ಸ್ನೇಹಾ ಸೊಸೈಟಿಯಲ್ಲಿ ಅವ್ಯವಹಾರ ಆರೋಪ


Team Udayavani, Dec 18, 2021, 10:54 AM IST

2work

ಕಲಬುರಗಿ: ತೃತೀಯ ಲಿಂಗಿಗಳ ಶ್ರೇಯೋಭಿವೃದ್ಧಿಯಾಗಿ ಸ್ಥಾಪಿತವಾಗಿರುವ ಸ್ನೇಹಾ ಸೊಸೈಟಿಯಲ್ಲಿ ಅವ್ಯವಹಾರ ನಡೆದಿದ್ದು, ಇದರ ಲೆಕ್ಕಪತ್ರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಮಂಗಳಮುಖೀಯರ ಗುರುಗಳಾದ ಸಂತೋಷಿಯಮ್ಮ ಹಾಗೂ ಪಿಂಕಿಯಮ್ಮ ಒತ್ತಾಯಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೊಸೈಟಿ ಅಧ್ಯಕ್ಷೆಯಾಗಿರುವ ಮುಸ್ಕಾನ್‌, ಕಾರ್ಯದರ್ಶಿ ಅಂಬಿಕಾ ಅನಕ್ಷರಸ್ಥರಾಗಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಸೊಸೈಟಿಯ ಪ್ರೋಗ್ರಾಮ ಮ್ಯಾನೇಜರ್‌ ಮೌನೇಶ ಕೋರವಾರ, ಪ್ರೊಜೆಕ್ಟ್ ಡೈರೆಕ್ಟರ್‌ ಮನಿಷಾ ಚವ್ಹಾಣ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.

ಕೊರೊನಾ ಮತ್ತು ಲಾಕ್‌ಡೌನ್‌ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳು ಸುಮಾರು ಒಂಭತ್ತು ಸಾವಿರ ಕಿಟ್‌ ಗಳನ್ನು ಕಲ್ಪಿಸಿವೆ. ಆದರೆ, ಈ ಕಿಟ್‌ಗಳನ್ನು ಯಾರಿಗೆ ಹಂಚಿಕೆ ಮಾಡಲಾಗಿದೆ ಎಂದು ಪ್ರಶ್ನಿಸಿದರು.

ಸೊಸೈಟಿಗೆ ಬಿಡುಗಡೆಯಾದ ಹಣ ಮತ್ತು ಕಿಟ್‌ಗಳ ಬಗ್ಗೆ ಪ್ರಶ್ನೆ ಮಾಡಿದ ಮಂಗಳಮುಖೀಯರ ಮೇಲೆ ಮೌನೇಶ ಕೋರವಾರ, ಮನಿಷಾ ಚವ್ಹಾಣ ಹಲ್ಲೆ ಮಾಡಿದ್ದಾರೆ. ಲೆಕ್ಕ ಕೊಡುತ್ತೇವೆ ಬನ್ನಿ ಎಂದು ಪೂಣಾದಿಂದ ಕರೆಸಿಕೊಂಡು ತಮ್ಮ ತಲೆಗೆ ಕಲ್ಲಿನಿಂದ ತಾವೇ ಹೊಡೆದುಕೊಂಡು ನಮ್ಮ ಮೇಲೆ ಕೇಸ್‌ ದಾಖಲಿಸಿದ್ದಾರೆ ಎಂದು ಅಳಲು ತೋಡಿಕೊಂಡರು.

ದಲಿತ ಸೇನೆ ಅಧ್ಯಕ್ಷ, ವಕೀಲ ಹಣಮಂತ ಯಳಸಂಗಿ ಮಾತನಾಡಿ, ಸ್ನೇಹಾ ಸೊಸೈಟಿ 2010ರಲ್ಲಿ ಸ್ಥಾಪನೆಯಾಗಿದೆ. 2,300ಕ್ಕೂ ಹೆಚ್ಚು ಮಂಗಳಮುಖೀಯರು ಇದರಲ್ಲಿ ಸದಸ್ಯರಿದ್ದಾರೆ. ಆದರೆ, ಇವರಿಗಾಗಿ ಹಣ ಖರ್ಚು ಮಾಡದೇ ದುರುಪಯೋಗ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ಮಾಡಬೇಕೆಂದು ಹೇಳಿದರು.

ಡಿಸಿ ಕಚೇರಿ ಎದುರು ಪ್ರತಿಭಟನೆ

ಮಂಗಳಮುಖೀಯರು ಎಂದರೆ ಸಮಾಜದಿಂದ ದೂರ ಇರುವ ಸಮುದಾಯ. ಆದರೆ, ಅದೇ ಸಮುದಾಯದ ಎಂಟು ಜನರ ಮೇಲೆ ಮನಿಷಾ ಚವ್ಹಾಣ ಮತ್ತು ಮೌನೇಶ ಕೂಡಿಕೊಂಡು ಅಟ್ರಾಸಿಟಿ ಕೇಸ್‌ ದಾಖಲಿಸಿದ್ದಾರೆ. ತಕ್ಷಣವೇ ಈ ಕೇಸ್‌ ವಾಪಸ್‌ ಪಡೆಯಬೇಕು. ಮಂಗಳವಾರದೊಳಗೆ ಸ್ನೇಹಾ ಸೊಸೈಟಿ ಹಣದ ಬಗ್ಗೆ ತನಿಖೆ ನಡೆಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳಮುಖೀಯರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ದಲಿತ ಸೇನೆ ಅಧ್ಯಕ್ಷ ಹಣಮಂತ ಯಳಸಂಗಿ ಎಚ್ಚರಿಸಿದ್ದಾರೆ.

ಸೊಸೈಟಿ ಅಧ್ಯಕ್ಷೆ ಮುಸ್ಕಾನ್‌, ಕಾರ್ಯದರ್ಶಿ ಅಂಬಿಕಾ, ಮಂಗಳಮುಖೀಯರಾದ ಭೀಮಾ, ಶೀಲಾ ಇನ್ನಿತರರು ಇದ್ದರು.

ಮನಿಷಾ ಚವ್ಹಾಣ ಬೇರೆ ಮಂಗಳಮುಖೀಯರಿಗೆ ಭಿಕ್ಷೆ ಬೇಡುವುದು ಬೇಡ ಎನ್ನುತ್ತಿದ್ದಳು. ಭಿಕ್ಷೆ ಬೇಡದೆ ಮಂಗಳಮುಖೀಯರು ಜೀವನ ಸಾಗಿಸುವುದು ಹೇಗೆ? ಆದರೆ, ಇದೇ ಮನಿಷಾ ಚವ್ಹಾಣ ಐಷಾರಾಮಿ ಜೀವನ ನಡೆಸುತ್ತಿದ್ದು, ಇದಕ್ಕೆ ಹಣ ಎಲ್ಲಿಂದ ಬರುತ್ತಿದೆ? -ಸಂತೋಷಿಯಮ್ಮ, ಮಂಗಳಮುಖೀಯರ ಗುರು

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.