ಗ್ರಾಮೀಣ ಭಾಗದಲ್ಲಿ ಚಿಲ್ಲರೆ ವಹಿವಾಟು ವೃದ್ಧಿ; ಎಡಲ್ವೈಸಿಸ್ ಸಂಸ್ಥೆಯ ಅಧ್ಯಯನದಲ್ಲಿ ದೃಢ
ಪ್ರಸಕ್ತ ವಿತ್ತೀಯ ವರ್ಷಕ್ಕಿಂತ ಮುಂದಿನ ವರ್ಷ ಮತ್ತಷ್ಟು ಚೇತರಿಕೆ
Team Udayavani, Dec 12, 2021, 6:30 AM IST
ನವದೆಹಲಿ: ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಪ್ಯಾಕ್ ಮಾಡಿದ ವಸ್ತುಗಳಿಗೆ ಬೇಡಿಕೆ ಪ್ರಸಕ್ತ ವಿತ್ತೀಯ ವರ್ಷದ ಎರಡನೇ ತೈಮಾಸಿಕದಲ್ಲಿ ಕೊಂಚ ಏರಿಕೆಯಾಗಿದೆ.
ಮುಂದಿನ ವಿತ್ತೀಯ ವರ್ಷದಲ್ಲಿ ಅದರ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಸೋಂಕಿನ ಪ್ರಭಾವ ತಗ್ಗುತ್ತಲೇ ವಾಣಿಜ್ಯಿಕ ವಹಿವಾಟುಗಳಲ್ಲಿ ಮತ್ತಷ್ಟು ಚೇತರಿಕೆ ಕಾಣುತ್ತಿದೆ ಎಂಬ ಅಂಶ ಈ ಬೆಳವಣಿಗೆಯಿಂದ ಮತ್ತಷ್ಟು ದೃಢವಾಗಿದೆಎಂದು ಮಾರುಕಟ್ಟೆ ಸಂಶೋಧನಾ ಸಂಸ್ಥೆಯಾದ “ಎಡಲ್ವೈಸಿಸ್’ ನಡೆಸಿದ ಅಧ್ಯಯನದಲ್ಲಿ ಹೇಳಿದೆ.
ಎರಡನೇ ಅಲೆಯ ತೀವ್ರತೆ ಇಳಿಕೆಯಾದ ಬಳಿಕ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ವಸ್ತುಗಳಿಗೆ ಬೇಡಿಕೆ ನಗರ ಪ್ರದೇಶಗಳಿಗಿಂತ ಹೆಚ್ಚಾಗಿದೆ. ಇದರ ಜತೆಗೆ ನಗರ ಪ್ರದೇಶಗಳಲ್ಲಿಯೂ ಕೂಡ ವಿವಿಧ ರೀತಿಯ ವಸ್ತುಗಳಿಗೆ ಮತ್ತು ಸೇವೆಗಳಿಗೆ ಬೇಡಿಕೆ ವೃದ್ಧಿಯಾಗುತ್ತಿದೆ ಎಂದು ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಪ್ರಸ್ತಾಪಿಸಲಾಗಿದೆ.
ಎರಡು ವರ್ಷಗಳ ಬೆಳವಣಿಗೆಗಳನ್ನು ಅಧ್ಯಯನ ಮಾಡಿರುವ ಎಡಲ್ವೈಸಿಸ್ ಸಂಸ್ಥೆ, ಮಾರುಕಟ್ಟೆ ಗ್ರಾಮೀಣ ಭಾಗದಲ್ಲಿ ಚೇತರಿಕೆ ಕಾಣುತ್ತಿದ್ದರೂ, ಕೊರೊನಾ ಶುರುವಾಗುವ ಮೊದಲಿನ ದಿನಗಳಿಗೆ ಇನ್ನೂ ತಲುಪಿಲ್ಲ ಎಂದು ಅದರಲ್ಲಿ ಅಭಿಪ್ರಾಯಪಡಲಾಗಿದೆ.
ಇದನ್ನೂ ಓದಿ:ಮತಾಂತರ ನಿಷೇಧ ಕಾಯ್ದೆ ಜಾರಿ ಖಚಿತ: ಈಶ್ವರಪ್ಪ
2022-23ನೇ ಸಾಲಿನಲ್ಲಿ ಪ್ರಸಕ್ತ ವರ್ಷಕ್ಕಿಂತ ಹೆಚ್ಚು ಚೇತರಿಕೆಯ ವಾತಾವರಣ ಕಂಡುಬರಲಿದೆ ಎಂದು ಉತ್ತಮ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.
ನಗರ ಪ್ರದೇಶಗಳಲ್ಲಿ ವಿವಿಧ ಸೇವಾ ಕ್ಷೇತ್ರ ಮತ್ತು ಉದ್ಯಮ ವಹಿವಾಟುಗಳು ಚೇತರಿಕೆ ಕಾಣುತ್ತಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿಯೂ ಮುಂದಿನ ದಿನಗಳಲ್ಲಿ ಚೇತರಿಕೆ ಕಾಣಬುಹುದು ಎಂದು ಅಧ್ಯಯನದಲ್ಲಿ ಕಂಡುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ