ಸಂಚಾರ ನಿಯಮ ಪಾಲಿಸಿ ಜೀವ ಉಳಿಸಿಕೊಳ್ಳಿ


Team Udayavani, Dec 18, 2021, 6:08 PM IST

30police

ತಾಳಿಕೋಟೆ: ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ತ ಪಟ್ಟಣದ ಪೊಲೀಸ್‌ ಠಾಣೆ ಪಿಎಸೈ ವಿನೋದ ದೊಡಮನಿ ನೇತೃತ್ವದಲ್ಲಿ ಪೊಲೀಸ್‌ ಸಿಬ್ಬಂದಿ ವಾಹನ ಸವಾರರಿಗೆ ಹೆಲ್ಮೆಟ್‌ ಧರಿಸುವುದು ಒಳಗೊಂಡಂತೆ ಅಪಘಾತ ಸಮಯದಲ್ಲಿ ಪ್ರಾಣ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು.

ಪಟ್ಟಣದ ವಿಜಯಪುರ ವೃತ್ತದಲ್ಲಿ ಹೆಲ್ಮೆಟ್‌ ಇಲ್ಲದೇ ಸಂಚರಿಸುತ್ತಿದ್ದ ಬೈಕ್‌ ಸವಾರರನ್ನು ತಡೆದ ಪೊಲೀಸರು ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಅಪಘಾತ ಸಂದರ್ಭದಲ್ಲಿ ನಿಮ್ಮ ಜೀವವನ್ನು ರಕ್ಷಿಸುವಂತಹ ಕವಚವಾಗಿದೆ. ನಾಲ್ಕು ಚಕ್ರದ ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸೀಟ್‌ ಬೆಲ್ಟ್ ಹಾಕಿಕೊಳ್ಳಬೇಕು. ಯಾವುದೇ ವಾಹನ ಚಲಾಯಿಸುತ್ತಿರಲಿ ಆ ಸಮಯದಲ್ಲಿ ಮದ್ಯಸೇವನೆ ಮಾಡಿರಬಾರದು. ಮದ್ಯಸೇವನೆಯಿಂದ ಅನೇಕ ಅಪಘಾತಗಳು ನಡೆದು ಸಾಕಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ರೀತಿ ಸಂಚಾರ ಅಪರಾಧವಾಗಿದ್ದು ದಂಡದ ಜೊತೆಗೆ ಜೈಲು ಶಿಕ್ಷೆಯನ್ನೂ ಕೂಡಾ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರಲ್ಲದೇ ರಸ್ತೆ ನಿಯಮ ಪಾಲನೆ ಕುರಿತು ಮತ್ತು ಉಲ್ಲಂಘನೆಯಾದಲ್ಲಿ ಪೊಲೀಸ್‌ ಇಲಾಖೆಯಿಂದ ದಂಡ ವಿ ಧಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್‌ ಸಿಬ್ಬಂದಿಗಳೆಲ್ಲರೂ ಹೆಲ್ಮೆಟ್‌ ಧರಿಸಿ ಜೀವ ರಕ್ಷಿಸಿಕೊಳ್ಳಿ ಎಂಬ ಘೋಷವಾಕ್ಯದೊಂದಿಗೆ ಭಿತ್ತಿ ಚಿತ್ರಗಳ ಮೂಲಕ ಸಂಚರಿಸಿದರು. ಜಾಗೃತಿ ಕಾರ್ಯಕ್ರಮದಲ್ಲಿ ಎಎಸೈ ಅಶೋಕ ನಾಯ್ಕೊಡಿ, ಎಸ್‌.ಎಂ. ಪಡಶೆಟ್ಟಿ, ಗಿರೀಶ ಚಲವಾದಿ, ಯಲ್ಲಪ್ಪ ಹದಗಲ್ಲ, ಸಂಜೀವ ದೊಡಮನಿ, ವೀರಣ್ಣ ಅಜ್ಜನವರ, ಹುಸೇನ್‌ ಕುಂಟೋಜಿ, ರಮೇಶ ರೇವೂರ, ಎಂ.ಕೆ. ಡೋಣೂರ ಸೇರಿದಂತೆ ಇತರರು ಭಾಗವಹಿಸಿದ್ದರು.

ಹೆಲ್ಮೆಟ್‌ ಧರಿಸದೇ, ಲೈಸನ್ಸ್‌ ಇಲ್ಲದೆ ಅಥವಾ ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದು ಅಪರಾಧ. ಹೆಲ್ಮೆಟ್‌ ಧರಿಸುವುದರಿಂದ, ದೊಡ್ಡ ವಾಹನಗಳಲ್ಲಿ ಬೆಲ್ಟ್ ಧರಿಸದೇ ಸಂಚರಿಸುವುದರಿಂದ ಜೀವಕ್ಕೆ ಕುತ್ತು ಬರುವದು ಖಚಿತ. ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ರಸ್ತೆ ನಿಯಮ ಪಾಲಿಸಿಕೊಂಡು ಸಂಚರಿಸಬೇಕು. -ವಿನೋದ ದೊಡಮನಿ ಪಿಎಸೈ, ತಾಳಿಕೋಟೆ ಠಾಣೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.