ಅಪಕ್ವ -ವಿಕೃತ ಮನಸ್ಥಿತಿ ನಾಶಕ್ಕೆ ವಿದ್ಯೆಯೇ ಪರಿಹಾರ


Team Udayavani, Dec 12, 2021, 3:52 PM IST

31education

ವಿಜಯಪುರ: ಅಪಕ್ವ-ವಿಕೃತ ಮನಸ್ಸಿನ ಪರಿಷ್ಕಾರಕ್ಕೆ ಆಧ್ಯಾತ್ಮ ವಿದ್ಯೆಯೇ ಏಕೈಕ ಪರಿಹಾರ. ಆ ಆಧ್ಯಾತ್ಮ ವಿದ್ಯೆಯ ಆಕರ ಗ್ರಂಥವೇ ಭಗವದ್ಗೀತೆಯಾಗಿದೆ ಎಂದು ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಶ್ರೀಗಳು ಹೇಳಿದರು.

ವಿಜಯಪುರದ ಶೃಂಗೇರಿ ಶಂಕರ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಯಾನದ ಕುರಿತು ಮಾತನಾಡಿ, ಇಂದು ಮಾನವ ಅನೇಕ ವಿಕಾರಗಳಿಗೆ ಬಲಿಯಾಗುತ್ತಿದ್ದಾನೆ. ವಿಕೃತವಾದ ಮನಸ್ಸು ಆಡ್ಡ ದಾರಿಯನ್ನು ಹಿಡಿಸುತ್ತಿದೆ ಎಂದು ವಿಷಾದಿಸಿದರು.

ಭಗವದ್ಗೀತೆ ಮೂಲಕ ಸಮಾಜದಲ್ಲಿ ಸುಃಖ-ಶಾಂತಿ ನೆಲೆಸುವಂತೆ ಹಾಗೂ ಪ್ರತಿ ವ್ಯಕ್ತಿಯನ್ನು ಸುಸಂಸ್ಕೃತನನ್ನಾಗಿ ರೂಪಿಸುವುದಕ್ಕೆ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನದಿಂದ 2007ರಿಂದ ನಾಡಿನಾದ್ಯಂತ ಭಗವದ್ಗೀತಾ ಅಭಿಯಾನವನ್ನು ಆರಂಭಿಸಲಾಗಿದೆ ಎಂದು ವಿವರಿಸಿದರು.

ಇಲ್ಲಿವರೆಗೆ ಈ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ನಾಡಿನಾದ್ಯಂತ ನಡೆಸಲಾಗಿದ್ದು, ಆದರೆ ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿಲ್ಲ. ಆದರೂ ಗೀತೆಯ ಮೂಲಕ ವ್ಯಕ್ತಿ ನಿರ್ಮಾಣದ ಕಾರ್ಯ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಈ ವರ್ಷದ ಮಟ್ಟಿಗೆ ಯಾವುದೇ ಸಾರ್ವಜನಿಕ ಸಮಾರಂಭಗಳಿಲ್ಲದೇ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದರು.

ಶಂಕರ ಮಠಕ್ಕೆ ಆಗಮಿಸಿದ ಶ್ರೀಗಳಿಗೆ ಪೂರ್ಣ ಕುಂಭ ಸ್ವಾಗತಿಸಲಾಯಿತು. ನಂತರ ಸ್ವಾಮಿಗಳು ಹಾಗೂ ಗಣಪತಿ ಶಾರದಾಂಬಾ ಚಂದ್ರ ಮೌಳೀಶ್ವರರ ದರ್ಶನ ಪಡೆದು ಅನುಗ್ರಹಕ್ಕೆ ಪಾತ್ರರಾದರು.

ಶಾರದಾ ಭಜನಾ ಮಂಡಳಿಯಿಂದ ಭಜನೆ ಮತ್ತು ಭಗವದ್ಗೀತಾ ಪಠಣ ಮಂಡಳಿ ಸದಸ್ಯರಿಂದ ಗೀತಾ ಪಠಣ ನಡೆಯಿತು. ಮಹಾ ಮಂಗಳಾರತಿ ನಡೆದು ಭಕ್ತಾದಿಗಳಿಗೆ ಮಹಾ ಪ್ರಸಾದ ವಿತರಿಸಲಾಯಿತು.

ಅರುಣ ಸೊಲಾಪುರಕರ, ಡಾ| ಶೈಲೇಶ ದೇಶಪಾಂಡೆ, ಡಾ| ಜಯಶ್ರೀ ಮುಂಡೇವಾಡಿ, ಶಂಕರ ಮಠದ ಅಧ್ಯಕ್ಷ ಮಹೇಶ ದೇಶಪಾಂಡೆ, ಕಾರ್ಯದರ್ಶಿ ಪ್ರಮೋದ್‌ ಶಾಸ್ತ್ರೀ, ಅಥಣಿ ಉಪಾಧ್ಯಕ್ಷ ಶ್ಯಾಮ್‌ ಜೋಶಿ, ಸದಸ್ಯರಾದ ಹನುಮಂತ ವೈದ್ಯ, ಗಿರೀಶ ಬಾಗಲಕೋಟಕರ, ರಂಗಭಟ್ಟ ಜೋಶಿ, ಕೃಷ್ಣಭಟ್‌ ಗಲಗಲಿ ಇದ್ದರು. ಗೀತಾ ಅಭಿಯಾನ ಸಮಿತಿಯ ಸಂಗನಗೌಡ ಪಾಟೀಲ ಸ್ವಾಗತಿಸಿದರು. ಡಾ| ಬಾಬುರಾಜೇಂದ್ರ ನಾಯಕ ವಂದಿಸಿದರು. ಶ್ರೀರಾಮಭಟ್‌ ಕಾರ್ಯಕ್ರಮ ನಿರೂಪಿಸಿದರು

ಟಾಪ್ ನ್ಯೂಸ್

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

kejriwal

AAP ವಿದೇಶಿ ದೇಣಿಗೆ: ED ದೂರು ಪಿತೂರಿ ಎಂದ ಕೇಜ್ರಿವಾಲ್‌ ಪಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.