ಎಂಎಸ್‌ಪಿಗೆ ಕಾನೂನು ಬಲ ನೀಡಿ; ಪಿ.ಎಚ್‌.ನೀರಲಕೇರಿ

ಯಾವುದೇ ಕಾಮಗಾರಿಗೆ ಇ-ಟೆಂಡರ್‌ ಕರೆಯದೆ ಪಾರದರ್ಶಕ ಕಾಯ್ದೆ ಉಲ್ಲಂಘಿಸಲಾಗಿದೆ.

Team Udayavani, Dec 7, 2021, 5:50 PM IST

ಎಂಎಸ್‌ಪಿಗೆ ಕಾನೂನು ಬಲ ನೀಡಿ; ಪಿ.ಎಚ್‌.ನೀರಲಕೇರಿ

ಹುಬ್ಬಳ್ಳಿ: ರೈತರ ವಿಚಾರದಲ್ಲಿ ಕೇವಲ ಭಾಷಣ- ಹೇಳಿಕೆಗಳಲ್ಲಿ ಮಾತನಾಡಿದರೆ ಪ್ರಯೋಜನವಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಕೂಡಲೇ ಕನಿಷ್ಠ ಬೆಂಬಲ ಬೆಲೆ(ಎಎಸ್‌ಪಿ)ಗೆ ಪ್ರಬಲ ಕಾಯ್ದೆ ರಚಿಸುವ ಮೂಲಕ ಕಾನೂನು ಬಲ ನೀಡಲು ಮುಂದಾಗಬೇಕೆಂದು ಕಾಂಗ್ರೆಸ್‌ ಮುಖಂಡ ಹಾಗೂ ವಕೀಲ ಪಿ.ಎಚ್‌.ನೀರಲಕೇರಿ ಒತ್ತಾಯಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರಕಾರ ಎಂಎಸ್‌ಪಿ ಘೋಷಣೆ ಮಾಡುತ್ತದೆ. ಆದರೆ ಮಾರುಕಟ್ಟೆಗಳಲ್ಲಿ ಎಂಎಸ್‌ಪಿಗಿಂತ ಕಡಿಮೆ ದರಕ್ಕೆ ಕೃಷಿ ಉತ್ಪನ್ನಗಳ ಖರೀದಿ ಮಾಡಲಾಗುತ್ತಿದ್ದರೂ, ಅದರ ವಿರುದ್ಧ ಯಾವುದೇ ಕ್ರಮ ಇಲ್ಲವಾಗಿದೆ. ಇದಕ್ಕೆ ಎಂಎಸ್‌ಪಿ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಇಲ್ಲವಾಗಿದೆ. ಎಂಎಸ್‌ಪಿ ದರ ಹೆಚ್ಚಳ, ರೈತರ ಬಗ್ಗೆ ನಾವು ದೊಡ್ಡ ಕಾಳಜಿ ಹೊಂದಿದ್ದೇವೆ ಎಂಬಂತೆ ಬಿಂಬಿಸಿಕೊಳ್ಳುವ ಬಿಜೆಪಿಯವರು ಕಾಳಜಿ ಇದ್ದರೆ ಮೊದಲ ಎಂಎಸ್‌ಪಿಗೆ ಕಾನೂನು ಬಲ ನೀಡಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರಕಾರ ಕೃಷಿ ಸೇರಿದಂತೆ ಮೂರು ಮಾರಕ ಕಾಯ್ದೆಗಳನ್ನು ಸಂಸತ್ತುನಲ್ಲಿ ಯಾವುದೇ ಚರ್ಚೆ ಇಲ್ಲದೆ ಜಾರಿಗೊಳಿಸಿದ ಕೇಂದ್ರದ ವಿರುದ್ಧ, ರೈತರು ಒಂದು ವರ್ಷದವರೆಗೆ ನಿರಂತರವಾಗಿ ಹೋರಾಟದ ಫಲವಾಗಿ ಇದೀಗ ಕೇಂದ್ರ ಸರಕಾರ ಮೂರು ಕಾಯ್ದೆಗಳನ್ನು ರದ್ದು ಮಾಡಿರುವುದಾಗಿ ಘೋಷಿಸಿದೆ. ಅದು ಕೂಡ ಕನಿಷ್ಠ ಚರ್ಚೆ ಇಲ್ಲದೆಯೇ ರದ್ದುಪಡಿಸಿದೆ ಎಂದರು.

ರಾಜ್ಯದಲ್ಲಿನ ಬಿಜೆಪಿ ಸರಕಾರದಲ್ಲಿ ಶೇ.40 ಕಮೀಷನ್‌ ನೀಡಬೇಕಾಗಿದೆ ಎಂದು ಪ್ರಧಾನಿ ಕಚೇರಿಗೆ ಗುತ್ತಿಗೆದಾರರು ಪತ್ರ ಬರೆದರೂ ಇದುವರೆಗೂ ಪ್ರಧಾನಿ ಅವರಿಂದ ಒಂದೇ ಒಂದು ಹೇಳಿಕೆ ಹೊರಬಂದಿಲ್ಲ. ಬಿಜೆಪಿ ಸರಕಾರ ಸಾವಿರಾರು ಕೋಟಿ ರೂ. ಯೋಜನೆ ಜಾರಿಗೊಳಿಸಿದ್ದಾಗಿ ಹೇಳಿಕೊಳ್ಳುತ್ತಿದೆ.

ಯಾವುದೇ ಕಾಮಗಾರಿಗೆ ಇ-ಟೆಂಡರ್‌ ಕರೆಯದೆ ಪಾರದರ್ಶಕ ಕಾಯ್ದೆ ಉಲ್ಲಂಘಿಸಲಾಗಿದೆ. ರಾಜ್ಯದಲ್ಲಿ ಶಾಸಕರಿಗೆ ಸಿಆರ್‌ಇ ಅನುದಾನ ಬಿಟ್ಟರೆ ಬೇರೆ ಹಣ ಬರುತ್ತಿಲ್ಲ. ಒಟ್ಟಾರೆ ಆಡಳಿತ ಯಂತ್ರವೇ ಕುಸಿದಿದೆ ಎಂದು ಆರೋಪಿಸಿದರು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತುಗೆ ನಡೆಯುತ್ತಿರುವ ಚುನಾವಣೆಗೆ ಅವಿಭಜಿತ ಧಾರವಾಡ ಜಿಲ್ಲೆಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಲೀಂ ಅಹ್ಮದ್‌ ಅವರು ಸ್ಪರ್ಧಿಸಿದ್ದು, ಒಬ್ಬ ಉತ್ತಮ ಸಂಸದೀಯ ಪಟು ನಮ್ಮ ಪ್ರತಿನಿಧಿ ಆಗುತ್ತಿರುವುದು ಸಂತಸ ತರಿಸಿದೆ. ಪ್ರಥಮ ಪ್ರಾಶಸ್ತ್ಯ ಮತಗಳಲ್ಲಿ ಅವರು ಗೆಲ್ಲುವುದು ಖಚಿತ ಎಂದರು.

ಇದೇ ಸಂದರ್ಭದಲ್ಲಿ ಸಲೀಂ ಅಹ್ಮದ್‌ ಅವರು ನಡೆದು ಬಂದ ದಾರಿ ಎಂಬ ಕಿರು ಹೊತ್ತಿಗೆ ಬಿಡುಗಡೆ ಮಾಡಲಾಯಿತು. ಮಹಾರಾಷ್ಟ್ರದ ಮಾಜಿ ಸಚಿವ ಹನೀಸ್‌ ಅಹ್ಮದ್‌, ಕಾಂಗ್ರೆಸ್‌ ಮುಖಂಡರಾದ ಅಲ್ತಾಫ್‌ಹಳ್ಳೂರ, ಸದಾನಂದ ಡಂಗನವರ, ದಾನಪ್ಪ ಕಬ್ಬೇರ, ಸತೀಶ ಮೆಹರವಾಡೆ ಇನ್ನಿತರರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.