ವಿದ್ಯಾರ್ಥಿಗಳೇ ಓದಿನತ್ತ ಗಮನ ಹರಿಸಿ: ಪಾಳಾ
Team Udayavani, Dec 12, 2021, 11:37 AM IST
ಅಫಜಲಪುರ: ವಿದ್ಯಾರ್ಥಿ ಜೀವನ ಬಹಳ ಅಮೂಲ್ಯ ವಾದದ್ದು. ಹೀಗಾಗಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸಬೇಕೆಂದು ಸಿಪಿಐ ಜಗದೇವಪ್ಪ ಪಾಳಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಾಲೂಕಿನ ಗೊಬ್ಬೂರ (ಬಿ) ಗ್ರಾಮದ ಸಿದ್ಧಾರ್ಥ ಪದವಿ ಕಾಲೇಜಿನಲ್ಲಿ ಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸದಾ ಕಠಿಣ ಅಭ್ಯಾಸ ಮಾಡಬೇಕು. ಶಿಕ್ಷಕರನ್ನು ಗೌರವಿಸಬೇಕು, ಪುಸ್ತಕಗಳನ್ನು ಪ್ರೀತಿಸಬೇಕು. ಅಂದಾಗ ಸಾಧನೆ ಸುಲಭವಾಗುತ್ತದೆ. ಇಲ್ಲದಿದ್ದರೆ ಬದುಕು ಬಹಳ ಕಷ್ಟಕರವಾಗುತ್ತದೆ ಎಂದರು.
ಚಿತ್ತಾಪುರ ಪದವಿ ಕಾಲೇಜಿನ ಪ್ರಾಚಾರ್ಯ ಡಾ| ವಿಜಯಕುಮಾರ ಸಾಲಿಮನಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ ಬಹಳ ಅವಶ್ಯಕ. ಇವೆರಡನ್ನು ನಿಮ್ಮ ಸಂಗಾತಿಗಳನ್ನಾಗಿ ಮಾಡಿಕೊಂಡರೆ ಭವಿಷ್ಯದಲ್ಲಿ ಸೋಲು ಸುಳಿಯುವುದಿಲ್ಲ ಎಂದು ಹೇಳಿದರು.
ಹರ್ಷವರ್ಧನ ಪದವಿ ಕಾಲೇಜಿನ ಪ್ರಾಚಾರ್ಯ ಡಾ| ಸಂಗಣ್ಣ ಎಂ. ಸಿಂಗೆ ಆನೂರ, ಡಾ| ಪಂಡಿತ ಬಿ.ಕೆ ಮಾತನಾಡಿ ಇತ್ತೀಚೆಯ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದಾಗಿ ಹಾಳಾಗುತ್ತಿದ್ದಾರೆ. ಓದುವ ಸಮಯದಲ್ಲಿ ಮೊಬೈಲ್ ನಿಂದ ದೂರವಿರಿ. ತಂತ್ರಜ್ಞಾನಗಳನ್ನು ನಿಮ್ಮ ಜ್ಞಾನಕ್ಕೆ ಅನುಕೂಲವಾಗುವಂತೆ ಉಪಯೋಗಿಸಿಕೊಳ್ಳಿ. ಇಲ್ಲದಿದ್ದರೆ ಮೊಬೈಲ್ ನಿಮ್ಮ ಬದುಕನ್ನು ನಾಶ ಮಾಡುತ್ತದೆ ಎಂದು ಎಚ್ಚರಿಸಿದರು.
ಮಲ್ಲು ದೇವತ್ಕಲ್, ಶಿವಾನಂದ ಕೌದಿ, ದೇವಾನಂದ ಸಾವಳಗಿ, ಶಂಕರ ಪೋದ್ದಾರ, ಶರಣು ಅಲೆª, ಬಸವರಾಜ ನಿಂಬರಗಿ, ಪ್ರಭುಲಿಂಗ ಪಾಟೀಲ, ಮಹಾದೇವ ವಿಶ್ವಕರ್ಮ, ರಮಾ ಅರ್ಜುಣಗಿಕರ್, ಜ್ಯೋತಿ ಕಡಗಂಚಿ, ಜ್ಯೋತಿ ಕಾರಜೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ