ಕಾರ್ಮಿಕ ಕಲ್ಯಾಣ ಮಂಡಳಿ ರಕ್ಷಣೆಗೆ ಆಗ್ರಹ


Team Udayavani, Dec 6, 2021, 2:17 PM IST

17union

ರಾಯಚೂರು: ಕಾನೂನುಬದ್ಧ ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸಬೇಕು, ಕಟ್ಟಡ ಉದ್ಯಮವನ್ನು ರಕ್ಷಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟಿಸಿದರು.

ಈ ಕುರಿತು ಜಿಲ್ಲಾಡಳಿತದ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿ, ದೇಶದ ಕಟ್ಟಡ ನಿರ್ಮಾಣ ವಲಯವು ಕೇಂದ್ರ ಸರ್ಕಾರ ಜಾರಿಗೊಳಿಸಿದ ನೋಟು ಅಮಾನ್ಯಿàಕರಣ ಬಳಿಕ ಜಾರಿ ಮಾಡಿದ ಸರಕು ಸೇವಾ ತೆರಿಗೆ ನೀತಿಯಿಂದ ತೀವ್ರ ಬಿಕ್ಕಟ್ಟಿಗೆ ಸಿಲುಕಿತ್ತು. ಕೊರೊನಾ ಬಿಕ್ಕಟ್ಟಿಗೆ ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ. ಕೊರೊನಾ ಮುಗಿದ ವರ್ಷ ಕಳೆಯುತ್ತ ಬಂದರೂ ಕಾರ್ಮಿಕರ ಸಂಕಷ್ಟಗಳು ಮಾತ್ರ ಈಡೇರಿಲ್ಲ ಎಂದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾನೂನು 1996 ಹಾಗೂ ಸೆಸ್‌ ಕಾನೂನನ್ನು ಪುನಃ ಸ್ಥಾಪಿಸಬೇಕು. ಅರ್ಜಿ ಹಾಕಿದ ಎಲ್ಲರಿಗೂ ಕೂಡಲೇ 3,000 ರೂ. ಲಾಕ್‌ಡೌನ್‌ ನಗದು ಪರಿಹಾರ ಪಾವತಿಸಬೇಕು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಶೈಕ್ಷಣಿಕ ಸಹಾಯಧನ ತಂತ್ರಾಂಶ ಕೂಡಲೇ ಆರಂಭಿಸಿ ಅರ್ಜಿಗಳ ವಿಳಂಬ ವಿಲೇವಾರಿ ನಿಲ್ಲಿಸಬೇಕು. ಮದುವೆ ಸಹಾಯಧನ ವಿಳಂಬ ಮತ್ತು ಬಾಂಡ್‌ ವಿತರಣೆ ಸರಿಪಡಿಸಿ ಸಹಜ ಮರಣ ಪರಿಹಾರದ ಮೊತ್ತವನ್ನು 2 ಲಕ್ಷ ರೂ. ಗೆ ಹೆಚ್ಚಿಸಬೇಕು. ಅಪಘಾತ ಮರಣ ಪರಿಹಾರದ ಮೊತ್ತವನ್ನು 10 ಲಕ್ಷ ರೂ. ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ತೆರಿಗೆ ಭತ್ಯೆಯನ್ನು ಪುರುಷ ಫಲಾನುಭವಿಯ ಪತ್ನಿಗೂ ವಿಸ್ತರಿಸಬೇಕು. ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಸಹಾಯಧನ ಜಾರಿಗೊಳಿಸಬೇಕು. ವೈದ್ಯಕೀಯ ಸಹಾಯಧನ ಹೆಚ್ಚಿಸಿ ಬಾಕಿ ಇರುವ ವೈದ್ಯಕೀಯ ಅರ್ಜಿಗಳು ಇತ್ಯರ್ಥಗೊಳಿಸಬೇಕು. ರೇಷನ್‌ ಕಿಟ್‌, ಟೂಲ್‌ಕಿಟ್‌, ಸುರಕ್ಷ ಕಿಟ್‌, ಬೂಸ್ಟರ್‌ಕಿಟ್‌ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡದಿರುವುದು ಹಾಗೂ ಮಂಡಳಿಯ ನಿಯಮಾವಳಿ, ಸುಪ್ರೀಂ ಕೋರ್ಟ್‌ ಹಾಗೂ ಕೇಂದ್ರ ಕಾರ್ಮಿಕ ಇಲಾಖೆ ನಿರ್ದೇಶನ ಉಲ್ಲಂಘನೆ ಈ ವಿಚಾರದಲ್ಲಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ನೋಂದಣಿಗೆ ಪ್ರತ್ಯೇಕ ಐಡಿ ಜಾರಿಗೊಳಿಸಬೇಕು. ಕಲ್ಯಾಣ ಮಂಡಳಿಯಲ್ಲಿ ಸಿಐಟಿಯುಗೆ ಕಾರ್ಮಿಕ ಪ್ರಾತಿನಿಧ್ಯ ನೀಡಬೇಕು. ಮಂಡಳಿ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.

ಕಟ್ಟಡ ಕಾರ್ಮಿಕರ ಸಂಘದ ಸಂಚಾಲಕ ಡಿ.ಎಸ್‌. ಶರಣ ಬಸವ, ಸಿಐಟಿಯು ಜಿಲ್ಲಾಧ್ಯಕ್ಷ ವರಲಕ್ಷ್ಮೀ, ಮುಖಂಡರಾದ ರಂಗಮ್ಮ ಅನ್ವರ್‌, ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಲಕ್ಷ್ಮೀ, ಮುನಿಯಮ್ಮ, ಮಾರೆಮ್ಮ, ತಿಮಲಮ್ಮ, ಬಸಮ್ಮ, ಪುಷ್ಪ, ಪದ್ದಮ್ಮ, ಸುಲೋಚನಾ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.