ಆರ್ಥಿಕ ಸಾಕ್ಷರತಾ ಕೇಂದ್ರ ಉದ್ಘಾಟನೆ
Team Udayavani, Dec 6, 2021, 1:19 PM IST
ಚಾಮರಾಜನಗರ: ಭಾರತೀಯ ರಿಸರ್ವ್ಬ್ಯಾಂಕ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ಧಾನ್ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಕೊಳ್ಳೆಗಾಲದಲ್ಲಿ ಆರ್ಥಿಕ ಸಾಕ್ಷರತಾ ಕೇಂದ್ರವನ್ನು ಉದ್ಘಾಟಿಸಿದರು.
ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ಶ್ರೀಕಾಂತ್ ಉದ್ಘಾಟಿಸಿ ಮಾತನಾಡಿ, ಜನ ಆರ್ಥಿಕವಾಗಿ ಸಾಕ್ಷರರಾದರೆ ದೇಶ ಬೇಗ ಅಭಿವೃದ್ಧಿ ಹೊಂದಲು ಸಹಾಯಕವಾಗುತ್ತದೆ. ಹೀಗಾಗಿ ಎಲ್ಲರೂ ಆರ್ಥಿಕಸಾಕ್ಷರತಾ ಕೇಂದ್ರದ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಚಾಮರಾಜನಗರ ಎಸ್ಬಿಐ ರುಡ್ಸೆಟಿನಿರ್ದೇಶಕ ಅರುಣಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ವಿವಿಧಬಗೆಯ ತರಬೇತಿ ಅವಶ್ಯಕತೆ ಇದ್ದುಪ್ರಮುಖವಾಗಿ ಆರ್ಥಿಕ ಅಂಶಗಳ ಬಗ್ಗೆ ತರಬೇತಿ ಅವಶ್ಯವಿದ್ದು ಈ ಕೇಂದ್ರಗಳು ಆ ಕಾರ್ಯ ನಿರ್ವಹಿಸಲಿದೆ ಎಂದರು.
ಧಾನ್ ಫೌಂಡೇಷನ್ ಮೈಸೂರು ವಲಯ ಸಂಯೋಜಕ ಶಂಕರ್ ಪ್ರಸಾದ್ಮಾತನಾಡಿ, ಧಾನ್ ಸಂಸ್ಥೆ ಭಾರತದಾದ್ಯಂತ ಕಳೆದ 30 ವರ್ಷಗಳಿಂದ ವಿವಿಧ ಜನೋ ಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಮಾಡುತ್ತಿದ್ದು ಈ ಆರ್ಥಿಕ ಸಾಕ್ಷರತಾಕೇಂದ್ರಗಳ ಮೂಲಕ ಇನ್ನೂ ಹೆಚ್ಚಿನ ಜನರನ್ನು ತಲುಪಲು ಸಹಕಾರಿ ಎಂದರು.
ಆರ್ಥಿಕ ಸಾಕ್ಷರತಾ ಯೋಜನೆ ಪ್ರಾದೇಶಿಕ ಸಂಯೋಜಕ ನಾರಾಯಣ ಹೆಗಡೆ ಮಾತನಾಡಿ, ಕೊಳ್ಳೇಗಾಲ ಆರ್ಥಿಕ ಸಾಕ್ಷರತಾ ಕೇಂದ್ರ ಕೊಳ್ಳೇಗಾಲ, ಹನೂರು ಹಾಗೂ ರಾಮಾಪುರ ಭಾಗದ 50 ಪ್ರತಿಶತ ಹಳ್ಳಿಗಳ 30 ಪ್ರತಿಶತ ವಯಸ್ಕ ಜನಸಂಖ್ಯೆಗೆ ಮುಂದಿನ 3 ವರ್ಷ ಆರ್ಥಿಕ ಸಾಕ್ಷರತೆ ಮೂಡಿಸಲಿದೆ ಎಂದರು. ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ನ ಅಶ್ವಿನ್ ಕುಮಾರ್, ಬ್ಯಾಂಕ್ ಆಫ್ ಇಂಡಿಯಾದ ಪ್ರಕಾಶ್,ಧಾನ್ ಫೌಂಡೇಷನ್ ನ ಹುಸೇನ್, ಪ್ರಭುಶಂಕರ್, ಭಾಗ್ಯಾ, ಶಿವಮೂರ್ತಿ, ಸುಮನ್,ಪ್ರಶಾಂತ್, ಪವಿತ್ರಾ, ಕವಿತಾ ಹಾಗೂ ವಿವಿಧ ಸ್ವಯಂಸೇವಾ ಸಂಘದ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ