ರಾವತ್ ಸಾವು ರಾಷ್ಟ್ರಕ್ಕೆ ನಷ್ಟ
Team Udayavani, Dec 10, 2021, 11:01 AM IST
ಚಿತ್ತಾಪುರ: ಭಾರತೀಯ ಸೇನೆಯ ರಕ್ಷಣಾ ಪಡೆಗಳ ಮುಖ್ಯಸ್ಥ ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡುಪಿಟ್ಟ ಜನರಲ್ ಬಿಪಿನ್ ರಾವತ್ ಬುಧವಾರ ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಅಶ್ವತ್ಥ್ ರಾಠೊಡ ಸಂತಾಪ ಸೂಚಿಸಿದ್ದಾರೆ.
ಪಟ್ಟಣದ ಲಾಡ್ಜಿಂಗ್ ಕ್ರಾಸ್ ಹತ್ತಿರ ಬುಧವಾರ ದಿ. ಬಿಪಿನ್ ರಾವತ್ ಅವರ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 11 ಸೇನಾ ಸಿಬ್ಬಂದಿ ಮೃತಪಟ್ಟಿರುವುದು ತುಂಬಾ ದುಃಖಕರ ಸಂಗತಿ ಎಂದು ಹೇಳಿದರು.
ರಾವತ್ ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಸೇನಾಪಡೆ, ವಾಯುಪಡೆ, ನೌಕಾಪಡೆಗಳನ್ನು ಬೆಸೆಯುವ ಯೋಜನೆಯನ್ನು ಅವರು ಸಿದ್ಧಪಡಿಸಿದ್ದರು ಎಂದು ಸ್ಮರಿಸಿದರು. ವಿಎಚ್ಪಿ ಜಿಲ್ಲಾ ಕಾರ್ಯದರ್ಶಿ ಅಂಬರೀಶ ಸುಲೇಗಾಂವ, ತಾಲೂಕು ಅಧ್ಯಕ್ಷ ಶ್ರೀನಿವಾಸ, ಕಾರ್ಯದರ್ಶಿ ಮೇಘರಾಜ ಗುತ್ತೇದಾರ, ಸಂತೋಷ ಅಲ್ಲೂರಕರ್, ಪ್ರಹ್ಲಾದ ವಿಶ್ವಕರ್ಮ, ಕಾಶಿನಾಥ ಸಂಗಾವಿ, ಮನೋಜ ರಾಠೊಡ, ಮಲ್ಲಿಕಾರ್ಜುನ ಉಪ್ಪಾರ, ದಶರಥ ದೊಡ್ಡಮನಿ, ಅಜಯ ಬಿದರಿ, ಶರಣು, ಆಕಾಶ, ಬಸ್ಸು, ಚಂದು, ರಾಹುಲ್, ಗುರುರಾಜ, ರಮೇಶ ಇನ್ನಿತರರು ಇದ್ದರು. ನಂತರ ಮೌನಾಚರಣೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ