ಭಾವೈಕ್ಯತೆಯಿಂದ ಬಾಳಿದರೆ ಭಗವಂತನ ಸಾಕ್ಷಾತ್ಕಾರ

ಜಾಗತಿಕ ಬದಲಾವಣೆಯ ಭರಾಟೆಯಲ್ಲಿ ಧರ್ಮ, ಧಾರ್ಮಿಕ ಆಚರಣೆಗಳು ಮರೆಯಾಗುತ್ತಿವೆ.

Team Udayavani, Dec 17, 2021, 6:03 PM IST

ಭಾವೈಕ್ಯತೆಯಿಂದ ಬಾಳಿದರೆ ಭಗವಂತನ ಸಾಕ್ಷಾತ್ಕಾರ

ಗಜೇಂದ್ರಗಡ: ಶರಣ, ಸಂತರ ವಾಣಿ ಬಂಗಾರ ತೂಗುವ ತಕ್ಕಡಿ ಇದ್ದಂತೆ. ಜೊತೆಗೆ ದೇವರಿಗೆ ಎಲ್ಲರೂ ಸಮಾನರು. ಈ ನಿಟ್ಟಿನಲ್ಲಿ ಅಹಂ ಬಿಟ್ಟು ಸಮಾಜದಲ್ಲಿ ಭಾವೈಕ್ಯತೆಯಿಂದ ಬಾಳಿದರೆ ಭಗವಂತನ ದಯೆಯ ಜೊತೆಗೆ ಸಾಕ್ಷಾತ್ಕಾರ ಪ್ರಾಪ್ತಿಯಾಗಲಿದೆ ಎಂದು ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಸಮೀಪದ ನಾಗರಸಕೊಪ್ಪ ಗ್ರಾಮದಲ್ಲಿ ಆಧ್ಯಾತ್ಮಿಕ ಪ್ರವಚನ ಹಾಗೂ ಅಡ್ಡಪಲ್ಲಕ್ಕಿ ಮಹೋತ್ಸವ ನೆರವೇರಿಸಿ ಆಶೀರ್ವಚನ ನೀಡಿದ ಅವರು, ಮನದಲ್ಲಿ ಭಗವಂತನನ್ನು ಸ್ಮರಿಸಿದರೆ ಸಾಕ್ಷಾತ್ಕಾರ ಆಗಲಿದೆ. ಭಗವಂತನನ್ನು ಭಕ್ತಿಯಿಂದ ಕಟ್ಟಿ ಹಾಕಬೇಕು. ಇದರಿಂದ ದೇವರ ಅನುಗ್ರಹಕ್ಕೆ ಭಕ್ತರು ಪಾತ್ರರಾಗುತ್ತಾರೆ. ಭಕ್ತರ ಇಷ್ಟಾರ್ಥ ಪೂರೈಸುವ ಭಾರತೀಯ ಸಂಸ್ಕೃತಿಗೆ ವಿಶ್ವದಲ್ಲಿ ಅತ್ಯಂತ ಮಹತ್ವದ ಸ್ಥಾನವಿದೆ ಎಂದರು.

ನಮ್ಮ ಸಂಸ್ಕೃತಿಯನ್ನು ಬೆಳೆಸಿಕೊಂಡು ಹೋಗುವಲ್ಲಿ ಎಲ್ಲರ ಕರ್ತವ್ಯ ಮುಖ್ಯವಾಗಿದೆ. ನಾಡಿನ ಗುಡಿ, ಗೋಪುರಗಳಿಗೆ ವಿಶೇಷ ಸ್ಥಾನ ಮತ್ತು ಭಾವನಾತ್ಮಕ ಸಂಬಂಧ ನೀಡಲಾಗಿದೆ. ದೇವರು ಮನುಷ್ಯನಿಗೆ ನೆಮ್ಮದಿ ನೀಡುವ ಶಕ್ತಿ. ದೇವಾಲಯಗಳು ಶ್ರದ್ಧೆ ನೀಡುವ ತಾಣಗಳಾಗಿವೆ. ಮಾನವನ ದೇಹವನ್ನು ದುಡಿಮೆಗೆ, ಮನಸ್ಸು ಭಗವಂತನಿಗೆ ಅರ್ಪಿಸಿ ಜೀವನದಲ್ಲಿ ಶ್ರೇಯಸ್ಸು ಕಾಣಬೇಕಾಗಿದೆ. ಅಂದಾಗ ಮಾತ್ರ ಧಾರ್ಮಿಕ ಚಿಂತನೆಗೆ ಅರ್ಥ ಬರುತ್ತದೆ ಎಂದರು.

ಜಾಗತಿಕ ಬದಲಾವಣೆಯ ಭರಾಟೆಯಲ್ಲಿ ಧರ್ಮ, ಧಾರ್ಮಿಕ ಆಚರಣೆಗಳು ಮರೆಯಾಗುತ್ತಿವೆ. ಇದು ಹೀಗೆಯೇ ಮುಂದುವರೆದರೆ ಮುಂದೊಂದು ದಿನ ಧರ್ಮಾಸಕ್ತಿ ಮಂಗಮಾಯವಾಗಿ ಶ್ರದ್ಧೆ, ನಂಬಿಕೆ, ಭಕ್ತಿ, ಗುರು ಹಿರಿಯರ ಆಶೀರ್ವಾದಗಳಿಗೆ ಬೆಲೆಯೇ ಇಲ್ಲದಂತಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಹಾವೇರಿ ಹುಕ್ಕೇರಿಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ದುರಾಸೆ ಮನುಷ್ಯನನ್ನು ಅಧಃಪತನಕ್ಕೆ ತಳ್ಳುತ್ತದೆ. ಕ್ರೋಧ ವ್ಯಕ್ತಿತ್ವಕ್ಕೆ ಮುಳುವಾಗುತ್ತದೆ. ನಮ್ಮ ಶ್ರೇಯಸ್ಸು ಆಗಬೇಕಾದರೆ ಕಾಮ, ಕ್ರೋಧಗಳು ನಾಶವಾಗಬೇಕು. ಅಂತರಂಗದಲ್ಲಿ ದೇವರನ್ನು ಪ್ರತಿಷ್ಠಾಪನೆ ಗೈದು ಆರಾ ಧಿಸಬೇಕು. ಪುರಾಣ ಪ್ರವಚನ ಕೇಳುವುದರಿಂದ ಕೆಟ್ಟ ವಿಚಾರಗಳು ದೂರವಾಗಿ ಒಳ್ಳೆಯ ಭಾವನೆಗಳು ಮನಸ್ಸಿನಲ್ಲಿ ಮೂಡುತ್ತವೆ. ಬಸವಾದಿ ಶರಣರು ತಮ್ಮ ಸ್ವಾರ್ಥ ಹಿತಾಸಕ್ತಿ ತ್ಯಾಗ ಮಾಡಿ ಆಧ್ಯಾತ್ಮಿಕ ತಳಹದಿ ಮೂಲಕ ಸಮಾಜದಲ್ಲಿನ ಕಲ್ಮಷ ತೊಳೆದು ವೈಚಾರಿಕತೆಯ ಬದುಕಿಗೆ ದಾರಿದೀಪವಾಗಿದ್ದಾರೆ. ಅಂತಹ ಮಹಾ ಮಹಿಮರ ಆದರ್ಶಗಳನ್ನು ಇಂದು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿದಾಗ ಧಾರ್ಮಿಕ ಆಚರಣೆಗಳು ಸಾರ್ಥಕಗೊಳ್ಳುತ್ತವೆ ಎಂದರು.

ಇದೇ ಸಂದರ್ಭದಲ್ಲಿ ನಿಡಗುಂದಿಕೊಪ್ಪ ಶಾಖಾ ಶಿವಯೋಗ ಮಂದಿರದ ಅಭಿನವ ಚನ್ನಬಸವ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಮಹೋತ್ಸವದ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಮಹಿಳೆಯರು ಕುಂಭದೊಂದಿಗೆ ಪಾಲ್ಗೊಂಡಿದ್ದರು. ಮೆರವಣಿಗೆಯುದ್ದಕ್ಕೂ ಸಕಲ ಮಂಗಲ ವಾದ್ಯಗಳು ಮೇಳೈಸಿದವು. ಭಕ್ತರ ಹರ್ಷೋದ್ಘಾರದ ಮಧ್ಯೆ ಅಡ್ಡಪಲ್ಲಕ್ಕಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಪ್ರವಚನಕಾರ ವೇ|ಮೂ| ಶ್ರೀ ಅನ್ನದಾನೇಶ್ವರ ಶಾಸ್ತ್ರಿಗಳು ಸೇರಿದಂತೆ ಗ್ರಾಮದ ಪ್ರಮುಖರು, ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.