ಜನರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ

ಸಮಾಜದಲ್ಲಿ ಮಕ್ಕಳನ್ನು ದೇವರು ಎಂದು ಪರಿಗಣಿಸಲಾಗುತ್ತದೆ.

Team Udayavani, Dec 10, 2021, 6:29 PM IST

ಜನರಿಗೆ ಸರ್ಕಾರಿ ಸೌಲಭ್ಯ ತಲುಪಿಸಿ

ಕಾರವಾರ: ಸರ್ಕಾರದ ಸೌಲಭ್ಯಗಳನ್ನ ತಲುಪಿಸುವ ಕಾರ್ಯವನ್ನು ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ವಿವಿಧ ಇಲಾಖೆ ಅಧಿ ಕಾರಿ ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ಮಾಡುವುದು ಒಳಿತು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್‌. ಸಂತೋಷಕುಮಾರ ಶೆಟ್ಟಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಮಕ್ಕಳ ಗ್ರಾಮಸಭೆ ಅನುಷ್ಠಾನ ಹಾಗೂ ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಗ್ರಾಮ ಪಂಚಾಯತ್‌ಗಳ ಪಾತ್ರ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಮಕ್ಕಳನ್ನು ದೇವರು ಎಂದು ಪರಿಗಣಿಸಲಾಗುತ್ತದೆ. ಸಮಸ್ಯೆಯಿಂದ ಸರಕಾರಿ ಕಚೇರಿಗೆ ಬಂದಂತಹ ಸಂತ್ರಸ್ತ ಮಕ್ಕಳಿಗೆ ನೆರವು ನೀಡಿ. ಯಾರು ಕರ್ತವ್ಯದಲ್ಲಿ ನಿರತರಾಗಿರುತ್ತಾರೋ ಅವರೇ ನಿಜವಾದ ದೇವರ ಪೂಜೆ ಮಾಡಿದ ಹಾಗೆ ಆಗುತ್ತದೆ ಎಂದರು. ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಕಾ ಮಾತನಾಡಿ, ತರಬೇತಿಗಳು ಮಾಡುವ ಉದ್ದೇಶ ಎಂದರೆ ಪಂಚಾಯತ್‌ಗಳ ಪಾತ್ರವೇನು ಎಂದು ತಿಳಿಸುವುದಾಗಿದೆ. ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳು ಅಂದರೆ ರಸ್ತೆ ನಿರ್ಮಾಣ, ಗ್ರಾಮ ನೈರ್ಮಲ್ಯ ಅಷ್ಟೆ ಅಲ್ಲ, ಇದರಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಪೌಷ್ಟಿಕತೆ ಎಲ್ಲವೂ ಒಳಗೊಂಡಿರುತ್ತವೆ.

ಮಕ್ಕಳ ಹಕ್ಕು ಮತ್ತು ಕರ್ತವ್ಯ ರಕ್ಷಿಸುವುದು ಎಷ್ಟು ಮುಖ್ಯವೋ ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ತಡೆಯುವುದು ಕೂಡ ಅಷ್ಟೆ ಮುಖ್ಯ, ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಲವಾರು ಹಂತಗಳನ್ನು ತೆಗೆದುಕೊಂಡಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಸಿ.ಕೆ. ಶ್ಯಾಮಲಾ ಗ್ರಾಮ ಮಟ್ಟದಿಂದಲೆ ಮಕ್ಕಳಿಗೆ ಹಕ್ಕುಗಳ ಕುರಿತು ಮಾಹಿತಿ ಹಾಗೂ ತಿಳಿವಳಿಕೆ ಮೂಡಿಸಬೇಕು ಎಂದರು.

ಕೊಪ್ಪಳ ವಿಭಾಗೀಯ ಸಂಯೋಜಕ ರಾಘವೇಂದ್ರ ಭಟ್‌ ಉಪನ್ಯಾಸ ನೀಡಿದರು. ಡಿ.ಎನ್‌. ನಾಯಕ್‌ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಪ್ತ ಸಮಾಲೋಚಕ ಸುನಿಲ್‌ ಗಾಂವಕರ್‌ ವಂದಿಸಿದರು. ಜಿಲ್ಲೆಯ ಎಲ್ಲ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.