ಪರಿಷತ್‌ನ ಘನತೆ ಎತ್ತಿಹಿಡಿಯುವ ಕೆಲಸವಾಗಲಿ


Team Udayavani, Dec 16, 2021, 6:00 AM IST

ಪರಿಷತ್‌ನ ಘನತೆ ಎತ್ತಿಹಿಡಿಯುವ ಕೆಲಸವಾಗಲಿ

ಪ್ರಜಾಪ್ರಭುತ್ವದಲ್ಲಿ ಲೋಕಸಭೆ, ರಾಜ್ಯಸಭೆ, ರಾಜ್ಯಗಳ ವಿಧಾನಸಭೆ, ವಿಧಾನಪರಿಷತ್‌ಗೆ ತನ್ನದೇ ಆದ ಘನತೆ ಇದೆ. ಇವೆಲ್ಲವೂ ದೇಶದ ಹಿತ ಮತ್ತು ಅಭಿವೃದ್ಧಿಗೆ ಬೇಕಾದ ಶಾಸನ ರೂಪಿಸುವಂಥವು. ಇಲ್ಲಿಗೆ ಆರಿಸಿ ಬರುವವರ ಮೇಲೆಯೂ ಅಂಥದ್ದೇ ಒಂದು ದೊಡ್ಡ ಗೌರವವೂ ಇರುತ್ತದೆ.

ಇತ್ತೀಚಿನ ದಿನಗಳಲ್ಲಿ ಸಂಸತ್‌ ಸೇರಿದಂತೆ ವಿಧಾನಸಭೆ ಅಧಿವೇಶನಗಳಲ್ಲಿ ಚರ್ಚೆಗಿಂತ ಹೆಚ್ಚಾಗಿ ಗದ್ದಲ, ಗಲಾಟೆ ಯೇ ಕಾಣಿಸುತ್ತಿದೆ. ಅದರಲ್ಲೂ ವಿಚಾರವೊಂದನ್ನು ಹಿಡಿದುಕೊಂಡು ಆಡಳಿತ ಮತ್ತು ವಿಪಕ್ಷಗಳು ಸ್ವಪ್ರತಿಷ್ಠೆ ಯಿಂದ ವರ್ತಿಸುತ್ತಿರುವುದೂ ಸಾಮಾನ್ಯ ಸಂಗತಿಯಾಗಿದೆ. ಈಗ ರಾಜ್ಯಸಭೆಯಲ್ಲಿ 12 ಸದಸ್ಯರನ್ನು ಮುಂಗಾರು ಅಧಿವೇಶನದ ಕಡೇ ದಿನ ನಡೆಸಿದ ದಾಂಧಲೆಯ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ. ಇವರ ಅಮಾನತು ರದ್ದತಿಗಾಗಿ ವಿಪಕ್ಷಗಳು ಸಂಸತ್‌ ಅಧಿವೇಶನದ ಮೊದಲ ದಿನದಿಂದಲೂ ಸದನದ ಹೊರಗೆ ಮತ್ತು ಒಳಗೆ ಪ್ರತಿಭಟನೆ ನಡೆಸಿಕೊಂಡೇ ಬಂದಿವೆ. ಈಗಲೂ ಇದಕ್ಕೆ ಒಂದು ತಾರ್ಕಿಕ ಅಂತ್ಯ ಸಿಕ್ಕಿಲ್ಲ.

ರಾಷ್ಟ್ರಮಟ್ಟದಲ್ಲಿ ಈ ರೀತಿಯಾದರೆ, ರಾಜ್ಯದ ವಿಧಾನಸಭೆ ಮತ್ತು ಪರಿಷತ್‌ ಗದ್ದಲದ ತಾಣಗಳಾಗಿ ಮಾರ್ಪಾಡಾಗಿರುವುದು ಕಂಡು ಬರುತ್ತಿದೆ. ಸದ್ಯ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸಭಾಪತಿ ಯವರ ಆದೇಶ ಉಲ್ಲಂ ಸಿದ ಕಾರಣಕ್ಕಾಗಿ 14 ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಸ್ವತಃ ಸಭಾಪತಿ ಬಸವರಾಜ ಹೊರಟ್ಟಿಯವರೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ:ಎನ್‌ಕೌಂಟರ್‌: ಎ+ ಕೆಟಗರಿಯ ಹಿಜ್ಬುಲ್‌ ಉಗ್ರನ ಹತ್ಯೆ

ಮೊದಲಿನಿಂದಲೂ ರಾಜ್ಯಸಭೆ ಮತ್ತು ವಿಧಾನಪರಿಷತ್‌ ಮೇಲ್ಮನೆ ಎಂದೇ ಹೆಗ್ಗಳಿಕೆ ಪಡೆದಿರುವ ಸದನಗಳು. ಇಲ್ಲಿಗೆ ಆಯ್ಕೆಯಾಗಿ ಬರುವವರು ಹಿರಿಯರು, ಬುದ್ಧಿಜೀವಿಗಳು, ಸಾಕಷ್ಟು ಅರಿತುಕೊಂಡವರು ಎಂಬುದು. ಆದರೆ ಇತ್ತೀಚಿನ ದಿನದಲ್ಲಿ ರಾಜ್ಯಸಭೆ ಮತ್ತು ವಿಧಾನಪರಿಷತ್‌ಗಳಿಗೆ ಈ ವರ್ಗಗಳಿಗಿಂತ ಹೆಚ್ಚಾಗಿ ರಾಜಕೀಯವಾಗಿ ಲೋಕಸಭೆ ಮತ್ತು ವಿಧಾನಸಭೆಗೆ ಪ್ರವೇಸಿಸಲು ಆಗದೇ ಇರುವಂಥವರೇ ಬರುತ್ತಿದ್ದಾರೆ. ಅಷ್ಟೇ ಅಲ್ಲ, ಮಂಗಳವಾರ ವಷ್ಟೇ ಕರ್ನಾಟಕದಲ್ಲಿ ಪರಿಷತ್‌ ಚುನಾವಣೆಯ ಫ‌ಲಿತಾಂಶ ಹೊರಬಿದ್ದಿದ್ದು, ಇದರಲ್ಲಿ 11 ಮಂದಿ ವಿಧಾನಸಭೆ ಯಲ್ಲಿ ಈಗ ಮತ್ತು ಈ ಹಿಂದೆ ಇದ್ದವರ ಕುಟುಂಬಸ್ಥರೇ ಆಗಿದ್ದಾರೆ.

ಈ ಕಾರಣದಿಂದಾಗಿಯೇ ಈಗ ಪರಿಷತ್‌ಗೆ ತಜ್ಞರು, ವಿಚಾರವಾದಿಗಳು, ಹಿರಿಯರು ಬರುತ್ತಿಲ್ಲ. ಇದರ ಬದಲಾಗಿ ಹಿಂಬಾಗಿಲ ಮೂಲಕ ರಾಜಕೀಯದಲ್ಲಿರುವವರೇ ಪ್ರವೇಶಿಸುತ್ತಿದ್ದಾರೆ. ಕೆಳಮನೆಯಲ್ಲಿ ಕಾಣಿಸುವಂಥ ಜಗಳ, ಗದ್ದಲ, ಗಲಾಟೆಗಳು ಮೇಲ್ಮನೆಯಲ್ಲೂ ಹೆಚ್ಚಾಗುತ್ತಿವೆ. ಇದರಿಂದ ಪರಿಷತ್‌ ಘನತೆಗೆ ಕುಂದು ಉಂಟಾಗುತ್ತದೆಯೋ ಹೊರತು, ಬೇರೇನೂ ಅಲ್ಲ.

ಪರಿಷತ್‌ ಅನ್ನು ಮೇಲ್ಮನೆ ಅಥವಾ ಹಿರಿಯರ ಸದನ ಎಂದು ಕರೆದಿರುವ ಕಾರಣಕ್ಕಾದರೂ ಇದರ ಸದಸ್ಯರು ಜವಾಬ್ದಾರಿಯಿಂದ ವರ್ತಿಸಬೇಕು. ಸರಕಾರಗಳು ಕೆಳಮನೆಯಲ್ಲಿ ಅನುಮೋದನೆ ನೀಡುವ ಮಸೂದೆಗಳಿಗೆ, ಇಲ್ಲಿ ಒಂದು ಚರ್ಚೆ ಮಾಡಿ, ಅದರ ಸಾಧಕ

ಬಾಧಕಗಳ ಕುರಿತಂತೆ ಅವಲೋಕಿಸಿ, ಸಾಧ್ಯವಾದಷ್ಟು ಸಲಹೆ ಸೂಚನೆಗಳನ್ನು ನೀಡುವಂತಿರಬೇಕು. ಇದಕ್ಕೆ ಬದಲಾಗಿ ಗದ್ದಲವೇ ಕಲಾಪ ಕೇಂದ್ರಿತವಾಗಬಾರದು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.