ಕೇಂದ್ರ ಸರ್ಕಾರದ ಮಹತಾಕಾಂಕ್ವೆ ಈಡೇರಿಸೋಣ

ಅಂಚೆ ಇಲಾಖೆ ಉಳಿದರೆ ಮಾತ್ರ ಅಂಚೆ ನೌಕರರ ಸಂಘಟನೆ ಜೀವಂತಿಕೆಗೆ ಸಾಧ್ಯವಾಗುತ್ತದೆ.

Team Udayavani, Dec 13, 2021, 6:24 PM IST

ಕೇಂದ್ರ ಸರ್ಕಾರದ ಮಹತಾಕಾಂಕ್ವೆ ಈಡೇರಿಸೋಣ

ವಿಜಯಪುರ: ಕೇಂದ್ರ ಸರ್ಕಾರದ ಹಲವು ಮಹತ್ವದ ಯೋಜನೆಗಳು ಅಂಚೆ ಇಲಾಖೆ ಮೂಲಕ ದೇಶದ ಕಟ್ಟ ಕಡೆಯ ನಾಗರಿಕನಿಗೆ ಮುಟ್ಟುವಂತಾಗಬೇಕು ಎಂಬುದು ಪ್ರಧಾನಮಂತ್ರಿ ಆಶಯ. ಇದಕ್ಕಾಗಿ ಎಲ್ಲರೂ ಸರ್ಕಾರದ ನಿರ್ದೇಶನ ಪಾಲಿಸುವ ಮೂಲಕ ಸರ್ಕಾರದ ಮಹತ್ವಾಕಾಂಕ್ಷೆ ಈಡೇರಿಸೋಣ ಎಂದು ಎಂದು ರಾಷ್ಟ್ರೀಯ ಅಂಚೆ ನೌಕರರ ಸಂಘಗಳ ವಲಯ ಕಾರ್ಯದರ್ಶಿ ಎಸ್‌. ಖಂಡೋಜಿರಾವ್‌ ಹೇಳಿದರು.

ನಗರದ ಪ್ರಧಾನ ಅಂಚೆ ಕಚೇರಿ ಆವರಣದಲ್ಲಿ ನಡೆದ ರಾಷ್ಟ್ರೀಯ ಅಂಚೆ ನೌಕರರ ಸಂಘಗಳ ಜಂಟಿ ದ್ವೈವಾರ್ಷಿಕ ಮಹಾ ಅಧಿವೇಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಯಾವುದೇ ಹೊಸ ಯೋಜನೆಗಳನ್ನು ಕರ್ನಾಟಕ, ತಮಿಳುನಾಡು ರಾಜ್ಯಗಳ ಮೂಲಕವೇ ಜಾರಿಗೆ ತರುತ್ತಿದೆ. ಇದು ನಮಗೆ ತೊಂದರೆಯಾದರೂ ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ನಮಗೆ ವಹಿಸಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು. ಜೊತೆಗೆ ಸಂಘವನ್ನು
ಬಲಪಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ವಿಜಯಪುರ ಜಿಲ್ಲಾ ಅಂಚೆ ಅಧಿಕ ಕೆ.ರಘುನಾಥಾಮಿ ಮಾತನಾಡಿ, ನಾವೆಲ್ಲರೂ ಕರ್ತವ್ಯದಲ್ಲಿ ಪ್ರಾಮಾಣಿಕತೆ ರೂಢಿಸಿಕೊಳ್ಳಬೇಕು. ಶಿಸ್ತು, ದಕ್ಷತೆ ರೂಢಿಸಿಕೊಂಡು ಮುನ್ನಡೆದಾಗ ಮಾತ್ರ ಅಂಚೆ ಇಲಾಖೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯ ಎಂದರು.

ಅಂಚೆ ಇಲಾಖೆ ಉಳಿದರೆ ಮಾತ್ರ ಅಂಚೆ ನೌಕರರ ಸಂಘಟನೆ ಜೀವಂತಿಕೆಗೆ ಸಾಧ್ಯವಾಗುತ್ತದೆ. ಹೀಗಾಗಿ ಸರ್ಕಾರ ಅಂಚೆ ಇಲಾಖೆ ಮೂಲಕ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತರುತ್ತಿದೆ. ಹೆಚ್ಚು ಉಳಿತಾಯ ಖಾತೆ ತೆರೆಯಬೇಕು ಎನ್ನುವ ಗುರಿ ಮುಟ್ಟುವಲ್ಲೂ ನಾವು ಯಶಸ್ವಿಯಾಗಬೇಕಿದೆ ಎಂದರು. ಪೋಸ್ಟ್‌ಮನ್‌ ಮತ್ತು ಎಂಟಿಎಸ್‌ ನೌಕರರ ಸಂಘಟನೆಯ ವಲಯ ಕಾರ್ಯದರ್ಶಿ ಆರ್‌.ಮಹಾದೇವ ಮಾತನಾಡಿ, ಅಂಚೆ ಇಲಾಖೆಯನ್ನು ಸರ್ಕಾರ ಖಾಸಗೀಕರಣ ಮಾಡಬಾರದು.

ಇಲಾಖೆಯು ಪ್ರತಿ ವರ್ಷ 19,600 ಕೋಟಿ ರೂ. ನಷ್ಟದಲ್ಲಿದೆ ಎಂದರೆ ಅದಕ್ಕೆ ನಮ್ಮ ಉನ್ನತ ಅಧಿಕಾರಿಗಳ ಅನುಷ್ಠಾನದಲ್ಲಿನ ಲೋಪ ಹಾಗೂ ತಪ್ಪು ನಿರ್ಧಾರಗಳೇ ಕಾರಣ. ಹೀಗಾಗಿ ಸರ್ಕಾರ ನಮ್ಮ ಇಲಾಖೆಯ ಖಾಸಗೀಕರಣದ ಚಿಂತನೆ ಮಾಡಬಾರದು ಎಂದು ಮನವಿ ಮಾಡಿದರು. ಉತ್ತರ ಕರ್ನಾಟಕ ವಲಯ ಪ್ರತಿನಿಧಿ  ರಾಜು ಮಡಿವಾಳರ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರ ವಿಭಾಗದ ಗ್ರೂಫ್‌ ಸಿ ನೌಕರರ ಅಧ್ಯಕ್ಷ ರವಿ ಬಬಲೇಶ್ವರ ಮಾತನಾಡಿದರು.
ಎಸ್‌.ಎ. ಜಮಾದಾರ, ಸದಾಶಿವ ತೊರವಿ ವೇದಿಕೆಯಲ್ಲಿದ್ದರು.

ಇದೇ ಸಂದರ್ಭದಲ್ಲಿ ನಿವೃತ್ತರಾದ ಹಾಗೂ ಭಡ್ತಿ ಹೊಂದಿದ ಅಂಚೆ ಇಲಾಖೆ ನೌಕರರನ್ನು ಸನ್ಮಾನಿಸಲಾಯಿತು. ವಿಭಾಗದ ಕಾರ್ಯದರ್ಶಿ ಎಸ್‌.ಬಿ. ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ದಿಲೀಪ ಮೇಲಿನಕೇರಿ ಪ್ರಾರ್ಥಿಸಿದರು. ಜಗನ್ನಾಥ ದೇಸಾಯಿ ಸ್ವಾಗತಿಸಿದರು. ರವಿ ಗೋಕಾವಿ ನಿರೂಪಿಸಿದರು. ಶಿವಾನಂದ ದಳವಾಯಿ ವಂದಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.