ಪ್ರಾಯೋಗಿಕ ಅನುಷ್ಠಾನಕ್ಕೆ ಉಡುಪಿ ಜಿಲ್ಲೆ ಆಯ್ಕೆ

ವಿಪತ್ತು ನಿರ್ವಹಣೆಗೆ ಭೌಗೋಳಿಕ ತಂತ್ರಜ್ಞಾನ ಬಳಕೆ

Team Udayavani, Dec 8, 2021, 7:40 AM IST

ಪ್ರಾಯೋಗಿಕ ಅನುಷ್ಠಾನಕ್ಕೆ ಉಡುಪಿ ಜಿಲ್ಲೆ ಆಯ್ಕೆ

ಉಡುಪಿ: ಡಿಜಿಟಲ್‌ ಇಂಡಿಯಾದ ಭಾಗವಾಗಿ ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ಅಭಿವೃದ್ಧಿಪಡಿಸಲಾಗುತ್ತಿದೆ. ದೇಶದಲ್ಲಿ ಪ್ರಥಮ ಬಾರಿಗೆ ಕರ್ನಾಟಕದ 5 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಇದನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಉಡುಪಿ ಜಿಲ್ಲೆಯೂ ಇದರಲ್ಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ತಿಳಿಸಿದರು.

ವಿಪತ್ತು ಸಂದರ್ಭದಲ್ಲಿ ತುರ್ತು ಪರಿಹಾರ ಮತ್ತು ಸಂಪನ್ಮೂಲ ಕ್ರೋಡೀಕರಣ, ಉಪಕರಣಗಳು ಮತ್ತು ಮಾನವ ಸಂಪನ್ಮೂಲ ಕ್ರಮ ಗಳನ್ನು ಕೈಗೊಳ್ಳಲು ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ನಕ್ಷೆ ಮತ್ತು ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ಅತ್ಯಂತ ಅಗತ್ಯವಿದೆ.

ಜಿಲ್ಲಾ ವಿಪತ್ತು ಪರಿಣಿತರಿಗೆ ಯೋಜನೆಯ ತಂತ್ರಾಂಶಗಳ ಬಳಕೆ ಮತ್ತು ಕಾರ್ಯವಿಧಾನಗಳ ಬಗ್ಗೆ ಈಗಾಗಲೇ ತರಬೇತಿ ನೀಡಲಾಗಿದೆ. ಜಿಲ್ಲೆಯ ಎಲ್ಲ ಅಧಿಕಾರಿ ಮತ್ತು ತುರ್ತು ರಕ್ಷಣೆಗೆ ಸಿಬಂದಿಗಳ ಮಾಹಿತಿ ಕ್ರೋಡೀ ಕರಣ ಕಾರ್ಯ ಆರಂಭಗೊಂಡಿದೆ. ಮುಖ್ಯ ತರಬೇತುದಾರರಿಂದ ಮೊಬೈಲ್‌ ತಂತ್ರಾಂಶದ ಬಳಕೆ ಕುರಿತು ತರಬೇತಿ ನಡೆಯಲಿದೆ. ಜಿಲ್ಲೆಯ ಎಲ್ಲ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೂ ಕ್ಷೇತ್ರ ಮೌಲ್ಯಮಾಪನ ಕುರಿತು ತರಬೇತಿ ನಡೆಯಲಿದೆ. 2022ರ ಜನವರಿ ಅಂತ್ಯದೊಳಗೆ ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆಯ ಕರಡು ರಚಿಸುವ ಗುರಿ ಹೊಂದಲಾಗಿದೆ.

ಯೋಜನೆಯ ಅನುಕೂಲ :
ಈ ಯೋಜನೆಯು ವಿಪತ್ತು ನಿರ್ವಹಣೆಗೆ ಸಂಬಂಧಪಟ್ಟ ಇಲಾಖೆಗಳ ಮಾಹಿತಿ, ದತ್ತಾಂಶ, ಸಂಪನ್ಮೂಲ ಗಳು ಹಾಗೂ ಜಿಲ್ಲಾ ಮಟ್ಟದ ವಿಪತ್ತು ಸಂಭವನೀಯ ಪ್ರದೇಶಗಳ ನಕ್ಷೆ, ವಿಪತ್ತು ನಿರ್ವಹಣೆಯಲ್ಲಿ ಪ್ರಮಾಣಿತ ವಿಪತ್ತು ಕಾರ್ಯಾಚರಣೆ ಕಾರ್ಯವಿಧಾನಗಳು, ಮಾರ್ಗಸೂಚಿ ಗಳನ್ನು ಒಳಗೊಂಡಿದೆ. ಇದಕ್ಕಾಗಿ ವಿಪತ್ತು ನಿರ್ವಹಣೆಯ ಸಂಬಂಧಪಟ್ಟ ಇಲಾಖೆಗಳು ಮತ್ತು ಅಧಿಕಾರಿಗಳು ವಿಪತ್ತು ನಿರ್ವಹಣೆಗೆ ಅಗತ್ಯವಾದ ಮಾಹಿತಿ, ದತ್ತಾಂಶಗಳ ಸಂಗ್ರಹಣೆ ಮತ್ತು ರವಾನೆ, ಸಂಯೋಜನೆಗಾಗಿ ಮೊಬೈಲ್‌ ತಂತ್ರಾಂಶ ಮತ್ತು ಅಂತರ್ಜಾಲ ತಾಣವನ್ನು ಅಭಿವೃದ್ಧಿ ಗೊಳಿಸಲಾಗಿದೆ.

ಇದನ್ನೂ ಓದಿ:ಡ್ರಗ್ಸ್‌ ಮಾರಾಟ : ಐವರು ಕೇರಳ ಮೂಲದ ವಿದ್ಯಾರ್ಥಿಗಳ ಬಂಧನ

ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಸ್ಥಳೀಯ ಪ್ರದೇಶದಲ್ಲಿ ರಕ್ಷಣೆಗೆ ಅಗತ್ಯ ವಿರುವ ಲಭ್ಯ ಸಂಪನ್ಮೂಲಗಳು, ಲಭ್ಯವಿರುವ ಸಿಬಂದಿ, ವಿಪತ್ತು ನಿರ್ವಹಣ ತರಬೇತಿ ಹೊಂದಿದ ಸ್ಥಳೀಯ ನಿವಾಸಿಗಳು, ಸಮೀಪದ ಶಾಲೆ, ಆಸ್ಪತ್ರೆ, ಅಲ್ಲಿನ ವೈದ್ಯಕೀಯ ಸೌಲಭ್ಯಗಳು ಮತ್ತು ಸಿಬಂದಿ, ಕಾಳಜಿ ಕೇಂದ್ರಗಳ ಮಾಹಿತಿ, ತುರ್ತು ಸಂದರ್ಭದಲ್ಲಿ ಸಂಪರ್ಕಿಸಬೇಕಾದ ಮೊಬೈಲ್‌ ಸಂಖ್ಯೆಗಳು ಬೆರಳ ತುದಿಯಲ್ಲಿಯೇ ಈ ಯೋಜನೆಯ ಮೂಲಕ ಲಭ್ಯವಾಗಲಿದೆ. ರಕ್ಷಣಾ ಕಾರ್ಯಗಳನ್ನು ಅತ್ಯಂತ ಶೀಘ್ರದಲ್ಲಿ ಕೈಗೊಳ್ಳಲು ಯೋಜನೆ ನೆರವಾಗಲಿದೆ ಎಂಬ ವಿವರ ನೀಡಿದ್ದಾರೆ.

ಸಾರ್ವಜನಿಕರು ಉಪಯೋಗ:
ಯೋಜನೆಗೆ ಅಗತ್ಯವಾದ ವಿವಿಧ ಇಲಾಖೆಗಳ ಅಧಿಕೃತ ಮಾಹಿತಿ ಮತ್ತು ದತ್ತಾಂಶ ಸಂಗ್ರಹಣೆಯಲ್ಲಿ ಸಮನ್ವಯ ಮತ್ತು ಮೇಲ್ವಿಚಾರಣೆ ಅತ್ಯಗತ್ಯವಾಗಿದೆ. ಮಾಹಿತಿ, ದತ್ತಾಂಶ ಸಂಗ್ರಹಣೆ ಮತ್ತು ಅವುಗಳನ್ನು ಅಧಿಕೃತಗೊಳಿಸಲು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಯೋಜನೆಯು ಸಂಪೂರ್ಣವಾಗಿ ಸಿದ್ಧಗೊಂಡ ನಂತರ, ಅದರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಸಾರ್ವಜನಿಕರೂ ಸಹ ವೀಕ್ಷಿಸುವಂತೆ ಅವಕಾಶ ಕಲ್ಪಿಸಲಾಗುವುದು. ಇದರಿಂದ ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ವಿಪತ್ತು ಸಂಭವಿಸಿದಾಗ ಲಭ್ಯವಿರುವ ಸುರಕ್ಷಾ ಉಪಕರಣಗಳು, ತುರ್ತು ಸಂದರ್ಭದಲ್ಲಿ ತೆರಳಬೇಕಾದ ಸಮೀಪದ ಸುರಕ್ಷಿತ ಸ್ಥಳಗಳು, ಅಲ್ಲಿಗೆ ತಲುಪಬೇಕಾದ ರಸ್ತೆ ಮಾರ್ಗ, ತಮ್ಮನ್ನು ಹುಡುಕಲು ಮತ್ತು ರಕ್ಷಿಸಲು ಸಂಪರ್ಕಿಸಬಹುದಾದ ಸಿಬಂದಿಗಳ ಮಾಹಿತಿ ಪಡೆಯಲು ಸಾಧ್ಯವಿದೆ ಎಂಬ ಮಾಹಿತಿ ನೀಡಿದ್ದಾರೆ.

ತುರ್ತು ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ ಎಲ್ಲ ಅತ್ಯಾವಶ್ಯಕ ಸೌಲಭ್ಯಗಳ ವಿವರ ಒಂದೇ ಕಡೆ ದೊರೆಯುವಂತೆ ಮಾಹಿತಿಗಳು ಕ್ರೋಡೀಕರಿಸುತ್ತಿದ್ದೇವೆ. ವಿಪತ್ತಿನ ಸಂದರ್ಭದಲ್ಲಿ ವಿಳಂಬವಿಲ್ಲದೇ ಶೀಘ್ರ ರಕ್ಷಣಾ ಕಾರ್ಯಚರಣೆಗೆ ಅನುಕೂಲವಾಗಲಿದೆ. ಇದಕ್ಕೆ ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ಜಿಲ್ಲಾ ವಿಪತ್ತು ನಿರ್ವಹಣೆ ಯೋಜನೆ ನೆರವು ನೀಡಲಿದೆ.
-ಕೂರ್ಮಾರಾವ್‌ ಎಂ., ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.