ಯೋಧರ ನಾಡಿನ ಮೇಲಿನ ಅಭಿಮಾನ; ಕೊಡಗಿಗೆ 3 ಬಾರಿ ಬಿಪಿನ್‌ ರಾವತ್‌ ಭೇಟಿ


Team Udayavani, Dec 9, 2021, 5:55 AM IST

ಯೋಧರ ನಾಡಿನ ಮೇಲಿನ ಅಭಿಮಾನ; ಕೊಡಗಿಗೆ 3 ಬಾರಿ ಬಿಪಿನ್‌ ರಾವತ್‌ ಭೇಟಿ

ಮಡಿಕೇರಿ: ದೇಶದ ಸೇನಾಕ್ಷೇತ್ರಕ್ಕೆ ಅತೀ ಹೆಚ್ಚು ಸೈನಿಕರನ್ನು ನೀಡಿರುವ ಹೆಗ್ಗಳಿಕೆಯ ಕೊಡಗು ಜಿಲ್ಲೆಗೆ ಭಾರತದ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ 2016, 2017 ಮತ್ತು 2020ರಲ್ಲಿ ಭೇಟಿ ನೀಡುವ ಮೂಲಕ ಯೋಧರ ನಾಡಿನ ಮೇಲಿನ ಅಭಿಮಾನವನ್ನು ತೋರಿದ್ದರು.

ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್‌ ಕೆ.ಎಸ್‌. ತಿಮ್ಮಯ್ಯ ಅವರ ಬಗ್ಗೆ ವಿಶೇಷ ಗೌರವ ಹೊಂದಿದ್ದ ರಾವತ್‌ ಕೊಡಗಿಗೆ ಬರುವ ಯಾವುದೇ ಅವಕಾಶ ತಪ್ಪಿಸಿಕೊಳ್ಳುತ್ತಿರಲಿಲ್ಲ. ಬಿಟ್ಟಂಗಾಲದಲ್ಲಿ 2016ರಲ್ಲಿ ನಡೆದ ಆಮ್ಡ್ ಫೋರ್ಸಸ್‌ ಗಾಲ್ಫ್ ಪಂದ್ಯಾವಳಿ ಉದ್ಘಾಟಿಸಲು ಮತ್ತು ಮಡಿಕೇರಿಯಲ್ಲಿ ನಡೆದ ಸೈನಿಕರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಂದು ಲೆಫ್ಟಿನೆಂಟ್‌ ಜನರಲ್‌ ಹುದ್ದೆಯಲ್ಲಿದ್ದ ರಾವತ್‌ ಜಿಲ್ಲೆಗೆ ಪ್ರಥಮ ಭೇಟಿ ನೀಡಿದ್ದರು.

2017ರಲ್ಲಿ ಅಂದಿನ ಸೇನಾ ಮುಖ್ಯಸ್ಥ ಜನರಲ್‌ ದಲ್ಬಿàರ್‌ ಸಿಂಗ್‌ ಜತೆಗೆ ಆಗಮಿಸಿದ್ದರು. ಆಗ ಅವರು ಜ| ತಿಮ್ಮಯ್ಯ ಮ್ಯೂಸಿಯಂ ಸ್ಥಾಪನೆಗೆ ಅಗತ್ಯ ನೆರವನ್ನು ನೀಡುವ ಆಶ್ವಾಸನೆ ನೀಡಿದ್ದಲ್ಲದೆ, ಅದರಂತೆ ನಡೆದುಕೊಂಡಿದ್ದರು.
ಗೋಣಿಕೊಪ್ಪಲಿನ ಕಾವೇರಿ ಕಾಲೇಜು ಆವರಣದಲ್ಲಿ ಸ್ಥಾಪಿಸಲಾಗಿದ್ದ ಫೀ|ಮಾ| ಕೆ.ಎಂ. ಕಾರ್ಯಪ್ಪ ಮತ್ತು ಜ| ತಿಮ್ಮಯ್ಯ ಪ್ರತಿಮೆಗಳ ಅನಾವರಣ ಸಮಾರಂಭಕ್ಕೆ ಜನರಲ್‌ ಬಿಪಿನ್‌ ರಾವತ್‌ ಆಗಮಿಸಿ ಮಹಾನ್‌ ಸೇನಾನಿಗಳ ಪ್ರತಿಮೆಗಳನ್ನು ಅನಾವರಣಗೊಳಿಸಿದ್ದರು.

ಇದನ್ನೂ ಓದಿ:ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಅನಂತರದ ದಿನಗಳಲ್ಲಿ ಫೀ|ಮಾ| ಕಾರ್ಯಪ್ಪ ಮತ್ತು ಜ| ತಿಮ್ಮಯ್ಯ ಫೋರಂ ಪದಾಧಿಕಾರಿಗಳು ರಾವತ್‌ ಅವರನ್ನು ಸಂಪರ್ಕಿಸಿ ಜ| ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆತರುವಂತೆ ಮನವಿ ಮಾಡಿದ್ದರು. ರಾವತ್‌ ಸಹಕಾರದಿಂದ 2021ರಲ್ಲಿ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಆಗಮಿಸಿದ್ದರು. ರಾವತ್‌ ಜತೆಯಲ್ಲಿದ್ದರು.

ಕೊಡಗಿನ ಪೀಚೆ ಕತ್ತಿ ಕೊಡುಗೆ
ಬಿಪಿನ್‌ ರಾವತ್‌ ಅವರ ತಂದೆ ಲಕ್ಷ್ಮಣ ಸಿಂಗ್‌ ರಾವತ್‌ ಮತ್ತು ಕೊಡಗಿನ ಲೆಫ್ಟಿನೆಂಟ್‌ ಜನರಲ್‌ ಬಿ.ಸಿ. ನಂದ ಸಮಕಾಲೀನರು. ಈ ಹಿನ್ನೆಲೆಯಲ್ಲಿ ರಾವತ್‌ ಕೊಡಗಿಗೆ ಆಗಮಿಸಿದ ಸಂದರ್ಭ ಅವರಿಗೆ ಬಿ.ಸಿ. ನಂದ ಅವರು ಕೊಡವರ ಸಾಂಪ್ರದಾಯಿಕ ಪೀಚೆಕತ್ತಿಯನ್ನು ನೀಡಿ “ಈ ಪೀಚೆ ಕತ್ತಿ ತಂದೆ ಮಗನಿಗೆ ನೀಡುವಂಥದ್ದು. ನಿನ್ನ ತಂದೆ ಮತ್ತು ನಾನು ಸಮಕಾಲೀನರಾಗಿರುವುದರಿಂದ ತಂದೆಯ ಸ್ಥಾನದಲ್ಲಿರುವ ನಾನು ನಿನಗೆ ಪೀಚೆಕತ್ತಿ ನೀಡುತ್ತಿದ್ದೇನೆ’ ಎಂದು ಹೇಳಿರುವ ಹೃದಯ ಸ್ಪರ್ಶಿ ಘಟನೆಯನ್ನು ನಿವೃತ್ತ ಮೇಜರ್‌ ಬಿ.ಎ. ನಂಜಪ್ಪ ನೆನಪಿಸಿಕೊಂಡಿದ್ದಾರೆ.

 

ಟಾಪ್ ನ್ಯೂಸ್

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.