ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಂಕಣ ತೊಡಿ

ಕೇವಲ ದುಡ್ಡು, ಜಾತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮಯಷ್ಟೇ.

Team Udayavani, Dec 18, 2021, 5:58 PM IST

ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಂಕಣ ತೊಡಿ

ಗದಗ: ಈ ಬಾರಿ ನಗರಸಭೆ ಚುನಾವಣೆ ಮುಂಬರುವ ವಿಧಾನಸಭಾ ಚುನಾವಣೆಗೆ ಭದ್ರ ಬುನಾದಿಯಾಗಲಿದೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮ ವಹಿಸಿದರೆ ಗದಗ-ಬೆಟಗೇರಿ ನಗರಸಭೆ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಫಲಿತಾಂಶ ಬರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಭವಿಷ್ಯ ನುಡಿದರು.

ಇಲ್ಲಿನ ವಿಠಲರೂಢಾ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ನಗರಸಭೆ ಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿಗಳ ಸಭೆಯನ್ನುದ್ದೇಶಿಸಿ ಸಚಿವರು ಮಾತನಾಡಿದರು. ಕಳೆದ ಬಾರಿ ನಮ್ಮ ಸ್ವಲ್ಪ ತಪ್ಪಿನಿಂದ ವಿಧಾನಸಭಾ ಚುನಾವಣೆಯಲ್ಲಿ ಗದಗ ಮತಕ್ಷೇತ್ರ ಬಿಜೆಪಿ ಕೈತಪ್ಪಿದೆ.

ಮತ್ತೂಮ್ಮೆ ಅಂತಹ ಪರಿಸ್ಥಿ ತಿ ಮರುಕಳಿಸಬಾರದು ಎಂದು ಈ ಬಾರಿ ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು, ಎಲ್ಲ ಹಂತದಲ್ಲಿ ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ನಮ್ಮ ಸ್ವಪ್ರತಿಷ್ಠೆ ಬದಿಗಿಟ್ಟು ಅಭ್ಯರ್ಥಿಗಳ ಆಯ್ಕೆ ಸಮಿತಿಯ ಒಕ್ಕೊರಲ ಅಭಿಪ್ರಾಯಕ್ಕೆ ತಲೆ ಬಾಗಿದ್ದೇನೆ. ಪಕ್ಷದ ಗೆಲುವಿಗಾಗಿ ಅಭ್ಯರ್ಥಿಗಳ ಗೆಲುವಿಗೆ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕೆಂದು ಕರೆ ನೀಡಿದರು.

ಅವಳಿ ನಗರದ ಅಭಿವೃದ್ಧಿಗೆ ಆರಂಭಿಕ ಹಂತದಲ್ಲಿ ಸುಮಾರು 50 ಕೋಟಿ ರೂ. ಒದಗಿಸಿಕೊಡುವುದಾಗಿ ಭರವಸೆ ನೀಡಿದ ಅವರು, ಅಭಿವೃದ್ಧಿಯಿಂದ ವಂಚಿತವಾಗಿರುವ ಅವಳಿ ನಗರದಲ್ಲಿ ಅಭಿವೃದ್ಧಿಗೆ ಮರು ಚಾಲನೆ ನೀಡುತ್ತೇವೆ. ಜಿಡ್ಡುಗಟ್ಟಿರುವ ಆಡಳಿತವನ್ನು ಚುರುಕುಗೊಳಿಸಲಾಗುವುದು. ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಲಾಗುವುದು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕು ಎಂದು ಹೇಳಿದರು.

ಬಿಜೆಪಿ ಯುವ ಮುಖಂಡರಾದ ಅನಿಲ್‌ ಮೆಣಸಿನಕಾಯಿ ಮಾತನಾಡಿ, ಈಗಾಗಲೇ ಗದಗ-ಬೆಟಗೇರಿಯ ಎಲ್ಲ 35 ವಾರ್ಡ್‌ಗಳಲ್ಲಿ ಬಿಜೆಪಿ ಅಲೆ ಶುರುವಾಗಿದೆ. ಈಗಾಗಲೇ ಕೆಲ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ಗೆ ಅಭ್ಯರ್ಥಿಗಳು ದೊರಕಿಲ್ಲ. ಕೆಲವೆಡೆ ನಮ್ಮವರನ್ನೇ ಕರೆದೊಯ್ದು ಸ್ಪರ್ಧೆಗಿಳಿಸಿದ್ದಾರೆ. ಆದರೂ, ಈ ಬಾರಿ ಬಿಜೆಪಿಯಿಂದ ಕನಿಷ್ಟ 25 ಜನ ಅಭ್ಯರ್ಥಿಗಳು ಜಯ ಸಾ ಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಸರಕಾರದಲ್ಲಿ ಮಂಜೂರಾಗಿದ್ದ ತುಂಗಭದ್ರಾ 2ನೇ ಹಂತದ ಕುಡಿಯುವ ನೀರಿನ ಯೋಜನೆ(24*7)ಯನ್ನು ಉದ್ಘಾಟಿಸಿರುವ ಶಾಸಕ ಎಚ್‌.ಕೆ.ಪಾಟೀಲ, ಯೋಜನೆಯನ್ನು ತಮ್ಮದೆಂದು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಗರದ ಒಳಚರಂಡಿ ಮತ್ತು ರಸ್ತೆಗಳು ಹಾಳಾಗಿದ್ದು, ಕಾಂಗ್ರೆಸ್‌ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ ಎಂದು ಹೇಳಿದರು.

ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಕೇವಲ ದುಡ್ಡು, ಜಾತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮಯಷ್ಟೇ. ಮತದಾರರೊಂದಿಗಿನ ಸ್ನೇಹ, ಬಾಂಧವ್ಯವೇ ಕೈಹಿಡಿಯಲಿದೆ. ಎಲ್ಲ ಅಭ್ಯರ್ಥಿ ಗಳು ಕನಿಷ್ಟ 4-5 ಬಾರಿ ಮತದಾರರ ಮನೆ ಬಾಗಿಲಿಗೆ ತೆರಳಬೇಕು. ತಮ್ಮ ಅಭಿವೃದ್ಧಿಯ ದೃಷ್ಟಿಕೋನ ವಿವರಿಸಿ ಮತ ಪಡೆದುಕೊಳ್ಳಬೇಕು. ಇದೇ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದವರಿಗೆ ಹಿರಿಯರು ಮಾರ್ಗದರ್ಶನ ಮಾಡಬೇಕು. ಪಕ್ಷದ ಕಾರ್ಯಕರ್ತರು
ತಾವೇ ಅಭ್ಯರ್ಥಿ ಎಂದು ಭಾವಿಸಿ ಚುನಾವಣೆಯಲ್ಲಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ್‌ ಮಾಳಶೆಟ್ಟಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಬಿಜೆಪಿಯು ಮೂರು ಭಾಗಗಳಾಗಿ ಹಂಚಿಹೋಗಿತ್ತು. ಇದರ ಲಾಭ ಪಡೆದುಕೊಂಡು ಕಾಂಗ್ರೆಸ್‌ ಅಧಿಕಾರಕ್ಕೆ ಏರಿತ್ತು. ಆದರೆ, ಈ ಬಾರಿ ಬಿಜೆಪಿಯ ಎಲ್ಲ ನಾಯಕರು ಒಂದಾಗಿದ್ದು, ಕಾಂಗ್ರೆಸ್‌ ಪಕ್ಷದಲ್ಲಿ ನಡುಕ ಹುಟ್ಟಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಟಿಕೆಟ್‌ ಸಿಗದೇ ಪಕ್ಷೇತರರಾಗಿ ಸ್ಪ ರ್ಧಿಸಿದ್ದ ಶಿವಲೀಲಾ ಓದುಮಠ ಅವರು ಕಣದಿಂದ ಹಿಂದೆ ಸರಿದು, ಬಿಜೆಪಿ ಗೆಲುವಿಗೆ
ಶ್ರಮಿಸುವುದಾಗಿ ಘೋಷಿಸಿದರು.

ವೇದಿಕೆ ಮೇಲೆ ವಿಧಾನಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ್‌, ಬಿಜೆಪಿ ಶಹರ ಅಧ್ಯಕ್ಷ ಮಹಾಂತೇಶ್‌ ನಾಲವಾಡ್‌, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಸಂಗಮೇಶ್‌ ದುಂದೂರ, ಮಾಜಿ ಜಿಲ್ಲಾಧ್ಯಕ್ಷ ಎಂ.ಎಸ್‌. ಕರಿಗೌಡ್ರ, ವಿಜಯಲಕ್ಷ್ಮೀ ಮಾನ್ವಿ, ಕಾಂತಿಲಾಲ್‌ ಬನಸಾಲಿ, ಶಾರದಾ ಹಿರೇಮಠ, ಕಾಂತಿಲಾಲ್‌ ಬನ್ಸಾಲಿ ಉಪಸ್ಥಿತರಿದ್ದರು.

ಅವಳಿ ನಗರದ 35 ವಾರ್ಡ್‌ಗಳಲ್ಲೂ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿತ್ತು. ಅವರೆಲ್ಲರೂ ಸ್ಪರ್ಧೆಗೆ ಅರ್ಹರಾಗಿದ್ದರೂ, ಅಳೆದೂ ತೂಗಿ ಟಿಕೆಟ್‌ ನೀಡಲಾಗಿದೆ. ಆದರೆ, ಪಕ್ಷದ ಟಿಕೆಟ್‌ ದೊರೆಯದ ಕಾರಣ ಅಸಮಾಧಾನಗೊಂಡು ಕೆಲವೊಬ್ಬರು ಬಂಡಾಯ ಅಭ್ಯರ್ಥಿಗಳಾಗಿದ್ದಾರೆ. ಅವರು ತಮ್ಮ ವಾರ್ಡ್‌ನಲ್ಲಿ ಕಾಂಗ್ರೆಸ್‌ ಬರಬೇಕೆಂದರೆ, ಸ್ವತಂತ್ರ ಅಭ್ಯರ್ಥಿಯಾಗಿ ಮುಂದುವರಿಯಲಿ. ಬಿಜೆಪಿಗೆ ಗೆಲುವಾಗಲಿ ಎನ್ನುವುದಾದರೆ ನಾಳೆ ನಾಮಪತ್ರ ಹಿಂಪಡೆಯಬೇಕು. ತಮ್ಮಲ್ಲಿರುವ ಭಿನ್ನಮತ, ಅಸಮಾಧಾನ ಬದಿಗೊತ್ತಿ ಪಕ್ಷದ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ.
ಸಿ.ಸಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.