‘ಜನನ್ಯ’ ಮಗುವಿನ ಆರೈಕೆ ಕೊಠಡಿ ಲೋಕಾರ್ಪಣೆ


Team Udayavani, Dec 18, 2021, 7:26 PM IST

Untitled-1

ಅಂಕೋಲಾ : ರಾಷ್ಟ್ರೀಯ ಹೆದ್ದಾರಿ 66 ರ ಬೆಲೇಕೇರಿ ಟೋಲಪ್ಲಾಜಾ ಬಳಿ ಐ.ಆರ್.ಬಿ ಕಂಪನಿಯು ನಿರ್ಮಿಸಿದ ಜನನ್ಯ ಮಗುವಿನ ಆರೈಕೆ ಕೊಠಡಿಯನ್ನು ಪದ್ಮಶ್ರೀ ತುಳಸೀ ಗೌಡ ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮ ಅದ್ಯಕ್ಷತೆ ವಹಿಸಿದ ಉ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾತನಾಡಿ ಮಗುವಿನೊಂದಿಗೆ ಪ್ರಯಾಣ ಮಾಡುವಾಗ  ಮಹಿಳೆಯರು ಮಗುವಿಗೆ ಹಾಲು ಕುಡಿಸಲು ಕಷ್ಟಪಡುತ್ತಿರುವ ಕಂಡಿದ್ದೇನೆ ಅಲ್ಲದೆ ನನ್ನ ಧರ್ಮಪತ್ನಿ ಅಶ್ವಿನಿ ಕೂಡ ಈ ವಿಷಯದ ಬಗ್ಗೆ ಹೆಚ್ಚು ಉತ್ಸಾಹವನ್ನು ತೋರಿಸಿದ್ದು ಅವರ ಪ್ರೇರಣೆಯಂತೆ ನಾನು ಇತ್ತೀಚೆಗೆ ಐ.ಆರ್.ಬಿ ಕಂಪನಿಯ ಕಾರ್ಯಕ್ರಮವೊಂದಕ್ಕೆ ಬಂದಾಗ ಪ್ರವಾಸೀ ಮಹಿಳೆಯರಿಗೆ ಮಗುವಿಗೆ ಹಾಲುಣಿಸಲು ಪ್ರಶಸ್ತವಾದ ಅತ್ಯಾಧುನಿಕ ಸೌಕರ್ಯಗಳುಳ್ಳ ಒಂದು ಕೊಠಡಿ ನಿರ್ಮಿಸುವ ಬಗ್ಗೆ ತಿಳಿಸಿದ್ದೆ ಕಂಪನಿಯವರು ತ್ವರಿತವಾಗಿ ಕಟ್ಟಡವನ್ನು ನಿರ್ಮಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ ಇದರಿಂದ ಬಹಳಷ್ಟು ಮಹಿಳೆಯರಿಗೆ ಪ್ರಯೋಜನವಾಗಲಿದೆ. ಮುಂದುವರಿದ ರಾಷ್ಟ್ರಗಳಲ್ಲಿ ಮಾತ್ರ ಇಂತಹ ಯೋಜನೆಗಳಿದ್ದು ನಮ್ಮ ದೇಶದಲಗಲಿಯೂ ಎಲ್ಲ ಕಡೆ ಸಿಗುವಂತಾಗಲಿ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೂ ಈ ವಿಷಯದ ಬಗ್ಗೆ ಮಾತನಾಡಿದ್ದೇನೆ ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೆಕರ ಮಾತನಾಡಿ ಜಿಲ್ಲಾಧಿಕಾರಿಯವರ ಆಶಯದಂತೆ ಐ.ಆರ್.ಬಿ ಕಂಪನಿಯವರು ಅತ್ಯಂತ ಸುಸಜ್ಜಿತ, ಸುರಕ್ಷಿತ ಕಟ್ಟಡವನ್ನು ನಿರ್ಮಿಸಿದ್ದು ಅತ್ಯಾಧುನಿಕ ವ್ಯವಸ್ಥೆಗಳನ್ನೂ ಕಲ್ಪಿಸಿದ್ದು ಮಹಿಳೆಯರು ಖುಷಿ ಪಡುವ ವಿಚಾರ ಇದು ತುಂಬ ಪ್ರಯೋಜನಕಾರಿಯಾಗಿದೆ. ಮಹಿಳೆಯರ ಕಷ್ಟಕ್ಕೆ ಸ್ಪಂದಿಸುವ ಜಿಲ್ಲಾಧಿಕಾರಿಯವರ ಈ ಯೋಜನೆ ಎಲ್ಲಡೆಯೂ ಸಿಗುವಂತಾಗಲಿ ಎಂದರು. ಕೊಠಡಿಯನ್ನು ಉದ್ಘಾಟಿಸಿದ ಪದ್ಮಶ್ರೀ ತುಳಸೀ ಗೌಡ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಐ.ಆರ್.ಬಿ ಕಂಪನಿಯ ಸಿ.ಜಿ ಮೋಹನದಾಸ, ಟೋಲಗೇಟ್ ಜಿ.ಎಮ್ ವಿವೇಕ ಗಡೇಕರ , ಸಿ.ಪಿ.ಐ. ಸಂತೋಷ ಶೆಟ್ಟಿ, ಅರುಣ ಹರಕಡೆ,  ಟೋಲ್ ಗೇಟ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರಾ.ಹೆ ಸಾರ್ವಜನಿಕ ಹಾಗೂ ಖಾಸಗೀ ವಾಹನಗಳಲ್ಲಿ ಪ್ರಯಾಣಿಸುವಾಗ ಅನೇಕ ಮಹಿಳೆಯರಿಗೆ ಮಗುವಿಗೆ ಹಾಲುಣಿಸಲು ಸಮಸ್ಯೆಗಳು ಎದುರಾಗುತ್ತವೆ ಚಲಿಸುವ ವಾಹನದಲ್ಲಿ ಅಥವಾ ಸಾರ್ವಜನಿಕರೆದುರು ಹಾಲುಣಿಸಲು ಮುಜುಗರದಿಂದ ಕಷ್ಟಪಡುವದರಿಂದ ಮಾನ್ಯ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರ ಸೂಚನೆಯಂತೆ ಐ.ಆರ್.ಬಿ ಕಂಪನಿ ಟೋಲಪ್ಲಾಜಾದಲ್ಲಿ ಜನನ್ಯ ಮಗುವಿನ ಆರೈಕೆ ಕೊಠಡಿಯನ್ನು ನಿರ್ಮಿಸಿದೆ ಈ ಕಟ್ಟಡವು ಪ್ರಶಾಂತವಾದ ನಾಲ್ಕೈದು ಪ್ರತ್ಯೇಕ ಕೊಠಡಿಗಳನ್ನು ಹೊಂದಿದ್ದು ಅಲ್ಲಿ ಗಾಳಿ, ಬೆಳಕು, ಶೌಚಾಲಯ, ಕುಡಿಯುವ ನೀರು, ಮಗುವಿಗೆ ಮಲಗಿಸಲು ಬೆಡ್, ಹಾಗೂ ಕೆಲವು ಅವಶ್ಯಕ ವಸ್ತುಗಳನ್ನು ವ್ಯವಸ್ಥೆಗೊಳಿಸಲಾಗಿದೆ.

ಮುಂದಿನ ದಿನದಲ್ಲಿ ಹೆಚ್ಚು ಹೆಚ್ಚಾಗಿ ಕೆಎಸ್ಆರಟಿಸಿ ಬಸ್ ನಿಲ್ದಾಣ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ತಾಯಿ ಮಗುವಿಗೆ ಹಾಲುಣಿಸುವ ಕೊಠಡಿ ನಿರ್ಮಾಣ ಮಾಡುವ ಉದ್ದೇಶವಿದೆ . – ಜಿಲ್ಲಾಧಿಕಾರಿ ಮುಲೈ ಮುಗಿಲನ್

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.