ಉಸ್ಮಾನಾಬಾದ್ ಬ್ಯಾಂಕ್; 4 ಹೊಸ ಶಾಖೆ ಶುರು
Team Udayavani, Dec 17, 2021, 5:15 PM IST
ಬೀದರ: ವರ್ಷದೊಳಗೆ ಕರ್ನಾಟಕದಲ್ಲಿ ಉಸ್ಮಾನಾಬಾದ್ ಜನತಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಬ್ಯಾಂಕ್ನ ನಾಲ್ಕು ಹೊಸ ಶಾಖೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ವಸಂತರಾವ್ ನಾಗದೆ ಹೇಳಿದರು.
ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಯುಕ್ತ ಬ್ಯಾಂಕ್ ಸದಸ್ಯರು ಹಾಗೂ ಗ್ರಾಹಕರ ವತಿಯಿಂದ ನಗರದ ಕೃಷ್ಣ ರಿಜೆನ್ಸಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಭಾಲ್ಕಿ, ಕಲಬುರಗಿ, ಬೆಳಗಾವಿ ಹಾಗೂ ಧಾರವಾಡದಲ್ಲಿ ಹೊಸ ಶಾಖೆಗಳನ್ನು ತೆರೆಯುವ ಯೋಜನೆ ಇದೆ. ಈಗಾಗಲೇ ಬ್ಯಾಂಕ್ ಮಹಾರಾಷ್ಟ್ರ ಹಾಗೂ ಕರ್ನಾಟಕ ಸೇರಿ ಒಟ್ಟು30 ಶಾಖೆಗಳನ್ನು ಹೊಂದಿದೆ. ಜಿಲ್ಲೆಯಲ್ಲಿ ಬೀದರ ಹಾಗೂ ಬಸವಕಲ್ಯಾಣದಲ್ಲಿ ಶಾಖೆಗಳು ಇವೆ ಎಂದರು.
ಬ್ಯಾಂಕ್ ಒಟ್ಟು 1,754 ಕೋಟಿ ರೂ. ಠೇವಣಿ ಹೊಂದಿದೆ. 1,005 ಕೋಟಿ ರೂ. ಸಾಲ ವಿತರಿಸಿದೆ. ಕಳೆದ ವರ್ಷ 40.17 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಪ್ರತಿಷ್ಠಿತ ಬ್ಯಾಂಕ್ ವಿವಿಧ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಿದೆ. ಜನರ ಆರ್ಥಿಕ ಮಟ್ಟ ಸುಧಾರಣೆಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.
ಬ್ಯಾಂಕ್ ಹಿರಿಯ ಸದಸ್ಯ ಮಾಧವರಾವ್ ಬಿರಾದಾರ ಮಾತನಾಡಿ, ಬೀದರನವರೇ ಆದ ವಸಂತರಾವ್ ನಾಗದೆಅವರುಉಸ್ಮಾನಾಬಾದ್ಜನತಾ ಬ್ಯಾಂಕ್ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಬ್ಯಾಂಕ್ ಇಂದು ಸಹಕಾರ ಕ್ಷೇತ್ರದಲ್ಲಿ ಛಾಪು ಮೂಡಿಸುವಲ್ಲಿ ಅವರ ಕೊಡುಗೆ ಬಹುದೊಡ್ಡದಾಗಿದೆ ಎಂದರು.
ಬ್ಯಾಂಕ್ ಸದಸ್ಯರಾದ ಬಾಬುರಾವ್ ಕಾರಬಾರಿ, ವೆಂಕಟೇಶ ಮಾಯಿಂದೆ, ಬಿ.ಎಸ್. ಕುದರೆ, ಉದಯಭಾನು ಹಲವಾಯಿ, ರಾಜೇಂದ್ರ ಶರ್ಮಾ, ಮಹಮ್ಮದ್ ಸಲೀಮೊದ್ದಿನ್, ಮಹಮ್ಮದ್ ಫಯಾಜ್, ಮಹಮ್ಮದ್ ಸಮಿಯೊದ್ದಿನ್ ಬಂದಿಲಿ, ಶಾಖೆ ವ್ಯವಸ್ಥಾಪಕ ಪಿ.ಆರ್. ಮಾನೆ, ದಿಗಂಬರ ಮಾನಕರಿ, ಸೈಯದ್ ಗಿಯಾಸೊದ್ದಿನ್, ರಂಜೀತ್ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್