ವಸತಿ ಶಾಲೆ ಉದ್ಘಾಟನೆ ವಿಳಂಬ


Team Udayavani, Dec 13, 2021, 12:36 PM IST

ವಸತಿ ಶಾಲೆ ಉದ್ಘಾಟನೆ ವಿಳಂಬ

ಕುಕನೂರು: ತಾಲೂಕಿನ ಮಂಗಳೂರು-ರ್ಯಾವಣಕಿ ಮಧ್ಯೆದಲ್ಲಿ ಇಂದಿರಾ ಗಾಂಧಿ  ವಸತಿ ಶಾಲೆ ಕಟ್ಟಡ ನಿರ್ಮಾಣವಾಗಿ ಬರೊಬ್ಬರಿ 2 ವರ್ಷಗಳೇ ಗತಿಸಿವೆ.ಆದರೂ ಉದ್ಘಾಟನೆ ಭಾಗ್ಯವನ್ನೇ ಕಂಡಿಲ್ಲ. ಈಗಲೂವಸತಿ ನಿಲಯದ ವಿದ್ಯಾರ್ಥಿಗಳು ಬಾಡಿಗೆ ಕಟ್ಟಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ. ಬಾಡಿಗೆ ಕಟ್ಟಡದಲ್ಲಿ ಸರಿಯಾದ ಸೌಲಭ್ಯಗಳು ಇಲ್ಲ ಎನ್ನುವ ಆಪಾದನೆ ಕೇಳಿ ಬಂದಿವೆ.

ಬಡ ವಿದ್ಯಾರ್ಥಿಗಳಿಗೆ ನೆರವಾಗಲಿ, ಅವರಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿ. ಯಾವುದೇಆರ್ಥಿಕತೆಯ ಸಮಸ್ಯೆಯು ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯಾಸದ ಮೇಲೆ ಪರಿಣಾಮ ಬೀರದಿರಲಿ ಎಂಬಉದ್ದೇಶದಿಂದಾಗಿ ಸರ್ಕಾರವು ವಸತಿ ನಿಲಯದಪರಿಕಲ್ಪನೆ ಜಾರಿ ತಂದಿದೆ. ಅದರಂತೆ 2016-17ರಲ್ಲಿ ಮಂಗಳೂರು ಹಾಗೂ ರ್ಯಾವಣಕಿ ಮಧ್ಯ ಇಂದಿರಾ ಗಾಂಧಿ ವಸತಿ ಶಾಲೆ ಮಂಜೂರು ಮಾಡಿದೆ. ಕಟ್ಟಡ ನಿರ್ಮಾಣವಾಗಿ ಬರೊಬ್ಬರಿ ಎರಡು ವರ್ಷ ಗತಿಸಿವೆ.ಆದರೆ ಆ ಶಾಲೆಯ ವಿದ್ಯಾರ್ಥಿಗಳು ಇಂದಿಗೂ ಬಾಡಿಗೆ ಕಟ್ಟಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ.

ಸ್ವಂತ ಕಟ್ಟಡವಿದ್ದರೂ ಬಾಡಿಗೆ ಯಾಕೆ?: ಪ್ರಸ್ತುತ ಕುಕನೂರಿನ ಖಾಸಗಿ ಗೋದಾಮಿನಲ್ಲಿ ವಸತಿ ಶಾಲೆ6ರಿಂದ 10ನೇ ತರಗತಿವರೆಗೂ 245 ವಿದ್ಯಾರ್ಥಿಗಳುಅಭ್ಯಾಸ ಮಾಡುತ್ತಿದ್ದಾರೆ. ಇದರಲ್ಲೇ ನಾಲ್ಕು ವಿಭಾಗ ಮಾಡಿ ಒಂದೊಂದು ಕಡೆ ವಿದ್ಯಾರ್ಥಿಗಳಿಗೆ ಮತ್ತೂಂದು ಕಡೆ ವಿದ್ಯಾರ್ಥಿನಿಯರಿಗೆ ಪಾಠ ಮಾಡಲಾಗುತ್ತಿದೆ. ವಿದ್ಯಾರ್ಥಿನಿಯರು ಇರುವ ಗೋದಾಮಿನ ಪಕ್ಕದಲ್ಲಿಅಡುಗೆ ಕೋಣೆಯಿದೆ. ಊಟ ತಯಾರಿಸುವಾಗ ಹೊಗೆಬರುತ್ತದೆ. ಇದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೂ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳಿರುವ ಸ್ಥಳದಪಕ್ಕದಲ್ಲಿ ಶೌಚಾಲಯ ಮತ್ತು ಸ್ನಾನಗೃಹಗಳಿದ್ದು,ದರ್ವಾಸನೆ ಮಧ್ಯೆ ಅಭ್ಯಾಸ ಮಾಡಬೇಕಿದೆ. ಮಕ್ಕಳಿಗೆಆಟದ ಮೈದಾನವಿಲ್ಲ. ತಗಡಿನ ಮೇಲ್ಛಾವಣಿ ಕೆಳಗೆಮಕ್ಕಳು ಮಳೆ, ಬಿಸಿಲು, ಚಳಿಗಾಲದಲ್ಲಿ ಅಭ್ಯಾಸ ಮಾಡಬೇಕಾಗಿದೆ.

ತರಗತಿ ನಡೆಯುವ ವೇಳೆ ಕೋತಿಗಳು ತಗಡಿನ ಮೇಲೆ ಹಾರಾಡಿದರೆ ಬೆಚ್ಚಿ ಬೀಳುವಂತಾಗುತ್ತದೆ. ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಕೋಟಿ ಕೋಟಿಖರ್ಚು ಮಾಡುತ್ತಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಸ್ವಂತಕಟ್ಟಡವೂ ನಿರ್ಮಾಣವಾಗಿದೆ. ಆದರೆ ಅಲ್ಲಿಗೆ ತೆರಳಿ ಅಭ್ಯಾಸ ಮಾಡುವಂತಿಲ್ಲ. ಏಕೆಂದರೆ ಕಟ್ಟಡವನ್ನು ಇನ್ನು ಇಲಾಖೆಗೆ ಹಸ್ತಾಂತರ ಮಾಡಿಲ್ಲ. ಹಾಗಾಗಿ ಸರ್ಕಾರಿಕಟ್ಟಡ ಉದ್ಘಾಟನೆಯ ಭಾಗ್ಯವನ್ನು ಕಂಡಿಲ್ಲ. ಇನ್ನು ವಸತಿ ಶಾಲೆಗೆ ಸ್ವಂತ ಕಟ್ಟಡವಿದ್ದರೂ ಬಾಡಿಗೆ ಕಟ್ಟಡದಲ್ಲಿ ಇನ್ನೂ ಮುಂದುವರಿಯುತ್ತಿರುವುದು ಏಕೆ? ಎನ್ನುವ ಅನುಮಾನ ಮೂಡಿದೆ. ಇಲ್ಲಿ ಬಾಡಿಗೆ ಕಟ್ಟಡಕ್ಕೆ ಸರ್ಕಾರಎರಡು ವರ್ಷದಿಂದ ಸುಮ್ಮನೆ ಲಕ್ಷಾಂತರ ರೂ. ವ್ಯಯಿಸುವುದು ಮಾತ್ರ ಸುಳ್ಳಲ್ಲ. ಜಿಲ್ಲಾ ಮಂತ್ರಿಗಳು, ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟ ತಪ್ಪಿಸಬೇಕಿದೆ.ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯ ಇರುವ ಸ್ವಂತ ಸರ್ಕಾರಿಕಟ್ಟಡವನ್ನು ಉದ್ಘಾಟಿಸಿ ಅವರ ಶಿಕ್ಷಣಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಿದೆ.

 

ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಕಳೆದಿವೆ. ನಾವು ಇಲಾಖೆಗೆ ಕಟ್ಟಡಹಸ್ತಾಂತರಿಸಲು ತೆರಳಿದರೆ ಅವರು ತೆಗೆದುಕೊಳ್ಳುತ್ತಿಲ್ಲ. ಬೇಕಿದ್ದರೆ ನಮ್ಮ ಕಟ್ಟಡದ ಕಾಮಗಾರಿ ಕಳಪೆಯಾಗಿದ್ದರೆ ಅದನ್ನುಪರಿಶೀಲನೆ ಮಾಡಲಿ. ಅವರು ಏಕೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ನಮಗೂ ಗೊತ್ತಿಲ್ಲ.  –ಪ್ರವೀಣ, ಗುತ್ತಿಗೆದಾರ

 

ವಸತಿ ಶಾಲೆ ನಿರ್ಮಾಣಗೊಂಡಿರುವ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಚುನಾವಣೆ ಮುಗಿದ ತಕ್ಷಣ ಉದ್ಘಾಟನೆ ದಿನಾಂಕ ನಿಗದಿಗೊಳಿಸಿ ಪ್ರಾರಂಭಿಸುವ ಸಿದ್ಧತೆ ನಡೆದಿದೆ.– ರವಿಶಂಕರ್‌, ಎಇಇ

 

ವಸತಿ ಶಾಲೆ ಕಟ್ಟಡ ನಿರ್ಮಾಣದ ಕಾಮಗಾರಿ ಮುಗಿದಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ನಾವೂ ಸಹ ಬಾಡಿಗೆ ಕಟ್ಟಡದಲ್ಲಿನ ಸಮಸ್ಯೆಗಳ ಕುರಿತು ಜಿಲ್ಲಾ ಅಧಿಕಾರಿಗಳ ಗಮನಕ್ಕೆತಂದಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಲೋಕಾರ್ಪಣೆ ದಿನಾಂಕ ನೀಡಲಾಗುವುದು ಎಂದು ತಿಳಿಸಿದ್ದಾರೆ. -ಗುರುಪಾದಪ್ಪ ಸೂಡಿ, ವಸತಿ ಶಾಲೆ ಪ್ರಾಚಾರ್ಯ

-ಬಸವರಾಜ ಕೊನ್ನಾರಿ

ಟಾಪ್ ನ್ಯೂಸ್

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.