ಬಂಟ್ವಾಳ : ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದು ಪ್ರಪಾತಕ್ಕೆ ಉರುಳಿದ ಕಾರು, ಇಬ್ಬರು ಗಂಭೀರ
Team Udayavani, Dec 6, 2021, 6:50 PM IST
ಬಂಟ್ವಾಳ: ಬಸ್ಸಿನಿಂದ ಇಳಿದು ಮನೆಯ ಕಡೆಗೆ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಮಹಮ್ಮದ್ ಸಲೀಂ ಹಾಗೂ ಸಿಂಚನ ಗಾಯಗೊಂಡ ವಿದ್ಯಾರ್ಥಿಗಳು.
ಸಜೀಪ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಬಸ್ ನಿಂದ ಇಳಿದು ಮನೆಗೆ ತೆರಳುವ ವೇಳೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಬಸ್ ನಿಲ್ದಾಣದಿಂದ ಸ್ವಲ್ಪ ಮುಂದೆ ಚಾಲಕನ ಅಜಾಗರೂಕತೆಯಿಂದ ಕಾರು ವಿದ್ಯಾರ್ಥಿಗಳ ಮೇಲೆ ಹರಿದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.
ಈ ಘಟನೆಯಿಂದ ವಿದ್ಯಾರ್ಥಿ ಮಹಮ್ಮದ್ ಸಲೀಂ ಗಂಭೀರ ವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸಿಂಚನ ಎಂಬ ವಿದ್ಯಾರ್ಥಿನಿಗೂ ಗಾಯವಾಗಿದ್ದು ಅವಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಪಾತಕ್ಕೆ ಉರುಳಿದ ಕಾರನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದೆ. ಕಾರು ಸಂಪೂರ್ಣ ಜಖಂ ಗೊಂಡಿದೆಯಾದರೂ ಕಾರಿನಲ್ಲಿದ್ದ ಚಾಲಕ ಪ್ರಯಾಣಿಕರಿಗೆ ಯಾವುದೇ ಗಾಯವಾಗಿಲ್ಲ.
ಇದನ್ನೂ ಓದಿ : ನಾನು ಸತ್ತರೆ ಮಣ್ಣಿಗೆ ಬರಬೇಡ ಎಂದು ಅಣ್ಣನಿಗೆ ಹೇಳಿದ್ದೇನೆ :ಸಂಸದ ಜಿಗಜಿಣಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ