ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ಯುವಕ
Team Udayavani, Dec 6, 2021, 2:22 PM IST
ಕೆ.ಆರ್.ಪೇಟೆ : ಧಾರಾಕಾರ ಮಳೆಗೆ ಹಳ್ಳದಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಯುವಕನೊಬ್ಬನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ತಾಲೂಕಿನ ಸಾರಂಗಿ ಮತ್ತು ಶ್ಯಾರಹಳ್ಳಿ ಮಧ್ಯೆ ಇರುವ ಹೇಮಾವತಿ ಮೇಲ್ಗಾಲುವೆ ಸೇತುವೆ ಬಳಿ ಶನಿವಾರ ರಾತ್ರಿ ನಡೆದಿದೆ.
ಕೈಗೋನಹಳ್ಳಿಯ ಶಿವಲಿಂಗೇಗೌಡ ಅವರ ಮಗ ಉದಯ್ (30) ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿರುವ ನತದೃಷ್ಟ.
ಬೈಕ್ ಸಮೇತ ಕೊಚ್ಚಿಹೋದ: ಮೃತ ಉದಯ್ ಮಲ್ಲೇನಹಳ್ಳಿಯ ತನ್ನ ಸಹೋದರಿಯ ಮನೆಗೆ ಹೋಗಿ ವಾಪಸ್ ಬರುತ್ತಿದ್ದಾಗ ಜೋರಾಗಿ ಮಳೆ ಬಂದಿದೆ. ಮಳೆ ಸ್ವಲ್ಪ ಕಡಿಮೆಯಾದಾಗ ಊರಿಗೆ ಹೋಗಿ ಬಿಡೋಣ ಎಂದು ಬೈಕ್ನಲ್ಲಿ ಬರುತ್ತಿದ್ದಾಗಸಾರಂಗಿ ಹೇಮಾವತಿ ಮೇಲ್ಗಾಲುವೆಯ ಕೆಳ ಭಾಗಇರುವ ಹಳ್ಳದಲ್ಲಿ ಪ್ರವಾಹದ ಮಾದರಿಯಲ್ಲಿನೀರು ಉಕ್ಕಿ ಹರಿದ ಪರಿಣಾಮ ಉದಯ್ ಬೈಕ್ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ವಿಷಯ ತಿಳಿದ ತಕ್ಷಣ ಕೆ.ಆರ್.ಪೇಟೆ ಅಗ್ನಿಶಾಮಕ ಠಾಣೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ ಬೈಕ್ ಪತ್ತೆಯಾಗಿದೆ. ಆದರೆ ಉದಯ್ ಶವ ಪತ್ತೆಯಾಗಿರುವುದಿಲ್ಲ. ರಾತ್ರಿಯಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಿ ಭಾನುವಾರಸಂಜೆಯವರೆಗೂ ಕಾರ್ಯಾಚರಣೆ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ. ಕತ್ತಲಾದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದು, ಸೋಮವಾರ ಶವ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಯಲಿದೆ.
ಸೇತುವೆ ನಿರ್ಮಿಸಲು ಬೇಡಿಕೆ: ಸದರಿ ಮಾರ್ಗದಲ್ಲಿ ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಶ್ಯಾರಹಳ್ಳಿ, ಗೊರವಿ, ಹೆತ್ತಗೋನಹಳ್ಳಿಗ್ರಾಮಗಳಿಗೆ ಹೋಗುವಸಾರಿಗೆ ಬಸ್ಗಳು ಇದೇಮಾರ್ಗವಾಗಿ ಓಡಾಡುತ್ತವೆ. ಹಾಗಾಗಿ ಕೂಡಲೇ ಈ ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಿಸಬೇಕು ಎಂಬುದುಈ ಮಾರ್ಗದ ಪ್ರಯಾಣಿಕರ ಹತ್ತಾರು ವರ್ಷಗಳ ಒತ್ತಾಯವಾಗಿದೆ.
ಇದೇ ಕೈಗೋನಹಳ್ಳಿ ಗ್ರಾಮದವರಾದ ಸಚಿವ ನಾರಾಯಣಗೌಡ ಅವರು ಕೂಡಲೇ ಇಲ್ಲಿ ಸೇತುವೆನಿರ್ಮಿಸಿಕೊಡಲು ಸೂಕ್ತ ಕ್ರಮ ವಹಿಸಬೇಕು. ಈ ಮೂಲಕ ಮಳೆಗಾಲದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ವಾಹನಗಳು ಓಡಾಡಲುಆಗುತ್ತಿರುವ ತೊಂದರೆ ತಪ್ಪಿಸಬೇಕು ಎಂದು ಸದರಿಮಾರ್ಗದ ಪ್ರಯಾಣಿಕರು ಸಚಿವರನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು