ಬೆಳಗಾವಿಯಲ್ಲಿ ಬೆಂಕಿ ಹಚ್ಚುವ ಕೆಲಸ ತೀವ್ರವಾಗಿ ಖಂಡಿಸುತ್ತೇನೆ :ಸಚಿವ ಕತ್ತಿ


Team Udayavani, Dec 18, 2021, 7:00 PM IST

1-dsad

ಬೆಳಗಾವಿ: ಜಿಲ್ಲೆಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಬಹು ವರ್ಷಗಳಿಂದ ಅನ್ಯೋನ್ಯವಾಗಿ ಜೀವನ ಸಾಗಿಸುತ್ತಿದ್ದಾರೆ, ಕೆಲವು ಕಿಡಗೇಡಿಗಳು ಮರಾಠಿ ಮತ್ತು ಕನ್ನಡ ಭಾಷಿಕರ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ, ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಅರಣ್ಯ ಹಾಗೂ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

ಕೊರೊನಾ ಮಹಾಮಾರಿಯಿಂದ ಮೃತಪಟ್ಟ ಹುಕ್ಕೇರಿ ತಾಲೂಕಿನ 41 ಕುಟುಂಬಸ್ಥರಿಗೆ ತಲಾ ಒಂದು ಲಕ್ಷ ರೂಪಾಯಿ ಚೆಕ್ ವಿತರಿಸಿ ಹುಕ್ಕೇರಿ ಬಿಎಲ್‌ಡಿ ಬ್ಯಾಂಕಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯ ಸರ್ಕಾರದ ವತಿಯಿಂದ ಕೊರೊನಾದಿಂದ ಮೃತ ಪಟ್ಟ ಹುಕ್ಕೇರಿ ತಾಲೂಕಿನ 41 ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ಚೆಕ್ ವಿತರಿಸಲಾಗಿದೆ, ಕೇಂದ್ರ ಸರ್ಕಾರದಿಂದ ಇನ್ನೂ 50 ಸಾವಿರ ರೂಪಾಯಿ ಕೆಲವೆ ದಿನಗಳಲ್ಲಿ ಮೃತ ಪಟ್ಟವರ ಕುಟುಂಬಸ್ಥರ ಖಾತೆಗೆ ಜಮೆ ಆಗಲಿದೆ ಎಂದು ತಿಳಿಸಿದರು.

ಬಿ.ಪಿ.ಎಲ್ ಕಾರ್ಡ್ ದಾರರು ಯಾರಾದರೂ ಕೊರೊನಾದಿಂದ ಮೃತ ಪಟ್ಟಿದ್ದರೆ ಅವರ ಕುಟುಂಬಸ್ಥರು, ಸೂಕ್ತ ದಾಖಲೆ ಒದಗಿಸಿದರೆ ಅವರಿಗೂ ಕೂಡ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಬೆಳಗಾವಿಯಲ್ಲಿ ನಮ್ಮ ಸರ್ಕಾರ ಉತ್ತಮವಾಗಿ ಅಧಿವೇಶನ ನಡೆಸುತ್ತಿದೆ, ಅದನ್ನು ನೋಡಲಾಗದೆ ಕೆಲವು ಪುಂಡರು ಈ ಕೃತ್ಯ ಎಸಗಿದ್ದಾರೆ. ಈಗಾಗಲೇ ನಮ್ಮ ಪೋಲೀಸರು ಕೆಲವು ಪುಂಡರನ್ನು ಬಂಧಿಸಿದ್ದಾರೆ. ಇನ್ನುಳಿದವರನ್ನು ಕೂಡ ಆದಷ್ಟು ಬೇಗ ಬಂಧಿಸುವ ವಿಶ್ವಾಸ ಇದೆ ಎಂದರು.

ಉತ್ತರ ಕರ್ನಾಟಕ ಭಾಗದವರು ಇಂದು ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ, ಕೆಲವರ ವಿರೋಧದ ನಡುವೆಯೂ ನಮ್ಮ ಭಾಗದಲ್ಲಿ ಅಧಿವೇಶನ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಆಗಬೇಕು ಎಂಬುವುದು ಮುಖ್ಯಮಂತ್ರಿ ಸೇರಿದಂತೆ ನಮ್ಮ ಆಶಯ ಆಗಿದೆ. ಆದರೆ ಕಾಂಗ್ರೆಸ್ ಪಕ್ಷದವರು ಕೇವಲ ಗದ್ದಲ ಗಲಾಟೆಗೆ ಸದನವನ್ನ ಸಿಮಿತಗೊಳಿಸಿ, ಮುಖ್ಯಮಂತ್ರಿಗಳ ಉತ್ತರ ಕೇಳುವ ಇಚ್ಛಾಶಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಸವರಾಜ್ ಬೊಮ್ಮಾಯಿಯವರುಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. 2023ರ ಚುನಾವಣೆಯನ್ನು ಬೋಮ್ಮಾಯಿಯವರ ನೇತೃತ್ವದಲ್ಲೆ ಎದುರಿಸಿ, ರಾಜ್ಯದಲ್ಲಿ 150 ಸೀಟು ಗೆಲ್ಲುತ್ತೆವೆ ಎಂದು ಸಚಿವ ಉಮೇಶ್ ಕತ್ತಿ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.