ಅಹಂ ನಿರಸನ ಸಾರ್ಥಕ ಬದುಕಿಗೆ ಪ್ರೇರಣೆ: ಶಿವಕುಮಾರ


Team Udayavani, Dec 9, 2021, 2:51 PM IST

26motivation

ಔರಾದ: ಅಹಂಕಾರ ಪ್ರಕೃತಿಗೆ ಇರುವುದಿಲ್ಲ, ಮನುಷ್ಯರಿಗೆ ಮಾತ್ರ ಇರುತ್ತದೆ. ಆದ್ದರಿಂದ ಅಹಂ ನಿರಸನ ಜೀವನವೇ ಸಾರ್ಥಕ ಬದುಕಿಗೆ ಪ್ರೇರಣೆ ಆಗುತ್ತದೆ ಎಂದು ಸಾಹಿತಿ ಶಿವಕುಮಾರ ಕಟ್ಟೆ ನುಡಿದರು.

ತಾಲೂಕಿನ ಬಲ್ಲೂರ ಗ್ರಾಮದಲ್ಲಿ ಮಲ್ಲಶೆಟ್ಟೆಪ್ಪ ಉದಗಿರೆಯವರ ಎರಡನೇ ಸ್ಮರಣೋತ್ಸವ ಹಾಗೂ ಸಾಹಿತ್ಯ ಉತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಜೀವಿಯ ಬದುಕಿಗೂ ಒಂದು ಅರ್ಥವಿರುತ್ತದೆ. ಆದರೆ ಜೀವನಕ್ಕೆ ಅರ್ಥಬರುವಂತೆ ಬದುಕುವವರು ವಿರಳ. ಪರೋಪಕಾರಿಯಾಗಿ ಸಾಮಾಜಿಕ ಮೌಲ್ಯಗಳನ್ನು ಬದುಕಿದ ಮಲ್ಲಶೆಟ್ಟೆಪ್ಪ ಜೀವನ ಮುಂದಿನ ಜನಾಂಗಕ್ಕೆ ಮಾದರಿಯಾಗಿದೆ ಎಂದರು.

ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಶರಣಪ್ಪ ಮಿಠಾರೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿ ಕೆಲವರು ಸಾವಿಗೂ ಒಂದು ಅರ್ಥ ತಂದು ಕೊಡುವುದರ ಮೂಲಕ ಸಾವಿನಾಚೇಗೂ ಬದುಕುಳಿಯುತ್ತಾರೆ. ಅಂಥ ಹಿರಿಯರ ಸ್ಮರಣೆ ನಮ್ಮ ಬದುಕಿಗೆ ಸತ್ಪ್ರೇರಣೆಯಾಗಬೇಕು. ಜತೆಗೆ ಸಾಮಾಜಿಕ ಸೇವೆ ನಮ್ಮ ಬದುಕಿನ ಭಾಗವಾಗಬೇಕು ಅಂದಾಗ ನಮ್ಮ ಜೀವನಕ್ಕೂ ಅರ್ಥಬರುತ್ತದೆಂದು ಅಭಿಪ್ರಾಯಪಟ್ಟರು.

ಮಲ್ಲಿಕಾರ್ಜುನ ಬಂಬುಳಗೆ ಅವರು ಅನುಭಾವ ನುಡಿ ನುಡಿಯುತ್ತ ಮಲ್ಲಶೆಟ್ಟೆಪ್ಪ ಅವರ ಜೀವನ ಆದರ್ಶಮಯವಾಗಿದ್ದು ಅನೇಕರ ಬದುಕಿಗೆ ನೆರವಾಗುವ ಮೂಲಕ ಸಾರ್ಥಕ ಜೀವನ ನಡೆಸಿ ನಮಗೆಲ್ಲ ಆದರ್ಶಪ್ರಾಯ ಆಗಿದ್ದರು ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಅಭಿವೃದ್ಧಿ ಅಧಿಕಾರಿ ಶರಣಬಸವ ಚಲುವಾ, ಉದ್ಯಮಿ ಬಸವರಾಜ ಪಾಟೀಲ ಮಾತನಾಡಿದರು. ಎನ್‌ಜಿಒ ಗೃಹ ನಿರ್ಮಾಣ ಮಂಡಳಿ ನಿರ್ದೇಶಕ ಸಿದ್ದಾರೆಡ್ಡಿ ನಾಗೋರಾ, ಹಿರಿಯ ಮುಖಂಡ ಕಲ್ಯಾಣರಾವ್‌ ಸಂಗಾಪಾಟೀಲ, ಗ್ರಾಪಂ ಸದಸ್ಯರಾದ ಶಿವರಾಜ ಪಾಟೀಲ, ಪ್ರಭು ಬಳತೆ, ಶಿಲ್ಪಾ ರೇವಣಪ್ಪ, ಪಂಡಿತ ಮಾಣಿಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶಿವಕುಮಾರ ತರನಾಳೆ ಮತ್ತು ದೇವೇಂದ್ರ ಕರಂಜೆ ಅವರನ್ನು ಸನ್ಮಾನಿಸಲಾಯಿತು.

ಕಸ್ತೂರಿ ಪಟಪಳ್ಳಿ, ವಿದ್ಯಾವತಿ ಬಲ್ಲೂರ, ಡಾ| ಬಂಡಯ್ಯ ಸ್ವಾಮಿ, ಡಾ| ರಾಜಕುಮಾರ ಅಲ್ಲೂರೆ, ಡಾ| ಈಶ್ವರಯ್ಯ ಕೊಡಂಬಲ್‌, ಡಾ| ಶಿವರಾಜ ಪಾಟೀಲ, ಡಾ| ಮನ್ಮಥ ಡೋಳೆ, ಜಗನ್ನಾಥ ಮೂಲಗೆ, ಓಂಪ್ರಕಾಶ ದಡ್ಡೆ, ಶರಣಬಸವಪ್ಪ ಕಾರೆಮುಂಗೆ, ಶರಣಪ್ಪ ಬಿರಾದಾರ ಮುಸ್ತಾಪುರ, ಶಿವಪುತ್ರ ಪಟಪಳ್ಳಿ, ರಾಜಕುಮಾರ ಉದ್ಗೀರೆ, ಗಂಗಶೆಟ್ಟಿ ಪಾಟೀಲ, ಸಂಗಶೆಟ್ಟಿ ಉದ್ಗಿರೆ, ಶಿವರಾಜ ಚಿಲ್ಲಾಳೆ, ಪ್ರಭಾಕರ ದೇಸಾಯಿ, ಅಮರೇಶ ನಿಡೋದೆ ಇನ್ನಿತರರಿದ್ದರು. ಡಾ| ಬಸವರಾಜ ಬಲ್ಲೂರ ಪ್ರಾಸ್ತಾವಿಕ ನುಡಿದರು. ಶಿವಶಂಕರ ಟೋಕರೆ ಸ್ವಾಗತಿಸಿದರು. ಜಗನ್ನಾಥ ಕಮಲಾಪುರೆ ನಿರೂಪಿಸಿದರು. ಟಿ.ಎಂ. ಮಚ್ಚೆ ವಂದಿಸಿದರು.

ಟಾಪ್ ನ್ಯೂಸ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

ಇಂಡಿಯಾ ಒಕ್ಕೂಟಕ್ಕೆ ನಾಯಕರೂ ಇಲ್ಲ, ನೇತೃತ್ವವೂ ಇಲ್ಲ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.