ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ
Team Udayavani, Dec 11, 2021, 1:59 PM IST
ಬೆಂಗಳೂರು: ಕರ್ನಾಟಕದಲ್ಲಿ 2000ಕ್ಕಿಂತಲೂ ಹೆಚ್ಚು ಸ್ಥಳಗಳಲ್ಲಿ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಬೃಹತ್ ಅಭಿಯಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜೂಮ್ ಸಂವಾದದ ಮೂಲಕ ಶನಿವಾರ ಚಾಲನೆ ನೀಡಿದರು.
ಎಐಸಿಸಿ ಮಾಹಿತಿ ವಿಶ್ಲೇಷಣೆ ವಿಭಾಗದ ಮುಖ್ಯಸ್ಥ ಪ್ರವೀಣ್ ಚಕ್ರವರ್ತಿ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಶಾಸಕ ವಿ. ಮುನಿಯಪ್ಪ, ಕೆಪಿಸಿಸಿ ಸದಸ್ಯತ್ವ ನೋಂದಣಿ ಅಭಿಯಾನ ಸಮಿತಿ ಸಂಚಾಲಕ ಆರ್.ವಿ. ವೆಂಕಟೇಶ್, ಡಿಜಿಟಲ್ ಸದಸ್ಯತ್ವ ನೋಂದಣಿ ವಿಭಾಗದ ಸಂಚಾಲಕ ರಘುನಂದನ್ ರಾಮಣ್ಣ, ಎಐಸಿಸಿ ಮಾಜಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಜ.ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಬರಹ: ಮಂಗಳೂರಿನಲ್ಲಿ ಪ್ರಕರಣ ದಾಖಲು
ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ ಮತ್ತಿತರರು ಜೂಮ್ ಸಂವಾದದಲ್ಲಿ ಪಾಲ್ಗೊಂಡು ಸದಸ್ಯತ್ವ ಅಭಿಯಾನ ಕುರಿತು ಸಂದೇಶ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ