ನಿರುದ್ಯೋಗಿಗಳಿಗೆ ತರಬೇತಿ
Team Udayavani, Dec 10, 2021, 12:24 PM IST
ಕಲಬುರಗಿ: ಯಾವುದೇ ಕ್ಷೇತ್ರದಲ್ಲಿ ವೃತ್ತಿ ನಿಪುಣತೆ ಮುಖ್ಯವಾಗಿದ್ದರಿಂದ ನಿರುದ್ಯೋಗಿಗಳಿಗೆ ವಿವಿಧ ಕೋರ್ಸ್ ಮೂಲಕ ತರಬೇತಿ ನೀಡಲಾಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ- ಜೀವನೋಪಾಯ ಇಲಾಖೆ ಜಿಲ್ಲಾ ನಿರ್ದೇಶಕರಾದ ನಾಗುಬಾಯಿ ದೊಡ್ಡಮನಿ ಹೇಳಿದರು.
ನಗರದ ಬಸವ ಸಿರಿ ತರಬೇತಿ ಕೇಂದ್ರದಲ್ಲಿ 2021-22ನೇ ಸಾಲಿನ ಪ್ರಧಾನ ಮಂತ್ರಿ ವಿಕಾಸ (ಪಿಎಂಕೆವಿವೈ 3.0) ಯೋಜನೆಯಡಿ ಕೌಶಲ್ಯಾಭಿ ವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋ ಪಾಯ ಇಲಾಖೆ ಸಹಯೋಗದೊಂದಿಗೆ ನಡೆಯುತ್ತಿರುವ ಉಚಿತ ಕೋವಿಡ್ ಕ್ರಾಸ್ ಕೋರ್ಸ್ ತರಬೇತಿ ಉದ್ದೇಶಿಸಿ ಅವರು ಮಾತನಾಡಿದರು.
ಹಲವರಲ್ಲಿ ತಮ್ಮದೆ ಪ್ರತಿಭೆ ಹಾಗೂ ಕೌಶಲ್ಯತೆ ಇದ್ದೇ ಇರುತ್ತದೆ. ಅದಕ್ಕೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ದೊರೆತಲ್ಲಿ ಕೌಶಲ್ಯ ಸಮಾಜಕ್ಕೆ ಗೊತ್ತಾಗುತ್ತದೆ. ಇಲಾಖೆ ಯಡಿ ನಿರುದ್ಯೋಗಿಗಳ ಕೌಶಲ್ಯಾ ಭಿವೃದ್ಧಿಗೆ ಕೋರ್ಸುಗಳಿವೆ. ತರಬೇತಿ ಪಡೆಯುವ ಮೂಲಕ ಬದುಕು ರೂಪಿಸುವ ಕೆಲಸ ಇಲಾಖೆಯದ್ದಾಗಿದೆ. ಹೀಗಾಗಿ ಯುವಕರು ಹಾಗೂ ನಿರುದ್ಯೋಗಿಗಳು ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಪಿಎಂಕೆವಿವೈ 3.0 ಜಿಲ್ಲಾ ಸಂಯೋಜಕ ಮೌನೇಶ ಹಾಗೂ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಗರೂರ್, ಉಪನ್ಯಾಸಕ ಡಾ| ಶರಣಗೌಡ ಪಾಟೀಲ ಮತ್ತು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು