ರಸಪ್ರಶ್ನೆ ವಿಜೇತರಿಗೆ ಬಹುಮಾನ ವಿತರಣೆ
Team Udayavani, Dec 12, 2021, 12:22 PM IST
ಆಳಂದ: ತಾಲೂಕಿನ ನಿಂಗದಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ತಾಲೂಕು ಕರ್ನಾಡು ವಿಜಯ ಸೇನೆಯಿಂದ 80 ಊಟದ ತಟ್ಟೆ ಹಾಗೂ ರಸಪ್ರಶ್ನೆ ಏರ್ಪಡಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.
ರಸ ಪ್ರಶ್ನೆಯಲ್ಲಿ ಪಾಲ್ಗೊಂಡ 20 ತಂಡಗಳಲ್ಲಿ ಪ್ರಥಮ, ದ್ವಿತೀಯ ಬಹುಮಾನವಾಗಿ ನೋಟಬುಕ್ ಮತ್ತು ಪೇನ್ ನೀಡಲಾಯಿತು. ಊಟದ ತಟ್ಟೆ ಮತ್ತು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದ ಸೇನೆಯ ತಾಲೂಕು ಅಧ್ಯಕ್ಷ ಗುರು ಬಂಗರಗಿ ಮಾತನಾಡಿ, ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ವಿಜಯ ಸೇನೆಯಿಂದ ತಟ್ಟೆಗಳನ್ನು ನೀಡಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ಜ್ಞಾನಾರ್ಜನೆಗಾಗಿ ರಸಪ್ರಶ್ನೆ ಸ್ಪರ್ಧೆ ಕೈಗೊಂಡು ವಿಜೇತರಿಗೆ ಬಹುಮಾನ ನೀಡಲಾಗಿದೆ ಎಂದು ಹೇಳಿದರು.
ಮುಖ್ಯ ಶಿಕ್ಷಕ ವೀರಭದ್ರಯ್ಯ ಸ್ವಾಮಿ ಸ್ವಾಗತಿಸಿ, ವಿಜಯ ಸೇನೆ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸಿದರು.ಪ್ರೌಢಶಾಲೆ ಎಸ್ಡಿಎಂಸಿ ಅಧ್ಯಕ್ಷ ನಾಗೇಶ ರಾಂಪೂರೆ, ಗ್ರಾಮದ ಮಹೇಶ ನಿಂಬಾಳೆ, ಸಂತೋಷ ಹಂಚನಾಳೆ, ಮಲ್ಲು ಜಕಾಪೂರೆ, ಅನಿಲ, ಪ್ರಕಾಶ, ವಲಯ ಘಟಕದ ಅಧ್ಯಕ್ಷ ಚಂದ್ರಕಾಂತ ಪಾಟೀಲ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಾಗರ ಪಾಟೀಲ, ನಿಂಗದಳಿ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ಹಾಗೂ ಸೇನೆಯ ಇನ್ನಿತರ ಪದಾಧಿ ಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ