ರಾಜಮೌಳಿಯ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆಗೆ ರಾಮ್ ಚರಣ್ ಗೈರು, ಕಾರಣವೇನು?
ಆಂಧ್ರಪ್ರದೇಶದಲ್ಲಿ ಟ್ರೈಲರ್ ಬಿಡುಗಡೆ ವೀಕ್ಷಿಸಲು ವ್ಯವಸ್ಥೆ ಮಾಡಿಕೊಡಲಾಗಿತ್ತು.
Team Udayavani, Dec 9, 2021, 6:14 PM IST
ಮುಂಬಯಿ: ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶದನ ಬಹುನಿರೀಕ್ಷಿತ “ಆರ್ ಆರ್ ಆರ್” ಸಿನಿಮಾ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ತೆಲುಗು ಸ್ಟಾರ್ ನಟ ರಾಮ್ ಚರಣ್ ಗೈರುಹಾಜರಾಗಿದ್ದಾರೆ. ಅದಕ್ಕೆ ಕಾರಣ ರಾಮ್ ಚರಣ್ ಕುಟುಂಬದ ವಿವಾಹ ಸಮಾರಂಭವೊಂದರಲ್ಲಿ ಭಾಗಿಯಾಗಿರುವುದು ಎಂದು ಹೇಳಿದೆ.
ಇದನ್ನೂ ಓದಿ:ದುರಂತದಲ್ಲಿ ಬದುಕುಳಿದಿರೋ ಕ್ಯಾ.ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ
ಗುರುವಾರ ಎಸ್.ಎಸ್.ರಾಜಮೌಳಿಯ “ಆರ್ ಆರ್ ಆರ್” ಟ್ರೈಲರ್ ಬಿಡುಗಡೆಯಾದ ನಂತರ ಸಿನಿಪ್ರಿಯರು ಹಾಗೂ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆಂಧ್ರಪ್ರದೇಶದಲ್ಲಿ ಟ್ರೈಲರ್ ಬಿಡುಗಡೆ ವೀಕ್ಷಿಸಲು ವ್ಯವಸ್ಥೆ ಮಾಡಿಕೊಡಲಾಗಿತ್ತು.
ಸಿನಿಮಾ ನಟರು ಹಾಗೂ ಸಿಬಂದಿಗಳು ಮುಂಬಯಿಗೆ ತೆರಳಿದ್ದು, ಈ ಸಂದರ್ಭದಲ್ಲಿ ಬಾಲಿವುಡ್ ಮಾಧ್ಯಮಗಳ ಜತೆ ಸಂವಾದ ಕೂಡಾ ನಡೆಸಿತ್ತು. ಈ ವೇಳೆಯಲ್ಲಿ ಆರ್ ಆರ್ ಆರ್ ಹೀರೋ ಜ್ಯೂ.ಎನ್ ಟಿಆರ್ ಕೂಡಾ ಉಪಸ್ಥಿತರಿದ್ದರು. ಆದರೆ ಕುಟುಂಬದ ವಿವಾಹ ಕಾರ್ಯಕ್ರಮಕ್ಕೆ ರಾಮ್ ಚರಣ್ ಹಾಜರಾಗಿದ್ದರಿಂದ ಮುಂಬಯಿಯಲ್ಲಿ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಗೈರುಹಾಜರಾಗುವಂತಾಗಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಮುಖ ನಗರಗಳಲ್ಲಿ ಆರ್ ಆರ್ ಆರ್ ಸಿನಿಮಾದ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು ಎಂದು ಸಿನಿಮಾ ತಂಡ ಹೇಳಿದೆ. ಬಿಗ್ ಬಜೆಟ್ ನ ಆರ್ ಆರ್ ಆರ್ ಸಿನಿಮಾದಲ್ಲಿ ಜ್ಯೂ.ಎನ್ ಟಿಆರ್, ರಾಮ್ ಚರಣ್, ಅಜಯ್ ದೇವಗನ್, ಅಲಿಯಾ ಭಟ್ ಹಾಗೂ ಇತರರು ಮುಖ್ಯ ಭೂಮಿಕೆಯಲ್ಲಿದ್ದಾರೆ. 2022ರ ಜನವರಿ 7ರಂದು ತೆಲುಗು, ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ತೆರೆಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ