ಕೀರ್ತಿ ಭಟ್.. ”ಕಾಣೆಯಾದವಳ” ಹುಡುಕಾಟ ಶುರು…


Team Udayavani, Dec 8, 2021, 12:51 PM IST

ಕೀರ್ತಿ ಭಟ್.. ”ಕಾಣೆಯಾದವಳ” ಹುಡುಕಾಟ ಶುರು…

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ “ಕಾಣೆಯಾಗಿದ್ದಾಳೆ…’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಹಿರಿಯ ನಿರ್ದೇಶಕ ಸಾಯಿಪ್ರಕಾಶ್‌ ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲಾಪ್‌ ಮಾಡುವ ಮೂಲಕ ಹೊಸಬರ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

“ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗತ್ತಿರುವ, “ಕಾಣೆಯಾಗಿದ್ದಾಳೆ…’ ಚಿತ್ರಕ್ಕೆ ಆರ್‌. ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ವಿನಯ್‌ ಕಾರ್ತಿಕ್‌, ಕೀರ್ತಿ ಭಟ್‌ ಜೋಡಿಯಾಗಿ ಅಭಿನಯಿಸುತ್ತಿದ್ದು, ಉಳಿದಂತೆ ಗಿರಿಜಾ ಲೋಕೇಶ್‌, ವಿನಯಾ ಪ್ರಸಾದ್‌, ಬಿರಾದಾರ್‌, ಜಯರಾಂ, ಅಂಜನಾ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ:ಆರು ಭಾಷೆಗಳಲ್ಲಿ ತೆರೆಕಾಣುತ್ತಿದೆ ‘ಮಡ್ಡಿ’

ಮುಹೂರ್ತದ ಬಳಿಕ ಚಿತ್ರದ ಬಗ್ಗೆ ಮಾತನಾಡಿದ ಚಿತ್ರತಂಡ, “ಇದೊಂದು ಹಳ್ಳಿ ಸೊಗಡಿನ ಸಿನಿಮಾ. ಮಂಡ್ಯ ಮತ್ತು ಬೆಂಗಳೂರು ಹಿನ್ನೆಲೆಯಲ್ಲಿ ಇಡೀ ಸಿನಿಮಾ ಸಾಗುತ್ತದೆ. ಅರ್ಧ ನೈಜ ಘಟನೆ ಮತ್ತು ಅರ್ಧ ಕಾಲ್ಪನಿಕ ಕಥೆಯನ್ನು ಇಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ. ಐಎಎಸ್‌ ಮಾಡುವ ಸಲುವಾಗಿ ಹಳ್ಳಿ ಹುಡುಗಿಯೊಬ್ಬಳು ನಗರಕ್ಕೆ ಬರುತ್ತಾಳೆ. ಹೀಗೆ ಬಂದ ಹುಡುಗಿ ಹಳ್ಳಿಗೆ ವಾಪಾಸಾಗುವುದಿಲ್ಲ. ಆ ಹುಡುಗಿಯನ್ನು ಹುಡುಕಿಕೊಂಡು ಹೀರೋ ಮತ್ತವನ ಸ್ನೇಹಿತರು ಸಿಟಿಗೆ ಬರುತ್ತಾರೆ. ಮುಂದೇನಾಗುತ್ತದೆ ಅನ್ನೋದನ್ನ ಸಿನಿಮಾದಲ್ಲೇ ನೋಡಬೇಕು’ ಎಂದು ಕಥಾಹಂದರ ಎಳೆಯನ್ನು ಬಿಟ್ಟುಕೊಟ್ಟಿತು.

“ಕಾಣೆಯಾಗಿದ್ದಾಳೆ…’ ಚಿತ್ರದ ಟೈಟಲ್‌ಗೆ “ಹುಡುಕಿಕೊಟ್ಟವರಿಗೆ ಬಹುಮಾನ’ ಎಂಬ ಟ್ಯಾಗ್‌ಲೈನ್‌ ಇದೆ. ಬೆಂಗಳೂರು, ಮಂಡ್ಯ, ಸಾಗರ ಮುಂತಾದ ಕಡೆಗಳಲ್ಲಿ “ಕಾಣೆಯಾಗಿದ್ದಾಳೆ…’ ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಚಿತ್ರದ ಹಾಡುಗಳಿಗೆ ಕೌಶಿಕ್‌ ಸಂಗೀತ ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ನಾಗರಾಜ್‌ ಛಾಯಾಗ್ರಹಣ ಹಾಗೂ ಶಿವರಾಜ್‌ ಮೇಹು ಅವರ ಸಂಕಲನವಿದೆ. ಸದ್ಯ ಮುಹೂರ್ತವನ್ನು ಆಚರಿಸಿಕೊಂಡು ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡ ಮುಂದಿನ ವರ್ಷದ ಮಧ್ಯಭಾಗದಲ್ಲಿ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.