ಚಾ.ದೇಗುಲದಲ್ಲಿ ವಿಗ್ರಹಗಳ ಪ್ರತಿಷ್ಠಾಪನೆ
Team Udayavani, Dec 11, 2021, 1:10 PM IST
ನಂಜನಗೂಡು: ಇಲ್ಲಿನ ಕಪಿಲಾ ನದಿ ತೀರದಲ್ಲಿರುವ ಚಾಮುಂಡೇಶ್ವರಿ ದೇಗುಲದಲ್ಲಿ ಅನಂತ ಬಾಲಕೃಷ್ಣ ವಿಗ್ರಹ ಸೇರಿದಂತೆ 200 ನಾಗರ ವಿಗ್ರಹಗಳ ಪುನರ್ ಪ್ರತಿಷ್ಠಾಪನೆ ನಡೆಯಿತು.
ಶ್ರೀಕಂಠೇಶ್ವರಸ್ವಾಮಿ ದೇಗುಲದ ಪ್ರಧಾನ ಆಗಮಿಕ ಜೆ.ನಾಗಚಂದ್ರ ದೀಕ್ಷಿತ್ ನೇತೃತ್ವದ ಅರ್ಚಕ ವೃಂದದವರು ಕಳೆದ ಮೂರು ದಿನಗಳ ಪರ್ಯಂತ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಂಡು ಅನಂತ ಬಾಲಕೃಷ್ಣನ ವಿಗ್ರಹ ಸೇರಿದಂತೆ 200ಕ್ಕೂ ಹೆಚ್ಚು ನಾಗರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದರು.
ಪ್ರತಿಷ್ಠಾಪನೆಗೂ ಮುನ್ನ ಗಣಪತಿ ನವಗ್ರಹ ಹೋಮ ನೆರವೇರಿಸಿ ವಿಗ್ರಹಗಳ ಕಲಾಪೂರ್ಣ ಮಾಡಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ನಾಡಿ ಸಂಧಾನ, ಪೂರ್ಣಹುಟ್ಟು, ಕುಂಭಾಭಿಷೇಕ ನೆರವೇರಿಸಿ ಮಹಾಮಂಗಳಾರತಿ ಸೇರಿದಂತೆ ಧಾರ್ಮಿಕ ಕೈಂಕರ್ಯಗಳ ನಂತರ ಅನಂತ ಬಾಲಕೃಷ್ಣನ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಶ್ರೀಕಂಠೇಶ್ವರಸ್ವಾಮಿ ದೇಗುಲದ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ಎಇಒ ವೆಂಕಟೇಶ್ಪ್ರಸಾದ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ