ಗ್ರೂಪ್ ಡಿ ನೌಕರರ ಪ್ರಯಾಣ ಭತ್ಯೆ ಹೆಚ್ಚಿಸಿ
Team Udayavani, Dec 18, 2021, 12:32 PM IST
ಚಿತ್ತಾಪುರ: ಗ್ರೂಪ್ ಡಿ ನೌಕರರಿಗೆ ಪ್ರಸಕ್ತ ವರ್ಷದ ಪ್ರಯಾಣ ಭತ್ಯೆ ಹೆಚ್ಚಿಸಬೇಕು ಮತ್ತು ಕೋವಿಡ್ 19 ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗ್ರೂಪ್ ಡಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಶಿವರಾಜ ಕುಮಾರ ನೇತೃತ್ವದಲ್ಲಿ ಪದಾಧಿಕಾರಿಗಳು ತಾಲೂಕು ಆರೋಗ್ಯಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ನೌಕರರು ಪ್ರತಿ ವರ್ಷ ಪ್ರಯಾಣ ಭತ್ಯೆ ಪಡೆಯುತ್ತಿದ್ದಾರೆ. ಆದರೆ ಪ್ರಯಾಣ ಭತ್ಯೆ ನೀಡುವಲ್ಲಿ ಪ್ರತಿ ತಿಂಗಳಿಗೆ ಇಂತಿಷ್ಟೇ ಎಂದು ದರ ನಿಗದಿ ಮಾಡಿದ್ದಾರೆ. ನೌಕರರು ವಿಶೇಷವಾಗಿ ಈ ವರ್ಷ ಕೋವಿಡ್-19 ಸಂದರ್ಭದಲ್ಲಿ ಕೋವಿಡ್ ಲಸಿಕೆ ತರುವುದು. ಕೋವಿಡ್ ಮಾದರಿಗಳನ್ನು ಪ್ರಯೋಗಾಲಯಕ್ಕೆ ನೀಡುವುದು. ಹೀಗೆ ಅತಿ ಹೆಚ್ಚು ಪ್ರಯಾಣ ಮಾಡಿದ್ದಾರೆ. ಹೀಗಾಗಿ ಪ್ರತಿ ವರ್ಷದಂತೆ ಪ್ರಯಾಣ ಭತ್ಯೆಗೆ ಯಾವುದೇ ದರ ನಿಗದಿ ಮಾಡದೇ ಸರ್ಕಾರದ ನಿಯಮಾವಳಿಗಳಂತೆ ನೌಕರರು ಎಷ್ಟು ಪ್ರಯಾಣ ಮಾಡಿದ್ದಾರೋ ಅವರಿಗೆ ಸಂಪೂರ್ಣ ಪ್ರಯಾಣ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.
ಕೋವಿಡ್-19 ಪ್ರೋತ್ಸಾಹ ಧನ ನೀಡುವಂತೆ ಸರ್ಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಆದೇಶ ಹೊರಡಿಸಿದರೂ ಇನ್ನೂ ಕೆಲವು ನೌಕರರಿಗೆ ಪ್ರೋತ್ಸಾಹ ಧನ ಬಂದಿಲ್ಲ. ಆದ್ದರಿಂದ ಕೂಡಲೇ ನೌಕರರಿಗೆ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿದರು.
ತಾಲೂಕು ಘಟಕದ ಗೌರವಾಧ್ಯಕ್ಷ ಶಿವಾನಂದ, ಉಪಾಧ್ಯಕ್ಷ ತಿಪ್ಪಣ್ಣ, ಸಂಘಟನಾ ಕಾರ್ಯದರ್ಶಿಗಳಾದ ರಾಘವೇಂದ್ರ, ಶ್ರವಣಕುಮಾರ, ಜಂಟಿ ಕಾರ್ಯದರ್ಶಿಗಳಾದ ರಮೇಶ ಶಿವಶರಣ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಮಹಾದೇವ, ಅಕ್ಷಯಕುಮಾರ, ಸದಸ್ಯರಾದ ಖಾಜಾ, ಶಬ್ಬೀರ್, ಶರಣು, ಸುನೀಲ, ಶಿವಲಿಂಗಪ್ಪ, ನಾಗಪ್ಪಾ ಹೆಚ್, ಹಣಮಂತ, ರಂಜಿತಾ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
MUST WATCH
ಹೊಸ ಸೇರ್ಪಡೆ
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ
Udupi: ಪರಿಸರ ಸ್ನೇಹಿ ಸಿಎನ್ಜಿ ಬಸ್ ಸಂಚಾರ-ಸಿಎನ್ಜಿ ಲಭ್ಯತೆ ಸಮಸ್ಯೆ