ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ
Team Udayavani, Dec 15, 2021, 10:17 AM IST
ಕುಷ್ಟಗಿ: ತಾಲೂಕಿನ ಬೊಮ್ಮನಾಳ ಗ್ರಾಮದ ಹೊರ ವಲಯದಲ್ಲಿ ಮಹಿಳೆಗೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಹಿಡಿದು ಹಿಗ್ಗಾ ಮುಗ್ಗ ಥಳಿಸಿದ್ದಲ್ಲದೇ, ಆತನಿಗೆ ಚಪ್ಪಲಿ ಹಾರ ಹಾಕಿ ಊರು ತುಂಬ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ಪ್ರಕಾಶ ಎನ್ನುವ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಈ ವ್ಯಕ್ತಿ ಹೊಲದಲ್ಲಿ ಕುರಿ ಹಟ್ಟಿಯಲ್ಲಿ ಕೆಲಸದಲ್ಲಿ ತೊಡಗಿದ್ದ ಮಹಿಳೆಯನ್ನು ಗೊಬ್ಬರದ ಚೀಲ ಎತ್ತುವಂತೆ ಕರೆದಿದ್ದಾನೆ. ಆ ಮಹಿಳೆ ಎತ್ತಲು ಬಂದ ವೇಳೆ ಆ ಮಹಿಳೆಯ ಕೈ ಹಿಡಿದು ಅತ್ಯಾಚಾರಕ್ಕೆ ಯತ್ನ ಮಾಡಿದ್ದಾನೆ. ಇದರಿಂದ ಭಯಗೊಂಡ ಮಹಿಳೆ ಆತನ ಕೈಯಿಂದ ಬಿಡಿಸಿಕೊಂಡು ಗ್ರಾಮಕ್ಕೆ ಬಂದು ತಮ್ಮ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಘಟನೆ ತಿಳಿದ ತಕ್ಷಣ ಕುರುಬ ಮತ್ತು ವಾಲ್ಮಿಕಿ ಸಮುದಾಯದ ನಡುವೆ ಗಲಾಟೆ ನಡೆದಿದೆ. ಮಹಿಳೆಯ ಕಡೆ ಕೆಲವರು ಆರೋಪಿ ಪ್ರಕಾಶನಿಗೆ ಚಪ್ಪಲಿ ಹಾರ ಹಾಕಿ, ಬೇವಿನ ಹಾರ ಹಾಕಿ ಊರು ತುಂಬ ಮೆರವಣಿಗೆ ಮಾಡಿದ್ದಲ್ಲದೆ ಮಹಿಳೆಯಿಂದ ಚಪ್ಪಲಿ ಏಟಿ ನಲ್ಲಿ ಬಡಿಸಿದ ವೀಡಿಯೋ ವೈರಲ್ ಆಗಿದೆ.
ಘಟನೆ ಸಂಬಂಧ ಎರಡೂ ಸಮುದಾಯದ ಮಧ್ಯೆ ಗಲಾಟೆ ನಡೆದಿದೆ. ಹನುಮಸಾಗರ ಪೊಲೀಸ್ ಠಾಣೆಯಲ್ಲಿ ತಡ ರಾತ್ರಿ ವರೆಗೂ ರಾಜಿ ಸಂಧಾನ ನಡೆಸುವ ಪ್ರಯತ್ನಗಳು ನಡೆದು ಕೊನೆಗೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಿಳೆ ಕಡೆಯಿಂದ ಅತ್ಯಾಚಾರಕ್ಕೆ ಯತ್ನ ಆರೋಪದಡಿ 27 ಜನರ ಮೇಲೆ ಕೇಸ್ ದಾಖಲಾಗಿದ್ದರೆ, ಆರೋಪಿ ಕಡೆಯಿಂದಲೂವ ಜಾತಿ ನಿಂದನೆ ಆರೋಪದಡಿ 27 ಜನರ ಮೇಲೆ ಪ್ರತಿದೂರು ದಾಖಲಾಗಿದೆ.
ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನು ಚಪ್ಪಲಿ ಹಾರ ಹಾಕಿ ಮೆರವಣಿಗೆಯಲ್ಲಿ ತೊಡಗಿದ 6 ಜನರನ್ನು ಪೊಲೀಸರು ಗುರುತು ಮಾಡಿದ್ದು, ಅವರಿಗೆ ಶೋಧ ಕಾರ್ಯ ನಡೆದಿದೆ ಎಂದು ಕೊಪ್ಪಳ ಎಸ್ಪಿ ಟಿ ಶ್ರೀಧರ್ ಅವರು ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್