ಪ್ರತಿಭಟನೆ ತಾತ್ಕಾಲಿಕ ಸ್ಥಗಿತಗೊಳಿಸಿದ್ದೇವೆ ವಿನಃ, ಹಿಂಪಡೆದಿಲ್ಲ: ರಾಕೇಶ್ ಟಿಕಾಯತ್
ಮೂರು ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರದ ಜತೆ ಮಾತುಕತೆ ಮುಂದುವರಿದಿದೆ.
Team Udayavani, Dec 15, 2021, 12:49 PM IST
ನವದೆಹಲಿ:ವಿವಿಧ ಬೇಡಿಕೆಗಳ ಈಡೇರಿಕೆ ಕುರಿತು ಕೇಂದ್ರ ಸರ್ಕಾರದ ಜತೆಗಿನ ಮಾತುಕತೆ ಪೂರ್ಣಗೊಳ್ಳುವವರೆಗೂ ನಮ್ಮ ಹೋರಾಟವನ್ನು ಕೆಲವು ಕಾಲದವರೆಗೆ ಸ್ಥಗಿತಗೊಳಿಸಿದ್ದೇವೆಯೇ ವಿನಃ, ಪೂರ್ಣ ಪ್ರಮಾಣದಲ್ಲಿ ಹಿಂಪಡೆಯಲಿಲ್ಲ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಬುಧವಾರ(ಡಿಸೆಂಬರ್ 15) ತಿಳಿಸಿದ್ದಾರೆ.
ಇದನ್ನೂ ಓದಿ:ಅಲ್ಪಸಂಖ್ಯಾತರ ರಕ್ಷಣೆಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿ : ಸಿ.ಟಿ.ರವಿ
ನಮ್ಮ ಹೋರಾಟಕ್ಕೆ ಕೈಜೋಡಿಸಿದ ಪ್ರತಿಯೊಬ್ಬರಿಗೂ ನಾನು ಈ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತೇವೆ. ಅಲ್ಲದೇ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಗ್ರಾಮಸ್ಥರು, ಸಾರ್ವಜನಿಕರಿಗೂ ಅಭಿನಂದನೆ ಸಲ್ಲಿಸುವುದಾಗಿ ಟಿಕಾಯತ್ ಹೇಳಿದರು.
ಕೇಂದ್ರ ಸರ್ಕಾರ ಹಿಂಪಡೆದಿರುವ ಮೂರು ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಸರ್ಕಾರದ ಜತೆ ಮಾತುಕತೆ ಮುಂದುವರಿದಿದೆ. ನಮ್ಮ ಹೋರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ, ಆದರೆ ಹಿಂಪಡೆಯಲಿಲ್ಲ ಎಂದು ಟಿಕಾಯತ್ ತಿಳಿಸಿದರು.
ಕೇಂದ್ರದ ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಕಳೆದ ಒಂದು ವರ್ಷದಿಂದ ಉತ್ತರಪ್ರದೇಶ, ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇದೀಗ ಹೋರಾಟವನ್ನು ಸ್ಥಗಿತಗೊಳಿಸಿ ತಮ್ಮ ಮನೆಗಳಿಗೆ ವಾಪಸ್ ಆಗುತ್ತಿರುವ ಹಿನ್ನೆಲೆಯಲ್ಲಿ ಟಿಕಾಯತ್ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ದೆಹಲಿ-ಹರ್ಯಾಣ ಗಡಿ ಭಾಗದಲ್ಲಿ ರೈತರು ಶನಿವಾರದಿಂದ ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಲು ಆರಂಭಿಸಲಿದ್ದಾರೆ. ಬುಧವಾರ ಬೆಳಗ್ಗೆ ಗಾಜಿಪುರ ಗಡಿಯಿಂದ ರೈತರು ನಿರ್ಗಮಿಸಲಿದ್ದಾರೆ. ಆದರೆ ಕೆಲವು ಮಂದಿ ಪ್ರತಿಭಟನಾಕಾರರು ಮಾತ್ರ ಅಲ್ಲಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ