ಅಮೇಥಿಯಲ್ಲಿ ಜನ ಜಾಗರಣ ಅಭಿಯಾನ: ಪ್ರಧಾನಿ ವಿರುದ್ಧ ರಾಹುಲ್ ಆಕ್ರೋಶ
Team Udayavani, Dec 18, 2021, 3:06 PM IST
ಅಮೇಥಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಪ್ರತಿನಿಧಿಸುತ್ತಿದ್ದ ಅಮೇಥಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಅವರು ಸಹೋದರಿ ಪ್ರಿಯಾಂಕಗಾಂಧಿ ಅವರೊಂದಿಗೆ ಅಮೇಥಿಯಲ್ಲಿ ‘ಜನ್ ಜಾಗರಣ ಅಭಿಯಾನ’ ಪಾದಯಾತ್ರೆಗೆ ಚಾಲನೆ ನೀಡಿ ಬಿಜೆಪಿ ಸರಕಾರದ ವಿರುದ್ಧ ಕಿಡಿ ಕಾರಿದರು. ಸರಕಾರ ಯಾರಿಗಾಗಿ ಕೆಲಸ ಮಾಡುತ್ತಿದೆ? ನೋಟು ಅಮಾನ್ಯೀಕರಣ, ಜಿಎಸ್ಟಿ, ಕೃಷಿ ಕಾನೂನುಗಳು ಸಾಮಾನ್ಯ ಜನರಿಗೆ ಪ್ರಯೋಜನವನ್ನು ನೀಡಿದೆಯೇ ಎಂದು ಪ್ರಶ್ನಿಸಿದರು.
ಪ್ರಧಾನ ಮಂತ್ರಿಯವರು ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ಮಧ್ಯಮ ವರ್ಗದ ಜನರು ಮತ್ತು ಬಡವರ ಮೇಲೆ ಕೆಟ್ಟದಾಗಿ ಪರಿಣಾಮ ಬೀರಿತು. ಇದು ದೊಡ್ಡ ಪ್ರಮಾಣದ ನಿರುದ್ಯೋಗಕ್ಕೂ ಕಾರಣವಾಯಿತು. ನೋಟು ಅಮಾನ್ಯೀಕರಣ, ತಪ್ಪಾಗಿ ಸೂಚಿಸಲಾದ ಜಿಎಸ್ಟಿ, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯ ಮಾಡದಿರುವುದು ಭಾರತದಲ್ಲಿ ನಿರುದ್ಯೋಗಕ್ಕೆ ಪ್ರಮುಖ ಕಾರಣ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದರು.
ಅಮೇಥಿಯ ಜನರ ಪ್ರೀತಿ, ಉತ್ಸಾಹ ಅಗಾಧವಾಗಿದ್ದು, ಜನರ ಹಿತ ಕಾಪಾಡಲು ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ