ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗಾಗಿ ಯಕ್ಷ ವೇಷ ಧರಿಸಿ ಸಂತೆಯಲ್ಲಿ ಧನ ಸಂಗ್ರಹ


Team Udayavani, Dec 11, 2021, 7:05 PM IST

Untitled-1

ಕುಂದಾಪುರ: ಎರಡು ವರ್ಷವಿದ್ದಾಗಲೇ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಬೈಂದೂರು ತಾಲೂಕಿನ ಹೇರೂರು ಗ್ರಾಮದ ಯರುಕೋಣೆಯ ರವೀಂದ್ರ ಪೂಜಾರಿ ಹಾಗೂ ಸುಶೀಲಾ ದಂಪತಿಯ ಪುತ್ರ, 6 ವರ್ಷದ ವಂಶಿಕ್‌ನ ಚಿಕಿತ್ಸೆಗಾಗಿ ಹೆಚ್ಚಿನ ಹಣದ ಆವಶ್ಯಕತೆಯಿದ್ದು, ಅದಕ್ಕಾಗಿ ಶನಿವಾರ ಕುಂದಾಪುರದ ವಾರದ ಸಂತೆಯಲ್ಲಿ ಹವ್ಯಾಸಿ ಯಕ್ಷಗಾನ ಕಲಾವಿದ ಬೆಂಕಿ ಮಣಿ ಸಂತು ಅರೆಹೊಳೆ ಅವರು ಮಾರಣಕಟ್ಟೆ ಕ್ಷೇತ್ರ ಮಹಾತ್ಮೆಯಲ್ಲಿ ಬರುವ “ಮೈಧಾವಿನಿ’ ಎನ್ನುವ ವೇಷ ಧರಿಸಿ, ಹಣ ಸಂಗ್ರಹಿಸಿದರು.

ಬೆಂಕಿ ಮಣಿ ಸಂತು ಹಾಗೂ ಅವರೊಂದಿಗೆ ವಂಶಿಕ್‌ನ ತಂದೆ ರವೀಂದ್ರ, ನಾಗೇಶ್‌ ಹಾಗೂ ಸುಜಿತ್‌ ಸೇರಿ ಕುಂದಾಪುರದ ವಾರದ ಸಂತೆ ಹಾಗೂ ಕುಂದಾಪುರದ ಪೇಟೆಯಲ್ಲಿರುವ ಅಂಗಡಿಗಳಿಗೆ ತೆರಳಿ ಧನ ಸಂಗ್ರಹಿಸಿದರು. ಅವರಿಗೆ ರಾಘವೇಂದ್ರ ಉಳ್ಳೂರು 74 ಹಾಗೂ ರಾಘವೇಂದ್ರ ಶೆಟ್ಟಿ ಮಡಾಮಕ್ಕಿ ಅವರು ಸಹಕರಿಸಿದರು.

ಕಳೆದ ಎ.10 ರಂದು ಸಹ ಕುಂದಾಪುರದ ವಾರದ ಸಂತೆಯಲ್ಲಿ ತಲೆಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕ ರಿಷಿಕ್‌ ಆಚಾರ್ಯ ಪಡುಕೋಣೆ ಅವರ ಚಿಕಿತ್ಸೆಗಾಗಿ ಹೊಯ್ಸಳ ಟ್ರಸ್ಟ್‌ ನಾಡ ನೇತೃತ್ವದಲ್ಲಿ ಬೆಂಕಿ ಮಣಿ ಸಂತು ಅವರು “ಮಹಿಷಾಸುರ’ನ ವೇಷ ಧರಿಸಿ ಕುಂದಾಪುರದ ವಾರದ ಸಂತೆ ಹಾಗೂ ಅಂಗಡಿಗಳಿಗೆ ತೆರಳಿ ಹಣ ಸಂಗ್ರಹಿಸಿದ್ದರು.

ನೆರವಿಗೆ ಮನವಿ: 

ವಂಶಿಕ್‌ ಅವರು ಎರಡು ವರ್ಷವಿದ್ದಾಗಲೇ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಸತತ ಎರಡೂವರೆ ವರ್ಷದ ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ. ಆದರೆ ಈಗ ಮತ್ತೆ ರೋಗ ಉಲ್ಬಣಗೊಂಡಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಚಿಕಿತ್ಸೆಗೆ ಅಂದಾಜು 10 ಲಕ್ಷ ರೂ. ಆಗಬಹುದು ಎಂದು ವೈದ್ಯರು ತಿಳಿಸಿದ್ದು, ಇವರದು ಬಡ ಕುಟುಂಬವಾಗಿದ್ದು, ಅಷ್ಟೊಂದು ಹಣವನ್ನು ಒಟ್ಟು ಮಾಡಲು ಕಷ್ಟವಾಗಿದ್ದು, ಅದಕ್ಕಾಗಿ ಈ ಕುಟುಂಬವು ಸಹೃದಯಿ ದಾನಿಗಳಿಂದ ನೆರವಿಗಾಗಿ ಮನವಿ ಮಾಡಿಕೊಂಡಿದೆ.

ಬ್ಯಾಂಕ್‌ ವಿವರ:

ಈ ಬಾಲಕನ ಚಿಕಿತ್ಸೆಗೆ ಮುಂದಾಗುವವರು ತಂದೆಯ ಹೆಸರಲ್ಲಿರುವ ಕೆನರಾ ಬ್ಯಾಂಕ್‌ ಖಾತೆಗೆ ಹಣವನ್ನು ಜಮೆ ಮಾಡಬಹುದು.

ಹೆಸರು: ರವೀಂದ್ರ, ಬ್ಯಾಂಕ್‌ : ಕೆನರಾ ಬ್ಯಾಂಕ್‌, ಶಾಖೆ: ನಾವುಂದ, ಖಾತೆ ಸಂಖ್ಯೆ : 01732200124764, ಐಎಫ್‌ಎಸ್‌ಸಿ ಸಂಖ್ಯೆ: ಸಿಎನ್‌ಆರ್‌ಬಿ0010173, ಹೆಚ್ಚಿನ ಮಾಹಿತಿಗೆ – 9108414570 ಸಂಖ್ಯೆಯನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.