ವೋಟರ್‌ ಐಡಿಗೆ ಆಧಾರ್‌ ಲಿಂಕ್‌ ಮಸೂದೆ ಇಂದು ಮಂಡನೆ?

23ಕ್ಕೆ ಮುಕ್ತಾಯ ವಾಗಲಿದೆ ಸಂಸತ್‌ ಚಳಿಗಾಲದ ಅಧಿವೇಶನ

Team Udayavani, Dec 20, 2021, 6:30 AM IST

ವೋಟರ್‌ ಐಡಿಗೆ ಆಧಾರ್‌ ಲಿಂಕ್‌ ಮಸೂದೆ ಇಂದು ಮಂಡನೆ?

ಹೊಸದಿಲ್ಲಿ: ಮತದಾರರ ಗುರುತಿನ ಚೀಟಿ ಮತ್ತು ಆಧಾರ್‌ ಅನ್ನು ಲಿಂಕ್‌ ಮಾಡುವ ಮಸೂದೆಯನ್ನು ಸೋಮವಾರ ಲೋಕಸಭೆ­ಯಲ್ಲಿ ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಹೆಣ್ಣುಮಕ್ಕಳ ವಿವಾಹ ವಯಸ್ಸು 18ರಿಂದ 21ಕ್ಕೆ ಪರಿಷ್ಕರಿಸುವ ಬಾಲ್ಯವಿವಾಹ ನಿಷೇಧ ಕಾಯ್ದೆಯನ್ನೂ ಲೋಕಸಭೆಯಲ್ಲಿ ಮಂಡಿಸಲು
ಸರಕಾ ರ ಮುಂದಾಗಿದೆ.

ಚುನಾವಣಾ ಕಾನೂನುಗಳು (ತಿದ್ದುಪಡಿ) ಮಸೂದೆ 2021 ಎಂಬ ಮಸೂದೆಗೆ ಇತ್ತೀಚೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡ ಲಾಗಿತ್ತು. ಮಸೂದೆಯ ಪ್ರಕಾರ “ಆಸಕ್ತಿ ಇರುವ ಮತದಾರರ ಗುರುತಿನ ಚೀಟಿಯನ್ನು ಆಧಾರ್‌ ಕಾರ್ಡ್‌ ಜತೆಗೆ ಲಿಂಕ್‌ ಮಾಡಿಸುವ ಅವಕಾಶ’ ಕಲ್ಪಿಸಲಾಗಿದೆ. ಅದಕ್ಕೆ ಪೂರಕವಾಗಿ 1950 ಮತ್ತು 1951ರಲ್ಲಿ ಜಾರಿ ಯಾಗಿರುವ ಜನಪ್ರಾತಿನಿಧ್ಯ ಕಾಯ್ದೆಗಳ ವಿವಿಧ ಸೆಕ್ಷನ್‌ಗಳಿಗೂ ತಿದ್ದುಪಡಿ ತರುವ ಅಂಶವನ್ನು ಈ ಮಸೂ ದೆಯಲ್ಲಿ ಪ್ರಸ್ತಾವಿಸ­ಲಾಗಿದೆ. ಈ ಉದ್ದೇಶಕ್ಕಾಗಿ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ 23ಕ್ಕೆ ತಿದ್ದುಪಡಿ ತರಬೇಕು. ವಿವಿಧ ಸ್ಥಳಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲು ಉದ್ದೇಶಿಸ ಲಾಗಿದೆ. ಆಧಾರ್‌ ಸಂಖ್ಯೆ ನೀಡದೆ ಇರುವವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಅಂಥವರಿಗೆ ಬೇರೆ ದಾಖಲೆ ನೀಡಲು ಅವಕಾಶವಿದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಪಿಂಕ್‌ಬಾಲ್‌ ಟೆಸ್ಟ್‌: ಮಂಕಾದ ಇಂಗ್ಲೆಂಡ್‌; ಅಜೇಯ ದಾಖಲೆಯತ್ತ ಆಸೀಸ್‌

ಇದರ ಜತೆಗೆ ಜ.1ರಿಂದ 18 ವರ್ಷ ಪೂರೈಸುವವರು ಇನ್ನು ವರ್ಷದಲ್ಲಿ 4 ಬಾರಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಅದರ ಪ್ರಕಾರ ಜ.1, ಎ.1, ಜು.1 ಮತ್ತು ಅ.1ರಂದು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅದಕ್ಕಾಗಿ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ 14ಕ್ಕೆ ತಿದ್ದುಪಡಿ ತರಲಾಗುತ್ತದೆ. ಸದ್ಯ ಇರುವ ನಿಯಮ ಪ್ರಕಾರ ಪ್ರತಿ ವರ್ಷ ಜ.1ರಂದು 18 ವರ್ಷ ಪೂರ್ತಿ ಗೊಳ್ಳಲಿರುವವ‌ರಿಗೆ ಮಾತ್ರ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಲು ಅವಕಾಶ ಇದೆ. ಇದಲ್ಲದೆ, ಕಾಯ್ದೆಯ ಸೆಕ್ಷನ್‌ 20ಕ್ಕೆ ತಿದ್ದುಪಡಿ ತರುವುದರಿಂದ ಲಿಂಗ ಸಮಾನತೆ ತರಲು ನೆರವಾಗಲಿದೆ. ಅಂದರೆ “ಪತ್ನಿ’ಯನ್ನು “ಸಂಗಾತಿ’ ಎಂದು ಬದಲಾಯಿ ಸಲು ಅನುಕೂಲವಾಗಲಿದೆ. ಸೇನೆ­ಯಲ್ಲಿ ಕಾರ್ಯನಿರ್ವಹಿ­ಸು­ತ್ತಿರುವ ವ್ಯಕ್ತಿಯ ಪತ್ನಿ ಸರ್ವಿಸ್‌ ವೋಟರ್‌ ಆಗಿ ಹೆಸರು ನೋಂದಾಯಿಸಲು ಅವಕಾಶ ಉಂಟು. ಆದರೆ ಮಹಿಳೆಯೇ ಸೇನಾಧಿ ಕಾರಿಯಾಗಿರುವ ಸಂದರ್ಭದಲ್ಲಿ ಆವರ ಪತಿಗೆ ಇಂಥ ಅವಕಾಶ ಇರುವುದಿಲ್ಲ. ಹೀಗಾಗಿ ಈ ಬದಲಾವಣೆಯಾಗಿದೆ. ಇದೇ ವೇಳೆ ಸಂಸತ್‌ನ ಅಧಿವೇಶನ ಗುರುವಾರ (ಡಿ.23) ಮುಕ್ತಾಯವಾಗಲಿದೆ.

29ರ ಬದಲು 6
ನ.29ರಂದು ಶುರುವಾಗಿದ್ದ ಅಧಿವೇಶನದಲ್ಲಿ ಸರ ಕಾ ರ 29 ಮಸೂ ದೆಗಳನ್ನು ಮಂಡಿಸಿ ಅಂಗೀಕರಿಸಲು ಮುಂದಾಗಿತ್ತು. ಲೋಕಸಭೆಯಲ್ಲಿ ಗದ್ದಲದ ಕಾರಣದಿಂದ ಕೇವಲ 6 ಮಸೂ ದೆಗಳಿಗೆ ಅನುಮೋದನೆ ಪಡೆದುಕೊಳ್ಳಲಾಗಿದೆ.

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.