ಮೂರನೇ ಸಲ ಭೀಮಣ್ಣ ಸ್ಪರ್ಧೆಗೆ ನಿಂತಿದ್ದಾರೆ. ಅವರಿಗೆ ಈ ಬಾರಿ ಶಿಕ್ಷೆ ಕೊಡಬೇಡಿ. ಬಂಗಾರಪ್ಪ ಅವರಿಗೆ ಭೀಮಣ್ಣ ಅವರು ವಿಧಾನ ಸಭೆಗೆ ಹೋಗಬೇಕು ಎಂಬುದು ಕನಸಿತ್ತು. ಅದನ್ನು ನನಸಾಗಿಸುವ ಕಾರ್ಯ ಆಗಬೇಕು ಎಂದರು.
ಈ ವೇಳೆ ಸತೀಶ ನಾಯ್ಕ, ಎಸ್.ಕೆ.ಭಾಗವತ್, ಜಗದೀಶ ಗೌಡ, ಪ್ರದೀಪ ಶೆಟ್ಟಿ, ಅಬ್ಬಾಸ ತೋನಸೆ, ಸಿ.ಏಪ್.ನಾಯ್ಕ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ