ಸವಾಲುಗಳನ್ನುಸಮರ್ಥವಾಗಿ ಎದುರಿಸಿ: ಡಿಸಿ ರಮೇಶ್
Team Udayavani, Dec 7, 2021, 6:29 PM IST
ಚಿಕ್ಕಮಗಳೂರು: ಮಹಿಳಾ ಪೊಲೀಸ್ ಸಿಬ್ಬಂದಿಗೆ ತಮ್ಮವೃತ್ತಿ ಜೀವನದಲ್ಲಿ ಅನೇಕ ಸವಾಲುಗಳಿವೆ. ಅವುಗಳನ್ನುಸಮರ್ಥವಾಗಿ ಎದುರಿಸಿ ಕರ್ತವ್ಯ ನಿರ್ವಹಿಸಿದಾಗವೃತ್ತಿ ಬದುಕು ಸಾರ್ಥಕತೆ ಪಡೆದುಕೊಳ್ಳುತ್ತದೆಎಂದು ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್ ಪೊಲೀಸ್ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸೋಮವಾರ ನಗರದ ರಾಮನಹಳ್ಳಿಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತುಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದಆಯೋಜಿಸಿದ್ದ 14ನೇ ತಂಡದ 5ನೇ ಮಹಿಳಾಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅನೇಕ ಕನಸುಗಳನ್ನು ಹೊತ್ತುಕೊಂಡು ಅತ್ಯಂತಶ್ರಮಪಟ್ಟು ಈ ವೃತ್ತಿಜೀವನಕ್ಕೆ ಕಾಲಿಟ್ಟಿದ್ದೀರಿ.
ನಿಮ್ಮ ಮೇಲೆ ನಿಮ್ಮ ಕುಟುಂಬ ಹಿತೈಷಿಗಳುನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ನಿರೀಕ್ಷೆಯಂತೆನಡೆದುಕೊಂಡು ಪೊಲೀಸ್ ಇಲಾಖೆ ಮತ್ತು ನಿಮ್ಮಕುಟುಂಬಕ್ಕೆ ಗೌರವ ತರಬೇಕು ಎಂದರು.ಎಸ್ಪಿ ಎಂ.ಎಚ್. ಅಕ್ಷಯ್ ಮಾತನಾಡಿ,ತರಬೇತಿಯ ನಂತರ ನೀವು ಈ ಸಮಾಜದಲ್ಲಿವೃತ್ತಿಜೀವನವನ್ನು ಪ್ರಾರಂಭಿಸುತ್ತೀರಿ. ಅಲ್ಲೀಸೂಕ್ಷ್ಮಮತಿಗಳಾಗಿ ಮತು ಕಾಳಜಿಯಿಂದ ಕರ್ತವ್ಯನಿರ್ವಹಿಸಬೇಕು. ಇಂದು ತಂತ್ರಜ್ಞಾನ ಬೆಳೆದಿದೆ.
ಜನರು ಸೂಕ್ಷ್ಮವಾಗಿ ನಮ್ಮನ್ನು ಗಮನಿಸುತ್ತಾರೆ.ಹಾಗಾಗಿ ಅತ್ಯಂತ ಶ್ರದ್ಧೆ ಮತ್ತು ನಿಷ್ಟೆಯಿಂದ ಕರ್ತವ್ಯನಿರ್ವಹಿಸಬೇಕು ಎಂದರು.ಕಾರ್ಯಕ್ರಮಕ್ಕೂ ಮುನ್ನಾ ಪ್ರಶಿಕ್ಷಣಾರ್ಥಿಗಳಿಂದಪಥಸಂಚಲ ನಡೆಯಿತು. ಭದ್ರಾ ಮೀಸಲುಅರಣ್ಯ ಉಪ ಸಂರಕ್ಷಣಾ ಧಿಕಾರಿ ಪ್ರಭಾಕರ, ಎಡಿಪಿರಾಘವೇಂದ್ರ ರಾಯ್ಕರ್, ಪೊಲೀಸ್ ತರಬೇತಿಶಾಲೆಯ ಪ್ರಾಂಶುಪಾಲೆ ಶೃತಿ, ಜಿಲ್ಲಾ ಕಾರಾಗೃಹ ಅಧಿàಕ್ಷಕ ರಾಕೇಶ್ ಕಾಂಬಳೆ, ಜಿಲ್ಲಾ ವಕೀಲರ ಸಂಘದಅಧ್ಯಕ್ಷ ವಿ.ಟಿ. ಥಾಮಸ್, ಕೃಷಿಕ ನರೇಂದ್ರ ಪೈ, ಉಪಪ್ರಾಂಶುಪಾಲ ಪ್ರಭು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ