ಸೊರಬ: ಎತ್ತು ಮೈತೊಳೆಯಲು ಹೋಗಿ ವ್ಯಕ್ತಿ ಸಾವು
Team Udayavani, Dec 12, 2021, 3:38 PM IST
ಸೊರಬ: ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ.
ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ಧೈವಿ. ಭಾನುವಾರ ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಕೆ. ಮಹಾಭಲೇಶ್ವರ, ಸಿಬ್ಬಂದಿ ಡಿ.ವಿ. ಮಂಜುನಾಥ, ವಿ. ನಾಗರಾಜ, ಪರಶುರಾಮ, ಡಿ.ಕೆ. ನಾಗರಾಜ, ಡಿ.ಬಿ. ರಾಜೇಂದ್ರ ಪಾಲ್ಗೊಂಡಿದ್ದರು.
ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು