ವಿಕಲಚೇತನ ಪ್ರಮಾಣಪತ್ರ ಪಡೆಯಲು ಪರದಾಟ


Team Udayavani, Dec 14, 2021, 12:29 PM IST

14certificate

ಸುರಪುರ: ವಿಕಲಚೇತನ ಪ್ರಮಾಣಪತ್ರ ನೀಡುವ ಕಚೇರಿ ತಾಲೂಕು ಕೇಂದ್ರಗಳಲಿಲ್ಲದೇ ವಿಕಲಾಂಗರು ಪ್ರಮಾಣಪತ್ರ ಪಡೆಯಲು ಪರದಾಡುವಂತಾಗಿದೆ. ಇದರಿಂದ ಸೌಲಭ್ಯಗಳಿಂದ ವಂಚಿತರಾಗುವಂತಾಗಿದೆ.

ಸರ್ಕಾರ ವಿಕಲಾಂಗರ ಸಬಲೀಕರಣಕ್ಕಾಗಿ ಪ್ರತ್ಯೇಕ ಮಂತ್ರಾಲಯ ಸ್ಥಾಪಿಸಿದ್ದು ಅನೇಕ ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಸಮರ್ಪಕ ಅನುಷ್ಠಾನಗೊಳಿಸಲು ಪ್ರತಿ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತ್ಯೇಕ ಕಚೇರಿ ಸ್ಥಾಪಿಸಿದೆ. ಅಂದರೆ ವಿಕಲಾಂಗ ಪ್ರಮಾಣಪತ್ರ ನೀಡುವ ಕಚೇರಿ ಸ್ಥಾಪಿಸುವುದನ್ನು ಮರೆತು ಬಿಟ್ಟಿದೆ.

ವಿಕಲಾಂಗರು ಸೌಲಭ್ಯ ಪಡೆಯಲು ಪ್ರಮಾಣಪತ್ರ ಕಡ್ಡಾಯಗೊಳಿಸಲಾಗಿದೆ. ಶೇ.60 ಮೇಲ್ಪಟ್ಟು ಅಂಗವಿಕಲತೆ ಹೊಂದಿದ್ದರೆ ಮಾತ್ರ ಸೌಲಭ್ಯಕ್ಕೆ ಅರ್ಹರು. ಪ್ರತಿಶತ ಅಂಗವಿಕಲತೆ ಇದ್ದರೂ ಪ್ರಮಾಣಪತ್ರ ಇಲ್ಲದೇ ಸೌಲಭ್ಯ ಪಡೆಯುವಂತಿಲ್ಲ. ಪ್ರಮಾಣಪತ್ರ ನೀಡುವ ಅಧಿಕಾರ ಜಿಲ್ಲಾ ಮಟ್ಟದ ವಿಶೇಷ ವೈದ್ಯರಿಗೆ ನೀಡಿದ್ದು, ತಾಲೂಕಿನ ವಿಕಲಾಂಗರು ಪ್ರಮಾಣಪತ್ರಕ್ಕಾಗಿ ಪರದಾಡುತಿದ್ದಾರೆ.

ಶ್ರವಣದೋಷ (ಮೂಗರು, ಕಿವುಡರು) ಪ್ರಮಾಣಪತ್ರಕ್ಕೆ ರಾಯಚೂರು ಬುದ್ಧಿಮಾಂದ್ಯತೆ ಮತ್ತು ದೃಷ್ಟಿಹೀನತೆ ಪ್ರಮಾಣಪತ್ರಕ್ಕೆ ಯಾದಗಿರಿ ಜಿಲ್ಲಾಸ್ಪತ್ರೆಗೆ ಹೋಗಬೇಕು. ಕೆಲಸದ ನೆಪದಿಂದ ವೈದ್ಯರು ಸಕಾಲಕ್ಕೆ ಸಿಗಲ್ಲ. ಪ್ರಮಾಣಪತ್ರ ಪಡೆಯಲು ಮೂರ್‍ನಾಲ್ಕು ಬಾರಿ ಅಲೆದಾಡಬೇಕು. 8-10 ಸಾವಿರ ಖರ್ಚು ಆಗುತ್ತದೆ. ಪ್ರಮಾಣಪತ್ರ ಸರಳವಾಗಿ ಸಿಗುತ್ತಿಲ್ಲ. ಇದರಿಂದ ಮಹತ್ವಾಕಾಂಕ್ಷಿ ಯೋಜನೆ ಅರ್ಹರಿಗೆ ತಲುಪದೇ ವಿಫಲವಾಗುತ್ತಿದೆ ಎಂದು ವಿಕಲಾಂಗರು ಆರೋಪಿಸುತ್ತಾರೆ.

ವಿಕಲಚೇತನರ ಸೌಲಭ್ಯಕಾಗಿ ನಗರಸಭೆ, ಪುರಸಭೆ, ಪಪಂ ಮತ್ತು ಗ್ರಾಪಂನಲ್ಲಿ ಶೇ.5 ಅನುದಾನ ಮೀಸಲಾಗಿರುತ್ತದೆ. ಸಾಲ, ಸೌಲಭ್ಯ, ಬಗಲಬಡಿಗೆ, ವ್ಹೀಲ್‌ಚೇರ್‌, ಸೈಕಲ್‌ ರಿಕ್ಷಾ, ಕುರ್ಚಿ, ಲ್ಯಾಪ್‌ ಟ್ಯಾಪ್‌, ಶ್ರವಣ ಮಷೀನ್‌, ಗ್ಯಾಸ್‌, ಶಿಷ್ಯ ವೇತನ ಸೇರಿದಂತೆ ಇತರೆ ಸೌಲಭ್ಯ ನೀಡಲು ಅವಕಾಶವಿದೆ. ಆದರೆ ಗ್ರಾಪಂಗಳಲ್ಲಿ ಅನುದಾನ ಬಳಕೆಯಾಗಿಲ್ಲ. ವಿಕಲಚೇತನರನ್ನು ಸೌಲಭ್ಯದಿಂದ ವಂಚಿತರನ್ನಾಗಿ ಮಾಡಲಾಗಿದೆ ಎಂದು ವಿಕಲಚೇತನ ಸಂಘದ ತಾಲೂಕು ಅಧ್ಯಕ್ಷ ನಾಗೇಂದ್ರ ದೊರೆ ಚಂದ್ಲಾಪುರ ದೂರಿದ್ದಾರೆ.

700 ಶ್ರವಣದೋಷ, 60 ಕುಷ್ಠರೋಗಿಗಳು, 900 ಬುದ್ಧಿಮಾಂದ್ಯರು, 650 ಅಂಧರು, 1250 ಬಹುವಿಧ ವಿಕಲಾಂಗರು, 2050 ದೈಹಿಕ ವಿಕಲರು ಸೇರಿ ತಾಲೂಕಿನಲ್ಲಿ 6 ಸಾವಿರಕ್ಕೂ ಹೆಚ್ಚು ನೋಂದಾಯಿತರಿದ್ದಾರೆ. 3000 ಜನ ಪ್ರಮಾಣಪತ್ರ ಪಡೆದಿದ್ದು ಉಳಿದವರು ಪಡೆಯಲು ಸಾಧ್ಯವಾಗಿಲ್ಲ. ಹೊಸದಾಗಿ ಸಾವಿರಕ್ಕೂ ಹೆಚ್ಚು ಅರ್ಜಿ ಬಂದಿವೆ ಎಂದು ತಾಪಂ ಎಂಆರ್‌ ಡಬ್ಯೂ ಮಾಳಪ್ಪ ಪೂಜಾರಿ ತಿಳಿಸಿದ್ದಾರೆ.

ತಾಲೂಕು ಕೇಂದ್ರಗಳಲ್ಲಿ ಕಚೇರಿ ಸ್ಥಾಪನೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ್ದೇವೆ. ಸಚಿವರು, ಶಾಸಕರು, ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ. ಮನವಿಗಳೆಲ್ಲ ಕಸದ ಬುಟ್ಟಿ ಸೇರುತ್ತಿವೆ. ನಮ್ಮ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ಸಂಗನಗೌಡ ಧನರೆಡ್ಡಿ, ವಿಕಲಚೇತನರ ಸಂಘದ ಜಿಲ್ಲಾಧ್ಯಕ್ಷ

ಪ್ರಮಾಣಪತ್ರಕ್ಕಾಗಿ ರಾಯಚೂರು- ಯಾದಗಿರಿಗೆ ಒಂದು ವರ್ಷದಿಂದ ಅಲೆದಿದ್ದೇನೆ. ಆದರೂ ಪ್ರಮಾಣಪತ್ರ ಸಿಕ್ಕಿಲ್ಲ. ಖರ್ಚು ಮಾಡಿ ಅಲೆಯವುದು ಆಗುತ್ತಿಲ್ಲ. ಕಾನೂನು ಸೇವಾ ಸಮಿತಿಯವರು ಪ್ರಮಾಣಪತ್ರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ತಾಲೂಕು ಕೇಂದ್ರದಲ್ಲಿ ಕಚೇರಿ ಸ್ಥಾಪಿಸಿದರೆ ಬಡವರಿಗೆ ಅನುಕೂಲವಾಗುತ್ತದೆ. ಬಲಭೀಮ ಬಾದ್ಯಾಪುರ, ವಿಕಲಚೇತನ

-ಸಿದ್ದಯ್ಯ ಪಾಟೀಲ

ಟಾಪ್ ನ್ಯೂಸ್

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

IPL 2024: ಅಂತಿಮ ಪಂದ್ಯದಲ್ಲಿ ಮುಂಬೈಗೆ ಲಕ್ನೋ ಎದುರಾಳಿ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.