ವಾರಾಣಸಿ ಪಟ್ಟಣದಲ್ಲಿ ತಡರಾತ್ರಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಪ್ರಧಾನಿ ಮೋದಿ
Team Udayavani, Dec 14, 2021, 9:36 AM IST
ವಾರಾಣಸಿ: ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಧ್ಯರಾತ್ರಿಯವರೆಗೂ ಸಭೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ತಡರಾತ್ರಿ ಬನಾರಸ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು.
ಸೋಮವಾರ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ದೇವಸ್ಥಾನದ ಕಾರಿಡಾರ್ ನ ಮೊದಲ ಹಂತದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ರಾತ್ರಿ ಗಂಗಾರತಿಯಲ್ಲಿ ಪಾಲ್ಗೊಂಡ ಬಳಿಕ ಬಿಜೆಪಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದರು.
ಪ್ರಧಾನಿಯವರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ಫೋಟೋಗಳಲ್ಲಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾರಾಣಸಿ ಪಟ್ಟಣದಲ್ಲಿ ಮೋದಿ ಜೊತೆಗೆ ಪರಿಶೀಲನೆ ನಡೆಸುತ್ತಿರುವುದು ಕಾಣಬಹುದು.
Inspecting key development works in Kashi. It is our endeavour to create best possible infrastructure for this sacred city. pic.twitter.com/Nw3JLnum3m
— Narendra Modi (@narendramodi) December 13, 2021
“ಮುಂದಿನ ನಿಲ್ದಾಣ…ಬನಾರಸ್ ನಿಲ್ದಾಣ. ನಾವು ರೈಲು ಸಂಪರ್ಕವನ್ನು ಹೆಚ್ಚಿಸಲು ಹಾಗೂ ಸ್ವಚ್ಛ, ಆಧುನಿಕ ಮತ್ತು ಪ್ರಯಾಣಿಕರ ಸ್ನೇಹಿ ರೈಲು ನಿಲ್ದಾಣಗಳನ್ನು ಖಚಿತಪಡಿಸಿಕೊಳ್ಳಲು ಕೆಲಸ ಮಾಡುತ್ತಿದ್ದೇವೆ.” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಪುರಾತನ ಕಾಶಿಗೆ ನವೀನ ಮನೋಹರ ರೂಪ
ಬಿಜೆಪಿಯು ವಾರಣಾಸಿಯ ಕಾರ್ಯಕ್ರಮಗಳ ಮೂಲಕ ಒಗ್ಗಟ್ಟಿನ ಪ್ರದರ್ಶನವನ್ನು ಮಾಡಿದೆ, ದೇಶದಾದ್ಯಂತದ ಎಲ್ಲಾ ಬಿಜೆಪಿ ಮುಖ್ಯಮಂತ್ರಿಗಳು ಸೋಮವಾರ ವಾರಾಣಸಿಗೆ ಆಗಮಿಸಿದ್ದರು. ಅವರೊಂದಿಗೆ ಪ್ರಧಾನಿಯವರು ಪರಿಶೀಲನಾ ಸಭೆಯನ್ನೂ ನಡೆಸಿದರು.
Just concluded an extensive meeting in Kashi with @BJP4India Chief Ministers and Deputy Chief Ministers. pic.twitter.com/UCUsMndhwW
— Narendra Modi (@narendramodi) December 13, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!