ಅರಗಿಸಿಕೊಳ್ಳಲಾಗದ ದುರಂತ


Team Udayavani, Dec 9, 2021, 6:00 AM IST

ಅರಗಿಸಿಕೊಳ್ಳಲಾಗದ ದುರಂತ

ಮೂರು ಸಶಸ್ತ್ರ ಪಡೆಗಳ ಮೊಟ್ಟ ಮೊದಲ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಅವರ ನಿಧನ ದೇಶ ಅಷ್ಟು ಸುಲಭದಲ್ಲಿ ಅರಗಿಸಿಕೊಳ್ಳಲಾಗದ ದುರಂತ. ರಕ್ಷಣ ಕ್ಷೇತ್ರದಲ್ಲಿ ಸುಧಾರಣೆಯ ಬೀಜ ಬಿತ್ತಿದ್ದ ಜ| ಬಿಪಿನ್‌ ರಾವತ್‌ ಅವರು, ಕರ್ತವ್ಯದಲ್ಲಿದ್ದಾಗಲೇ ಹೆಲಿಕಾಪ್ಟರ್‌ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಇವರ ಜತೆಗೆ ಪತ್ನಿ ಮಧುಲಿಕಾ ರಾವತ್‌ ಮತ್ತು ಕಾಪ್ಟರ್‌ ಸಿಬಂದಿಯೂ ಸೇರಿ ಒಟ್ಟು 14 ಮಂದಿಯಲ್ಲಿ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಜ| ಬಿಪಿನ್‌ ರಾವತ್‌ ಅವರಿದ್ದ ಹೆಲಿಕಾಪ್ಟರ್‌ ದುರಂತ ಹಲವು ಆತಂಕಕಾರಿ ಪ್ರಶ್ನೆಗಳನ್ನು ಎದುರಿಟ್ಟಿದೆ. ಸೇನಾ ಮುಖ್ಯಸ್ಥರು, ಪ್ರಧಾನಿ, ರಾಷ್ಟ್ರಪತಿ ಅವರನ್ನು ಹೊತ್ತೂಯ್ಯಬಲ್ಲ ಸಾಮರ್ಥ್ಯದ ಅತ್ಯಂತ ಸುರಕ್ಷಿತ ಎಂದೇ ಪರಿಗಣಿಸಲ್ಪಡುವ ಈ ಹೆಲಿಕಾಪ್ಟರ್‌ ದುರಂತಕ್ಕೀಡಾಗಿದ್ದು, ಸಾಮಾನ್ಯ ಸಂಗತಿಯಲ್ಲ. ಈ ಘಟನೆಗೆ ಏನು ಕಾರಣ ಎಂಬ ಲೆಕ್ಕಾಚಾರಗಳು, ಊಹೆಗಳು ಈಗ ಮೇಲುಗೈ ಸಾಧಿಸುತ್ತಿವೆ. ಈ ಕುರಿತು ಭಾರತೀಯ ವಾಯುದಳ ತನಿಖೆಗೆ ಆದೇಶಿಸಿದ್ದು, ಈ ದುರ್ಘ‌ಟನೆ ಹಿಂದಿನ ಸತ್ಯ ಹೊರಬೀಳುವವರೆಗೆ ದೇಶಕ್ಕೆ  ನೆಮ್ಮದಿ ಇಲ್ಲ. ಘಟನೆ ಹಿಂದೆ ವಿದ್ರೋಹಿಗಳ ಸಂಚು ಇದೆ ಎಂಬ ವ್ಯಾಖ್ಯಾನಗಳೂ ಕೇಳಿಬಂದವಾದರೂ, ಸತ್ಯಾಸತ್ಯತೆ ಹೊರಬೀಳುವ ತನಕ ಕಾಯಲೇಬೇಕು.

ಭಾರತೀಯ ಸೇನೆಯಲ್ಲಿ ಹೊಸ ಕ್ರಾಂತಿಕಾರಿ ಬದಲಾವಣೆಗಳನ್ನು ತಂದ  ಜ| ಬಿಪಿನ್‌ ರಾವತ್‌ ಅವರ ದುರಂತ ಸಾವು ಈ ದೇಶ ಇತಿಹಾಸದುದ್ದಕ್ಕೂ ಮರೆಯಲಾಗದ ಸಂಗತಿ. ಸೇನೆಗೆ ಬೇಕಾಗಿರುವ ಶಸ್ತ್ರಾಸ್ತ್ರಗಳಿಗಾಗಿ ವಿದೇಶಿ ಅವಲಂಬನೆ ಬಿಟ್ಟು, ಸ್ವದೇಶಿಯಾಗಿಯೇ ತಯಾರಿಸಬೇಕು ಎಂಬುದು ಇವರ ಮಹದಾಸೆಯಾಗಿತ್ತು. ಅಲ್ಲದೇ, ಸ್ವತಂತ್ರ ಭಾರತದಲ್ಲಿಯೇ ಮೊದಲ ಬಾರಿಗೆ ಇಂಥ ಸುಧಾರಣೆಗೆ ಜ|ರಾವತ್‌ ಅವರು ಕೈಹಾಕಿದ್ದರು.

ಇದನ್ನೂ ಓದಿ:ರಾವತ್ ಒಬ್ಬ ಅತ್ಯುತ್ತಮ ಸೈನಿಕ,ನಿಜವಾದ ದೇಶಭಕ್ತ: ಪ್ರಧಾನಿ ಮೋದಿ

2019ರ ಆರಂಭದಲ್ಲೇ ಸಿಡಿಎಸ್‌ ಅಧಿಕಾರ ವಹಿಸಿಕೊಂಡಿದ್ದ ಜ|ರಾವತ್‌ ಅವರು, ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ನಡುವಿನ ಸಮನ್ವಯಕ್ಕಾಗಿ ಶ್ರಮಿಸುತ್ತಿದ್ದರು. ಅಲ್ಲದೆ, ಈ ಮೂರು ದಳಗಳನ್ನು ಒಳಗೊಂಡ ಕಮಾಂಡ್‌ವೊಂದನ್ನು ರಚಿಸಲು ಯೋಜನೆ ರೂಪಿಸಿದ್ದರು. ಇದನ್ನು ಪೂರ್ವ ಮತ್ತು ಪಶ್ಚಿಮದ ಮುಂಚೂಣಿ ನೆಲೆಗಳಲ್ಲಿ ಸ್ಥಾಪಿಸಲು ಮುಂದಾಗಿದ್ದರು. ಅಂದರೆ, ಪಾಕಿಸ್ತಾನ ಮತ್ತು ಚೀನಾದ ಯಾವುದೇ ಚಿತಾವಣೆಗೆ ತಕ್ಕ ಎದಿರೇಟು ನೀಡುವುದು ಇವರ ಆಲೋಚನೆಯಾಗಿತ್ತು. ಸದ್ಯ ದೇಶದಲ್ಲಿ 17 ಕಮಾಂಡ್‌ಗಳಿದ್ದು, ಭಾರತೀಯ ಸೇನೆ ಮತ್ತು ವಾಯುಸೇನೆಗೆ ತಲಾ 7 ಕಮಾಂಡ್‌ಗಳು ಮತ್ತು ನೌಕಾದಳಕ್ಕೆ ಮೂರು ಕಮಾಂಡ್‌ಗಳಿವೆ.

ಇದರ ಜತೆಗೆ ಮೂರು ದಳಗಳನ್ನು ಒಳಗೊಂಡ ಥಿಯೇಟರ್‌ ಕಮಾಂಡ್‌ ರಚನೆಗೂ ಜ|ರಾವತ್‌ ಅವರು ಮುಂದಾಗಿದ್ದರು. ಅಂದರೆ ನೌಕಾದಳ ಮತ್ತು ವಾಯು ಸೇನೆಗೆ ಸಮ್ಮಿಳಿತ ಕಮಾಂಡ್‌ಗಳನ್ನು ರಚಿಸುವ ಯೋಜನೆ ರೂಪಿಸಿದ್ದರು. ಇದಕ್ಕೆ ವಾಯುಸೇನೆಯ ಒಳಗೆ ಟೀಕೆಯೂ ವ್ಯಕ್ತವಾಗಿತ್ತು. ಆದರೂ, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಜತೆಗೆ ಉತ್ತಮ ಬಾಂಧವ್ಯ ಹೊಂದಿದ್ದ ಜ|ರಾವತ್‌ ಅವರು, ನೌಕಾದಳಕ್ಕಾಗಿ ಮೊದಲ ಸಮ್ಮಿಳಿತ ಕಮಾಂಡ್‌ ರಚನೆಯ ನಿರ್ಧಾರ ಮಾಡಿದ್ದರು. ಇದು 2022ರ ಮಧ್ಯಭಾಗದಲ್ಲಿ ಜಾರಿಗೆ ಬರಬೇಕಾಗಿತ್ತು.

2016ರಲ್ಲಿ ಭಾರತ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಸರ್ಜಿಕಲ್‌ ದಾಳಿ ನಡೆಸಿದಾಗ, ಇದರ ಯೋಜನೆ ರೂಪಿಸಿದ್ದವರು ಜ|ರಾವತ್‌ ಅವರು. ಅಲ್ಲದೆ ಈಶಾನ್ಯ ಭಾರತದಲ್ಲಿನ ಉಗ್ರವಾದ ಮಟ್ಟಹಾಕುವಲ್ಲಿಯೂ ಇವರ ಪಾತ್ರ ಗಣನೀಯವಾಗಿದೆ. ಯುದ್ಧತಂತ್ರ ವಿಚಾರದಲ್ಲಿ ನಿಪುಣರಾಗಿದ್ದ ಜ|ರಾವತ್‌ ಅವರು, ಸದಾ ಹಸನ್ಮುಖೀ. ಅಂದ ಹಾಗೆ, ಇವರು ಮಾಧ್ಯಮ ಮತ್ತು ಸಂವಹನ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದರು.

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.